CHITRADURGA NEWS | 31 JANUARY 2024
ಹೊಸದುರ್ಗ: ಕೊಬ್ಬರಿ ಗೋದಾಮಿಗೆ ಬೆಂಕಿ ತಗುಲಿ 40 ಸಾವಿರ ಕೊಬ್ಬರಿ ಉಂಡೆಗಳು ಧಗ ಧಗನೆ ಉರಿದಿರುವ ಘಟನೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಚಿಕ್ಕಬ್ಯಾಲದಕೆರೆ ಗ್ರಾಮದ ಹೊರವಲಯದ ತೋಟದಲ್ಲಿದ್ದ ಜಗಪ್ಪ ಎನ್ನುವವರ ಗೋಡಾನ್ಗೆ ಮಂಗಳವಾರ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ.
ಇದನ್ನೂ ಓದಿ: ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದ 18 ಜೋಡಿಗಳನ್ನು ಒಂದಾಗಿಸಿದ ಲೋಕ ಅದಾಲತ್
ಬೆಂಕಿಯ ಕೆನ್ನಾಲಿಗೆಗೆ ಗೋಡಾನ್ನಲ್ಲಿ ದಾಸ್ತಾನು ಮಾಡಿದ್ದ ಸುಮಾರು 40 ಸಾವಿದ ಉಂಡೆ ಕೊಬ್ಬರಿಗಳು ಸುಟ್ಟು ಬೂದಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಬೆಂಕಿ ನಂದಿಸಿ ತಹಬದಿಗೆ ತಂದಿದೆ.
ಘಟನೆಯಿಂದ ರೈತ ಜಗಪ್ಪ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
