By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹೊಳಲ್ಕೆರೆಯ ನಂಟು ಬಿಟ್ಟು ಹೋದ ಹಾಸ್ಯ ನಟ ಬ್ಯಾಂಕ್ ಜನಾರ್ದನ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹೊಳಲ್ಕೆರೆಯ ನಂಟು ಬಿಟ್ಟು ಹೋದ ಹಾಸ್ಯ ನಟ ಬ್ಯಾಂಕ್ ಜನಾರ್ದನ್ 

ಮುಖ್ಯ ಸುದ್ದಿ

ಹೊಳಲ್ಕೆರೆಯ ನಂಟು ಬಿಟ್ಟು ಹೋದ ಹಾಸ್ಯ ನಟ ಬ್ಯಾಂಕ್ ಜನಾರ್ದನ್ 

News Desk Chitradurga News
Last updated: 15 April 2025 17:45
News Desk Chitradurga News
2 months ago
Share
Bank Janardhan
ಬ್ಯಾಂಕ್ ಜನಾರ್ದನ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 April 2025

ಕನ್ನಡ ಚಿತ್ರರಂಗದ ಹಾಸ್ಯ ನಟ, 860 ಚಿತ್ರಗಳಲ್ಲಿ ನಟಿಸಿದ್ದ, ಬ್ಯಾಂಕ್ ಜನಾರ್ದನ್ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ 1949ರಲ್ಲಿ ಜೆಸಿ ಬಡಾವಣೆಯಲ್ಲಿ ಜನಿಸಿದ್ದರು.

ಬ್ಯಾಂಕ್ ಜನಾರ್ದನ್ ಹುಟ್ಟಿ ಬೆಳೆದಿದ್ದು ಹೊಳಲ್ಕೆರೆಯಲ್ಲಿ, ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಎಂಎಂ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ್ದರು.

ಜನಾರ್ದನ್ ತಂದೆ ಪಟ್ಟಣದ ಲೋಕೋಪಯೋಗಿ ಇಲಾಖೆಯಲ್ಲಿ ಜೀಪ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು.  ಬಡನದಲ್ಲಿದ್ದ ಜನಾರ್ದನ್ ಕುಟುಂಬ ಪಟ್ಟಣದ ಗುಡಿಸಲೊಂದರಲ್ಲಿ ವಾಸ ಮಾಡುತ್ತಿತ್ತು. ತಂದೆ ನಿವೃತ್ತರಾದ ನಂತರ ಅವರ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತು. ಅವರ ತಾಯಿ ಕೂಲಿ ಹೋಗಿ ಮಕ್ಕಳನ್ನು ಸಾಕಿದರು. ಜನಾರ್ದನ್ ಕೂಡ ತಾಯಿಯೊಂದಿಗೆ ಕೂಲಿ ಹೋಗುತ್ತಿದ್ದರು.

ಜನಾರ್ದನ್ ಪಟ್ಟಣದ ವೈದ್ಯ ಉದಯ ಶೆಟ್ಟಿ ಎಂಬುವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಎಸ್ಎಸ್‌ಎಲ್‌ಸಿ ಮುಗಿಸಿದ್ದ ಜನಾರ್ದನ್ ಅವರನ್ನು ಡಾ.ಉದಯ ಶೆಟ್ಟಿ ಪಟ್ಟಣದ ವಿಜಯಾ ಬ್ಯಾಂಕ್ ನಲ್ಲಿ ಅಟೆಂಡರ್ ಕೆಲಸಕ್ಕೆ ಸೇರಿಸಿದರು.

ಚಿಕ್ಕಂದಿನಿಂದಲೇ ನಟನೆಯ ಬಗ್ಗೆ ಆಸಕ್ತಿ ಹೊಂದಿದ್ದ ಜನಾರ್ದನ್ ಯುವಕರ ಗುಂಪು ಕಟ್ಟಿಕೊಂಡು ನಾಟಕ ಆಡುತ್ತಿದ್ದರು. ಮೊದಲು ಗಣೇಶನ ಪೆಂಡಾಲ್‌ನಲ್ಲಿ ನಾಟಕ ಆಡುತ್ತಿದ್ದ ಜನಾರ್ದನ್‌ಗೆ ಸಿದ್ದೇಶ್ವರ ನಾಟಕ ಕಂಪನಿಯಲ್ಲಿ ಅವಕಾಶ ಸಿಕ್ಕಿತು. ಆಗ ಪಟ್ಟಣಕ್ಕೆ ಬಂದಿದ್ದ ಧೀರೇಂದ್ರ ಗೋಪಾಲ್ ಅವರು ಜನಾರ್ದನ್ ನಟನೆ ಕಂಡು ಬೆಂಗಳೂರಿಗೆ ಕರೆಸಿಕೊಂಡು ಸಿನಿಮಾದಲ್ಲಿ ಪಾತ್ರ ಕೊಟ್ಟರು.

ಜನಾರ್ದನ್ ಕುಟುಂಬ ಹಲವು ವರ್ಷ ಹೊಳಲ್ಕೆರೆಯಲ್ಲೇ ವಾಸವಿದ್ದರೂ. ನಟರಾದ ನಂತರವೂ ಅವರು ಪಟ್ಟಣದ ವಿಜಯಾ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಹಾಕಿ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸುತ್ತಿದ್ದರು. ಇಲ್ಲಿ ವಾಸವಿದ್ದುಕೊಂಡೇ ಅವರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಅವರ ತಂದೆಯ ನಿಧನದ ನಂತರ ಇಲ್ಲಿ ಅವರಿಗಿದ್ದ 2 ಎಕರೆ ಜಮೀನು, ಮನೆ ಮಾರಾಟ ಮಾಡಿ ಬೆಂಗಳೂರಿಗೆ ಹೋದರು.

ಬ್ಯಾಂಕ್‌ನಲ್ಲಿ ತಿಂಗಳಿಗೆ ರೂ.50 ಸಂಬಳ

ಪಟ್ಟಣದ ವಿಜಯಾ ಬ್ಯಾಂಕ್‌ನಲ್ಲಿ ಕೆಲಸಕ್ಕೆ ಸೇರಿದಾಗ ಜನಾರ್ದನ್ ತಿಂಗಳಿಗೆ ರೂ.50 ಸಂಬಳ ಪಡೆಯುತ್ತಿದ್ದರು. ಸಂದರ್ಶನವೊಂದರಲ್ಲಿ ಅವರೇ ಹೇಳಿಕೊಂಡಿರುವಂತೆ ಆಗಿನ ಕಾಲಕ್ಕೆ ಇದು ದೊಡ್ಡ ಮೊತ್ತವಾಗಿತ್ತು. ಇದರ ಜತೆಗೆ ಭಾನುವಾರ ಹಾಗೂ ರಜಾ ದಿನಗಳಲ್ಲಿ ಡಾ.ಶಂಕರ ಶೆಟ್ಟಿ ತೋಟಕ್ಕೆ ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದೆ. ಅವರು ವಾರಕ್ಕೊಮ್ಮೆ ಕೂಲಿ ಕೊಡುತ್ತಿದ್ದರು. ಆ ಹಣದಲ್ಲಿ ಸಂತೆ ಮಾಡಿಕೊಂಡು ಮನೆಗೆ ಹೋಗುತ್ತಿದ್ದೆ. ರಾತ್ರಿ ಪಟ್ಟಣದ ಮಲ್ಲಿಕಾರ್ಜುನ್ ಟೂರಿಂಗ್ ಟಾಕೀಸ್‌ನಲ್ಲಿ ರೀಲ್ ಸುತ್ತುವ ಕೆಲಸ ಮಾಡುತ್ತಿದ್ದೆ. ಅವರು ದಿನಕ್ಕೆ ರೂ. 1 ಎರಡು ಟೀ ಒಂದು ಬನ್ ನೀಡುತ್ತಿದ್ದರು. ನಾಟಕ ಕಂಪನಿಯಲ್ಲಿ ಅವಕಾಶ ಸಿಕ್ಕಿದ ನಂತರ ಹಣ ಕೂಡಿಸಿ ಕಪ್ಪು ಹೆಂಚಿನ ಮನೆ ಖರೀದಿಸಿದೆ ಎಂದು ಅವರು ಸಂಕಷ್ಟದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಸಿನಿ ಜೀವನ 

ಬ್ಯಾಂಕ್ ಜನಾರ್ಧನ್ 1985ರಲ್ಲಿ ತೆರೆಕಂಡ ಪಿತಾಮಹ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಪಾಪಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಶಿವರಾಜ್‌ಕುಮಾರ್, ರವಿಚಂದ್ರನ್, ಶಂಕರ್ ನಾಗ್, ಅನಂತ್ ನಾಗ್ ಸಿನಿಮಾಗಳಲ್ಲಿ ಅವರು ಹೆಚ್ಚು ನಟಿಸಿದ್ದಾರೆ. ದೊಡ್ಡಮಟ್ಟಕ್ಕೆ ಅವಕಾಶಗಳು ಸಿಗದೇ ಇದ್ದರೂ ಸಿಕ್ಕ ಪಾತ್ರಗಳನ್ನು ಚೆನ್ನಾಗಿ ನಿಭಾಯಿಸಿ ಗೆದ್ದಿದ್ದರು. ಶಾಲಾ ಕಾಲೇಜು ದಿನಗಳಲ್ಲೇ ನಾಟಕಗಳಲ್ಲಿ ನಟಿಸೋಕೆ ಆರಂಭಿಸಿದ್ದರು. ಹಾಗಾಗಿ ಕೊನೆಗೆ ಚಿತ್ರರಂಗ ಪ್ರವೇಶಿಸಿದರು. ಉಪೇಂದ್ರ ಹಾಗೂ ಕಾಶಿನಾಥ್ ಸಿನಿಮಾಗಳಲ್ಲಿ ಒಳ್ಳೆ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bank JanardhanChitradurgaChitradurga newsChitradurga Updatescomedy actorHolalkereKannada CinemaKannada Latest NewsKannada Newsಕನ್ನಡ ಚಿತ್ರರಂಗಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬ್ಯಾಂಕ್ ಜನಾರ್ದನ್ಹಾಸ್ಯ ನಟಹೊಳಲ್ಕೆರೆ
Share This Article
Facebook Email Print
Previous Article Karnataka State Government Employees Sports Festival ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಪರಿಶೀಲನೆ | ಶಾಸಕ ಕೆ.ಸಿ.ವಿರೇಂದ್ರ (ಪಪ್ಪಿ)
Next Article Opening Ceremony of the Games ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ | ಸಿ.ಎಸ್.ಷಡಾಕ್ಷರಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up