ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಉಡುವಳ್ಳಿ ನವೋದಯ ವಿದ್ಯಾಲಯ ಪ್ರಾಚಾರ್ಯರ ಸ್ಪಷ್ಟನೆ

ನವೋದಯ ಶಾಲೆ, ಉಡುವಳ್ಳಿ,

ಚಿತ್ರದುರ್ಗ ನ್ಯೂಸ್.ಕಾಂ: ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಚಾರ್ಯರು ಸ್ಪಷ್ಟನೆ ನೀಡಿದ್ದು, ಘಟನೆಗೆ ವಿದ್ಯಾಲಯದ ಮೆಸ್‍ನಲ್ಲಿ ಸೇವಿಸಿದ ಉಪಹಾರ ಕಾರಣವಲ್ಲ ಎಂದು ತಿಳಿಸಿದ್ದಾರೆ.

ಹಿರಿಯೂರು ತಾಲೂಕು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ ಫುಡ್‍ಫಾಯಿಸನ್‍ನಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.

ವಿದ್ಯಾಲಯದಲ್ಲಿ ಮಂಗಳವಾರ ಬೆಳಗ್ಗೆ ಇಡ್ಲಿ, ಚಟ್ನಿ ಹಾಗೂ ಸಾಂಬಾರ್ ಸೇವಿಸಿದ ನಂತರ ಹೀಗಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು.

ಜವಾಹರ್ ನವೋದಯ ಪ್ರಾಚಾರ್ಯರ ಸ್ಪಷ್ಟನೆ

ಈ ಹಿನ್ನೆಲೆಯಲ್ಲಿ ಹಿರಿಯೂರು ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೆಸ್‍ನಲ್ಲಿ ಸೇವಿಸಿದ ಇಡ್ಲಿಯಿಂದ ಈ ಘಟನೆ ಸಂಭವಿಸಿಲ್ಲ ಎಂದು ವರದಿ ನೀಡಿದ್ದಾರೆ ಎಂದು ನವೋದಯ ವಿದ್ಯಾಲಯದ ಪ್ರಾಚಾರ್ಯರು ಸ್ಪಷ್ಟಪಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
2 Comments

Leave a Reply

Your email address will not be published. Required fields are marked *

Exit mobile version