By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಮುಖ್ಯ ಸುದ್ದಿ

ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

chitradurganews.com
Last updated: 23 January 2025 22:20
chitradurganews.com
5 months ago
Share
ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 JANUARY 2025

ಚಿತ್ರದುರ್ಗ: ಮಧ್ಯ ಕರ್ನಾಟಕದ ಜಲಪಾತ್ರೆ ಎಂದೇ ಹೆಸರಾಗಿರುವ ಮೈಸೂರು ಮಹಾರಾಜರ ಕೊಡುಗೆಯಾಗಿರುವ ವಾಣಿವಿಲಾಸ ಸಾಗರ ಜಲಾಶಯ ಮೂರನೇ ಬಾರಿಗೆ ಭರ್ತಿಯಾಗಿ ಕೋಡಿ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬಾಗೀನ ಅರ್ಪಿಸಿದರು.

ಇದನ್ನೂ ಓದಿ:ಮೈಸೂರು ಮಹಾರಾಜರಿಂದ ವಾಣಿವಿಲಾಸ ಸಾಗರಕ್ಕೆ ಬಾಗೀನ ಅರ್ಪಣೆ

ಹಿರಿಯೂರು ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ(ಪಪ್ಪಿ), ಎನ್.ವೈ.ಗೋಪಾಲಕೃಷ್ಣ, ಮಾಜಿ ಸಚಿವ ಎಚ್.ಆಂಜನೇಯ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬಾಗೀನ ಅರ್ಪಣೆ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಬೆಳಕಿನಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಜನವರಿಯಲ್ಲಿ ಕೋಡಿ ಬಿದ್ದು ಹೊಸ ದಾಖಲೆ:

ವಾಣಿವಿಲಾಸ ಸಾಗರ ಜಲಾಶಯ ನಿರ್ಮಾಣವಾದ 118 ವರ್ಷಗಳ ಇತಿಹಾಸದಲ್ಲಿ ಮೂರನೇ ಬಾರಿಗೆ ಕೋಡಿ ಬೀದ್ದಿದೆ. ವಿಶೇಷವೆಂದರೆ ಮಳೆಯೇ ಇಲ್ಲದ ಜನವರಿ ತಿಂಗಳಲ್ಲಿ ಜಲಾಶಯ ಕೋಡಿ ಬಿದ್ದಿರುವುದು. ಭದ್ರಾ ಜಲಾಶಯದಿಂದ ಪ್ರತಿ ದಿನ ನೀರು ಹರಿಸಿದ ಪರಿಣಾಮ ಈ ಸಂದರ್ಭದಲ್ಲಿ ಜಲಾಶಯ ಭರ್ತಿಯಾಗಿದೆ.

ಇದನ್ನೂ ಓದಿ: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

1907 ರಲ್ಲಿ ನಿರ್ಮಾಣವಾದ ಜಲಾಶಯ 1933 ರಲ್ಲಿ 133.25 ಅಡಿವೆರೆಗೆ ನೀರು ಬಂದು ಕೋಡಿ ಬಿದ್ದಿತ್ತು. ಆನಂತರ ಜಲಾಶಯ ಕೋಡಿ ಬಿದ್ದಿದ್ದನ್ನು ಈ ತಲೆಮಾರು ನೋಡಿಯೇ ಇರಲಿಲ್ಲ. 1933 ರಲ್ಲಿ ಕೋಟಿ ಬಿದ್ದಿತ್ತು ಎನ್ನುವ ದಾಖಲೆ ಇತ್ತೇ ಹೊರತು, ಕೋಡಿ ಬಿದ್ದಾಗ ಜಲಾಶಯದ ವೈಭವ ಹೇಗಿರುತ್ತೆ, ಎಲ್ಲಿ ನೀರು ಹರಿಯುತ್ತದೆ ಎನ್ನುವ ಕಲ್ಪನೆಯೇ ಇರಲಿಲ್ಲ.

ಆದರೆ, ಭಾರೀ ಮಳೆ ಹಾಗೂ ಭದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಸಿದ್ದ ಕಾರಣಕ್ಕೆ 2022 ಸೆಪ್ಟಂಬರ್ ತಿಂಗಳಲ್ಲಿ ವಿವಿ ಸಾಗರ ಜಲಾಶಯ ಕೋಡಿ ಬಿದ್ದಿತ್ತು.

ಇದನ್ನೂ ಓದಿ: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

ಈ ವೇಳೆ ಮಳೆ ಹೆಚ್ಚಾದ ಪರಿಣಾಮ ಸತತ ಮೂರು ತಿಂಗಳ ಕಾಲ ಕೋಡಿ ಮೂಲಕ ಭಾರೀ ಪ್ರಮಾಣದಲ್ಲಿ ನೀರು ಹರಿದು, ಜಲಾಶಯದಿಂದ ಮುಂಭಾಗದ ವೇದಾವತಿ ನದಿಗೆ ಜೀವಕಳೆ ಬಂದಿತ್ತು. ಸಾಕಷ್ಟು ನೀರು ಆಂಧ್ರಪ್ರದೇಶದ ಪಾಲಾಗಿತ್ತು.

ಬಾಗೀನ ಅರ್ಪಿಸಿದ 2ನೇ ಸಿಎಂ ಸಿದ್ದರಾಮಯ್ಯ:

ಜಲಾಶಯ ನಿರ್ಮಾಣವಾದ ಇತಿಹಾಸದಲ್ಲಿ ಮೂರನೇ ಬಾರಿಗೆ ಕೋಡಿ ಬೀಳುತ್ತಿದ್ದು, ಮೊದಲನೆ ಸಲ ತುಂಬಿದಾಗ ಯಾರು ಬಾಗೀನ ಅರ್ಪಿಸಿದ್ದರು ಗೊತ್ತಿಲ್ಲ. ಆದರೆ, 2022 ರಲ್ಲಿ ಜಲಾಶಯ ಭರ್ತಿಯಾದಾಗ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದ್ದರು. ಮುಖ್ಯಮಂತ್ರಿಯೊಬ್ಬರು ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದ್ದು, ಇದೇ ಮೊದಲಾಗಿತ್ತು.

ಇದನ್ನೂ ಓದಿ: ಬಿಜೆಪಿಗೆ ನೂತನ ಮಂಡಲ ಅಧ್ಯಕ್ಷರ ಆಯ್ಕೆ

ಈಗ ಮೂರನೇ ಸಲ ಕೋಡಿ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಜಲಾಶಯಕ್ಕೆ ಬಾಗೀನ ಅರ್ಪಿಸಿರುವುದು ಇತಿಹಾಸವಾಗಲಿದೆ.

MLC ಶ್ರೀನಿವಾಸ್, ನಿಗಮ ಮಂಡಳಿ ಅಧ್ಯಕ್ಷ ಮಂಜುನಾಥ್ , ಮಾಜಿ ಸಂಸದ ಬಿ.ಎನ್.ಚಂದ್ರಪ್ಪ,‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಜಿಪಂ ಮಾಜಿ ಅಧ್ಯಕ್ಷೆ ಶಶಿಕಲಾ, ಮಾಜಿ ಸದಸ್ಯ ನಾಗೇಂದ್ರ ನಾಯ್ಕ್ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chief Minister SiddaramaiahChitradurga LatestChitradurga newsD. SudhakarDK ShivakumarfeaturedHiriyurKannada NewsVanivilasa Sagarke BaginaVV SagarWater Resources Departmentಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜಲಸಂಪನ್ಮೂಲ ಇಲಾಖೆಡಿ.ಕೆ.ಶಿವಕುಮಾರ್ಡಿ.ಸುಧಾಕರ್ಮುಖ್ಯಮಂತ್ರಿ ಸಿದ್ದರಾಮಯ್ಯವಾಣಿವಿಲಾಸ ಸಾಗರಕ್ಕೆ ಬಾಗೀನವಿವಿ ಸಾಗರಹಿರಿಯೂರು
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 
Next Article KSRTC ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ | ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ 
Leave a Comment

Leave a Reply Cancel reply

Your email address will not be published. Required fields are marked *

ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up