CHITRADURGA NEWS | 04 MAY 2024
ಚಿತ್ರದುರ್ಗ: ರಾಜ್ಯದಲ್ಲಿ ಮಾರ್ಚ್ ತಿಂಗಳಿಂದ ಬೇಸಿಗೆ ಬಿಸಿಲು ಪ್ರಾರಂಭವಾಗಿದ್ದು ಇನ್ನೂ ಕಡಿಮೆಯಾಗದೆ, ಜನರಿಗೆ ದೊಡ್ಡ ತಲೆನೋವಾಗಿ ಕುಂತಿದೆ.. ಇದರ ನಡುವೆ ಹಳ್ಳಿ ಹಾಗೂ ನಗರ ಪಟ್ಟಣಗಳಲ್ಲಿ ಕುಡಿಯಲು ನೀರು ಸಿಗದೆ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಹಳ್ಳಿಯ ಜನರನ್ನು ದಿನನಿತ್ಯ ತಮ್ಮ ಕೆಲಸಗಳಿಗೆ ನಗರಕ್ಕೆ ಹೋಗುತ್ತಿದ್ದು ನಗರಗಳಲ್ಲಿ ಕುಡಿಯಲು ನೀರು ಸಿಗದೇ ಪರದಾಡುತ್ತಿದ್ದಾರೆ.

ಇದನ್ನೂ ಓದಿ : ದುರ್ಗದ ಅಧಿದೇವತೆಗಳ ಅದ್ದೂರಿ ಮೆರವಣಿಗೆ | ಏಕನಾಥೇಶ್ವರಿ, ಬರಗೇರಮ್ಮ ದೇವಿಯರ ಕಣ್ತುಂಬಿಕೊಂಡ ಭಕ್ತರು
ಸಾರ್ವಜನಿಕರಿಗೆ ಕುಡಿಯಲು ನೀರು ಅನುಕೂಲವಾಗಲೆಂದು ಬಿಜೆಪಿ ಎಸ್.ಸಿ. ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅವರ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಕುಡಿಯುವ ನೀರಿನ ಅರವಟಿಗೆಗಳನ್ನು ಸ್ಥಾಪಿಸಲಾಗಿದೆ.
ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿ, ಬಿಸಿಲು ತೀವ್ರವಾಗಿದ್ದು, ಜನರನ್ನು ನಲಗುವಂತೆ ಮಾಡಿದೆ, ಗಿಡ ಮರಗಳನ್ನು ನೆಟ್ಟು ಉಷ್ಣಾಂಶ ಕಡಿಮೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ, ಪರಿಸರ ರಕ್ಷಣೆ, ಗಿಡಮರಗಳ ಪೋಷಣೆಯಿಂದ ಮಾತ್ರ ಉಷ್ಣತೆ ನಿಯಂತ್ರಿಸಲು ಸಾಧ್ಯ ಎಂದರು.
ಇದನ್ನೂ ಓದಿ : ಲೋಕಸಭೆ ಚುನಾವಣೆ ಬೆನ್ನಲ್ಲೇ ಮತ್ತೊಂದು ಚುನಾವಣೆ | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೇಳಾಪಟ್ಟಿ ಪ್ರಕಟ
ಜನರ ಅನುಕೂಲಕ್ಕಾಗಿ ಪರಿಸರಸ್ನೇಹಿ, ಆರೋಗ್ಯಕ್ಕೆ ಹಿತಕಾರಿಯಾದ ಮಣ್ಣಿನ ಮಡಿಕೆಗಳಲ್ಲಿ ಪ್ರತಿನಿತ್ಯ ನೀರನ್ನು ತುಂಬಲಾಗುತ್ತಿದೆ, ಜಲ ಬರಿ ಜಲವಲ್ಲ ಅದು ಜೀವ ಜಲ ಹೀಗಾಗಿ ನೀರನ್ನು ಅಮೂಲ್ಯವಾಗಿ ಬಳಸೋಣ ಎಂದು ಹೇಳಿದರು.
ಮೊದಲು ಚಿತ್ರದುರ್ಗ ನಗರದಲ್ಲಿ ಎರಡು ಹತ್ತಿರ ಅರವಟಿಗೆಗಳನ್ನೂ ಸ್ಥಾಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಅಭಾವ ಹೆಚ್ಚಾದರೆ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಪಶು, ಪಕ್ಷಿಗಳಿಗೂ ಸಹ ವಿಶೇಷ ಅರವಟಿಗೆ ನಿರ್ಮಾಣಕ್ಕೆ ಮಾಡಲಾಗುವುದು ಎಂದರು.
ಇದನ್ನೂ ಓದಿ : ಮೇ.15 ಶ್ರೀ ರಾಮಾನುಜಾಚಾರ್ಯರ ಜಯಂತೋತ್ಸವ
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬದ್ರಿನಾಥ, ಅರುಣ, ಬಿಜೆಪಿ ವಕ್ತಾರ ನಾಗರಾಜ್ ಬೇಂದ್ರೆ, ಆದರ್ಶ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
