By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    1 hour ago
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    1 hour ago
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    5 hours ago
    DC Office Chitradurga
    ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
    7 hours ago
    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    9 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    23 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    10 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    11 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

chitradurganews.com
Last updated: 3 October 2024 00:07
chitradurganews.com
2 years ago
Share
V.Somanna railway meating
ಅಧಿಕಾರಿಗಳ ಸಭೆ
SHARE

CHITRADURGA NEWS | 02 october 2024

ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಯೋಜನೆ 2027ರ ಜನವರಿಯೊಳಗೆ ಪೂರ್ಣಗೊಂಡು ಲೋಕಾರ್ಪಣೆಯಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತುಮಕೂರು-ಚಿತ್ರದುರ್ಗ-ದಾವಣಗೆರೆ ಹಾಗೂ ರಾಯದುರ್ಗ-ಪಾವಗಡ ನೂತನ ರೈಲ್ವೆ ಮಾರ್ಗಗಳ ಭೂಸ್ವಾಧೀನ ಪ್ರಕ್ರಿಯೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: ಕೆರೆಗಳಿಗೆ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ | ಶಾಸಕ ಎಂ.ಚಂದ್ರಪ್ಪ

2140 ಕೋಟಿ ರೂ. ವೆಚ್ಚದಲ್ಲಿ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯಕ್ಕೆ ಯೋಜನೆ ರೂಪಿಸಲಾಗಿದೆ. ಈ ಮೊದಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಶೇ.50-50ರ ಅನುಪಾತದಲ್ಲಿ ಯೋಜನೆ ಜಾರಿಗೊಳಿಸುವ ತೀರ್ಮಾನಿಸಲಾಗಿತ್ತು. ಇದನ್ನು ಬದಲಿಸಿ ರಾಜ್ಯ ಸರ್ಕಾರ ಭೂ ಸ್ವಾಧೀನ ವೆಚ್ಚವನ್ನು ಭರಿಸಿ, ಯೋಜನೆಗೆ ಭೂಮಿ ಹಸ್ತಾಂತರಿಸಿದರೆ ರೈಲ್ವೆ ಇಲಾಖೆಯಿಂದಲೇ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

Davangere, Chitradurga and Tumkur direct train route
ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ನೇರ ರೈಲು ಮಾರ್ಗ

ಎರಡು ನೂತನ ರೈಲ್ವೆ ಮಾರ್ಗಗಳಿಗೆ 2409 ಎಕರೆ ಭೂಮಿ ಅವಶ್ಯಕತೆ ಇದ್ದು, ಇದರಲ್ಲಿ ಕೇವಲ 280 ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ರೈಲ್ವೆ ಮಾರ್ಗಕ್ಕೆ ಈಗಾಗಲೆ 1100 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಪ್ರಧಾನಮಂತ್ರಿಗಳ ಸೂಚನೆಯಂತೆ 2027ರ ಜನವರಿ ವೇಳೆಗೆ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಮಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra modi)  ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಂದ ಲೋಕಾರ್ಪಣೆ ಮಾಡುವುದಾಗಿ ಸಚಿವ ವಿ.ಸೋಮಣ್ಣ ತಿಳಿಸಿದರು.

ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಆದ್ಯತೆ:

ಪ್ರಸ್ತುತ ನೂತನ ರೈಲ್ವೆ ಮಾರ್ಗಗಳನ್ನು ನಿರ್ಮಾಣ ಮಾಡುವ ವೇಳೆ ರೈಲ್ವೆ ಕೆಳ ಸೇತುವೆ ನಿರ್ಮಾಣದ ಬದಲಿಗೆ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವ ವಿ.ಸೋಮಣ್ಣ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ನೀರು ಸಂಗ್ರಹಗೊಂಡು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿರುವ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ರೈಲ್ವೆ ಕೆಳಸೇತುವೆ ದುರಸ್ತಿ ಕಾರ್ಯವನ್ನು ಸಂಸದ ಗೋವಿಂದ ಎಂ ಕಾರಜೋಳ ಅವರ ಸಲಹೆ ಪಡೆದು, ರೈಲ್ವೆ ಕೆಳ ಸೇತುವೆಗಳ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

156 ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ:

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 1211 ಎಕರೆ ಭೂ ಸ್ವಾಧೀನಕ್ಕೆ ರೈಲ್ವೆ ಇಲಾಖೆಯಿಂದ ಕೋರಲಾಗಿತ್ತು. ಇದುವರೆಗೆ 1026 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಭರಮಸಾಗರ-ಚಿತ್ರದುರ್ಗ, ಚಿತ್ರದುರ್ಗ-ಹಿರಿಯೂರು ಹಾಗೂ ಹಿರಿಯೂರು-ತಾವರಕೆರೆ ನಡುವೆ ಮೂರು ಹಂತದಲ್ಲಿ ಭೂಸ್ವಾಧೀನ ನಡೆಸಲಾಗುತ್ತಿದೆ. ಒಟ್ಟು 156 ಎಕರೆ ಭೂಸ್ವಾಧೀನದ ಅಂತಿಮ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಹಂತಗಳಲ್ಲಿ ಈಗಾಗಲೇ ರೈಲ್ವೆ ಇಲಾಖೆಯಿಂದ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ಮಾಹಿತಿ ನೀಡಿದರು.

ಬೆಳೆ ಕಟಾವಿನ ನಂತರ ಕೆಲಸ ಮಾಡಿ:

ನೇರ ರೈಲ್ವೆ ಮಾರ್ಗ ಯೋಜನೆಯ ದಾವಣಗೆರೆ- ಭರಮಸಾಗರ-ಚಿತ್ರದುರ್ಗ ಮಧ್ಯದಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ರೈತರು ಬೆಳೆಗಳನ್ನು ಬೆಳೆದಿದ್ದಾರೆ. ರೈತರಿಗೆ ತೊಂದರೆಯಾಗದಂತೆ ಇನ್ನೂ 1 ತಿಂಗಳ ಬಳಿಕ ಬೆಳೆ ಕಟಾವು ನಂತರ ರೈಲ್ವೆ ಕಾಮಗಾರಿಗಳನ್ನು ಆರಂಭಿಸುವಂತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈಲ್ವೇ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆ:

ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಕ್ರಾಂತಿಕಾರಕ ಬದಲಾವಣೆಗಳನ್ನು ತರಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಯಿಂದ ಹಾಗೂ ರೈಲ್ವೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ “ಕವಚ್” ರಕ್ಷಣಾ ವ್ಯವಸ್ಥೆಯನ್ನು ಪ್ರತಿ ರೈಲಿನಲ್ಲಿಯೂ ಅಳವಡಿಸಲು ಚಿಂತನೆ ನಡೆಸಲಾಗಿದೆ.

ಕವಚ್ ವ್ಯವಸ್ಥೆಯು ವಿಮಾನದ ಬ್ಲಾಕ್‍ಬಾಕ್ಸ್ ಮಾದರಿಯಲ್ಲಿ ರೈಲಿನ ಎಲ್ಲ ಚಲನವಲನಗಳನ್ನು ಸಂಗ್ರಹಿಸಲಿದೆ. ಇದರಿಂದ ಅಪಘಾತಗಳು ಉಂಟಾದ ಸಂದರ್ಭದಲ್ಲಿ ತಾಂತ್ರಿಕ ಲೋಪದೋಷಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.

ಇದನ್ನೂ ಓದಿ: ಮಾಡದಕೆರೆ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ದೇಶದ 24 ರಾಜ್ಯಗಳ 303 ಜಿಲ್ಲೆಗಳಲ್ಲಿ 103 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ರಾಜ್ಯದಲ್ಲಿ 10 ವಂದೇ ಭಾರತ್ ಕಾರ್ಯಾಚರಣೆ ನಡೆಸುತ್ತಿವೆ. ಕೇವಲ ಮೂರು ವರ್ಷಗಳಲ್ಲಿ ಈ ಸಾಧನೆ ಮಾಡಲಾಗಿದೆ. ರೈಲು ಸಂಚಾರದ ವೇಗ ಹೆಚ್ಚಳಕ್ಕೆ ಕ್ರಮಕೈಗೊಂಡಿದ್ದು, ಗಂಟೆಗೆ ಗರಿಷ್ಟ 160 ಕಿ.ಮೀ ವೇಗದ ಮಿತಿಯನ್ನು ತಲುಪಲು ಪ್ರಯತ್ನಿಸಲಾಗುತ್ತಿದೆ.

ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 49 ಸಾವಿರ ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ಮಾಡಲಾಗಿದೆ. ಶೇ.27 ರಷ್ಟು ಇದ್ದ ರೈಲ್ವೆ ಮಾರ್ಗಗಳ ವಿದ್ಯುದೀಕರಣವನ್ನು ಶೇ.98ರಷ್ಟು ಪ್ರಗತಿ ಸಾಧಿಸಲಾಗಿದೆ. ದೇಶದ ಎಲ್ಲ ಜಿಲ್ಲಾ ಕೇಂದ್ರಗಳ ರೈಲ್ವೆ ನಿಲ್ದಾಣಗಳನ್ನು ಏರ್‍ಪೋರ್ಟ್‍ಗಳ ಮಾದರಿಯಲ್ಲಿ ನವೀಕರಣಗೊಳಿಸಲಾಗುತ್ತಿದೆ.

ಕೇರಳ, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾದುಹೋಗಿರುವ 741 ಕಿ.ಮೀ ಉದ್ದದ ಕೊಂಕಣ ರೈಲ್ವೆಯನ್ನು ರೈಲ್ವೆ ಇಲಾಖೆಯ ನೇರ ಆಡಳಿತಕ್ಕೆ ಒಳಪಡಿಸಿ, ಹಳಿಗಳ ಡಬ್ಲಿಂಗ್ ಮಾಡುವ ಕಾರ್ಯಕ್ಕೆ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಒಲವು ತೋರಿದಿದ್ದಾರೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಅನುದಾನ | ಸಚಿವ ವಿ.ಸೋಮಣ್ಣ ಭರವಸೆ

ಉತ್ತರ ಪ್ರದೇಶದ ಪ್ರಯಾಗ್ ರಾಜ್‍ನಲ್ಲಿ ಬರುವ ಜನವರಿಯಲ್ಲಿ ಕುಂಭಮೇಳ ಜರುಗಲಿದ್ದು, ಸುಮಾರು 40 ಕೋಟಿಗೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯಿಂದ 600 ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಲಾಗುವುದು. ಪ್ರಯಾಗ್ ರಾಜ್‍ಗೆ ತೆರಳುವ ಭಕ್ತರಿಗೆ ಏಕರೂಪದ ಟಿಕೆಟ್ ವ್ಯವಸ್ಥೆ ಮಾಡುವ ಚಿಂತನೆ ನಡೆಸಲಾಗಿದ್ದು, ಟಿಕೆಟ್ ಪಡೆದವರು ಯಾವುದೇ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ ಎಂದರು.

ಸಭೆಯಲ್ಲಿ ಸಂಸದ ಗೋವಿಂದ ಎಂ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನೇರ ರೈಲ್ವೆ ಮಾರ್ಗ ಭೂಸ್ವಾಧೀನಾಧಿಕಾರಿ ವೆಂಕಟೇಶ್, ಬೆಂಗಳೂರು ಕಂಟೋನ್‍ಮೆಂಟ್ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಸಂದೀಪ್ ಶರ್ಮಾ, ಮುಖ್ಯ ಇಂಜಿನಿಯರ್‍ಗಳಾದ ಪ್ರದೀಪ್ ಪುರಿ, ಸಂಜಯ್ ಬನ್ಸಾರಿ, ವಿಭಾಗೀಯ ಇಂಜಿನಿಯರ್ ರಜತ್, ಮೈಸೂರು ರೈಲು ವಿಭಾಗದ ಮಂಡಲ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಕಲಗೊಂಡ, ತಹಶೀಲ್ದಾರ್ ಡಾ.ನಾಗವೇಣಿ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:2027ಕ್ಕೆ ಪೂರ್ಣChitradurgaChitradurga newsChitradurga UpdatesComplete by 2027Davangere-Chitradurga-Tumkur Rail LineDirect Rail LineKannada Latest NewsNarendra ModiTrainV. Somannaಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗನರೇಂದ್ರ ಮೋದಿನೇರ ರೈಲು ಮಾರ್ಗರೈಲುವಿ.ಸೋಮಣ್ಣ
Share This Article
Facebook Email Print
Previous Article SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ
Next Article ಬೆಸ್ಕಾ BESCOM ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ
Leave a Comment

Leave a Reply Cancel reply

Your email address will not be published. Required fields are marked *

ಜಯದೇವ ಸಿರಿ ಕೃತಿ ಲೋಕಾರ್ಪಣೆ
ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
ಮುಖ್ಯ ಸುದ್ದಿ
ಗೋವಿಂದ ಕಾರಜೋಳ
ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up