By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ದಲಿತ ವಿದ್ಯಾರ್ಥಿ ಪರಿಷತ್‍ನಿಂದ ಸ್ಫರ್ಧಾತ್ಮಕ ಪರೀಕ್ಷೆ | 150ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ದಲಿತ ವಿದ್ಯಾರ್ಥಿ ಪರಿಷತ್‍ನಿಂದ ಸ್ಫರ್ಧಾತ್ಮಕ ಪರೀಕ್ಷೆ | 150ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ

ಮುಖ್ಯ ಸುದ್ದಿ

ದಲಿತ ವಿದ್ಯಾರ್ಥಿ ಪರಿಷತ್‍ನಿಂದ ಸ್ಫರ್ಧಾತ್ಮಕ ಪರೀಕ್ಷೆ | 150ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ

chitradurganews.com
Last updated: 27 August 2023 16:01
chitradurganews.com
2 years ago
Share
Competitive Examination by Dalit Vidyarthi Parishad
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್:

ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್‍ನಿಂದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಯಿತು. 150ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ನೊಂದಾಯಿಸಿಕೊಂಡು ಪರೀಕ್ಷೆಗೆ ಹಾಜರಾದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಂಜೀವಿನಿ ಟ್ರಸ್ಟ್ ಅಧ್ಯಕ್ಷ ಡಾ.ಸೌಮ್ಯಾ ಮಂಜುನಾಥ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣದ ಜೊತೆಗೆ ಹೋರಾಟವನ್ನೂ ಮಾಡಿಕೊಂಡು ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಇಂದಿಗೂ ಸಮಾಜದಲ್ಲಿ ಹೆಣ್ಣು ಮಕ್ಕಳು, ಶೋಷಿತರ ಮೇಲೆ ದೌರ್ಜನ್ಯಗಳು ನಿಂತಿಲ್ಲ. ಈ ಹಿನ್ನೆಲೆಯಲ್ಲಿ ಇಂದಿನ ಯುವ ಪೀಳಿಗೆ ಅಂಬೇಡ್ಕರ್ ಮಾದರಿಯಲ್ಲಿ ನಡೆಯಬೇಕಿದೆ ಎಂದರು.

ಅಂಬೇಡ್ಕರ್ ಸಾಮಾಜಿಕ ಕ್ರಾಂತಿಯ ಹರಿಕಾರ, ಕಾನೂನು ಹೋರಾಟಗಾರ, ಕಾನೂನು ಹಕ್ಕುಗಳನ್ನು ಮಹಿಳೆಯರಿಗೆ ತೋರಿಸಿಕೊಟ್ಟವರು. ಸಂವಿಧಾನ ಶಿಲ್ಪಿಯಾಗಿರುವ ಅವರು ಆರ್ಥಿಕ ತಜ್ಞರಾಗಿ ಗುರುತಿಸಿಕೊಂಡಿರುವುದು ಇಡೀ ಭಾರತಕ್ಕೆ ಹೆಮ್ಮೆ. ಅವರನ್ನು ಪುಸ್ತಕದಲ್ಲಿ ಓದುವ ಮತ್ತೊಬ್ಬರಿಗೆ ಓದಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಪತ್ರಕರ್ತ ಡಾ.ಸುರೇಂದ್ರನಾಥ್ ಮಾತನಾಡಿ, ನಮ್ಮ ಬದುಕಿನಲ್ಲಿ ಅಂಬೇಡ್ಕರ್ ಅವರ ಆಶಯಗಳನ್ನು ಅಳವಡಿಸಿಕೊಂಡು ನಡೆದರೆ ಅಪಾಯವೇ ಇಲ್ಲದಂತೆ ಜೀವಿಸಬಹುದು. ಅಂಬೇಡ್ಕರರ ಜೀವನ, ಶಿಕ್ಷಣ, ಹೋರಾಟವನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು ಎಂದರು.

ಬಾಬಾ ಸಾಹೇಬರು ನಮ್ಮ ದೇಶಕ್ಕೆ ನೀಡಿರುವ ಸಂವಿಧಾನದಲ್ಲಿ ಎಲ್ಲಾ ಸಮುದಾಯದ ಜನರಿಗೆ ಭದ್ರತೆಯನ್ನು ಕೊಟ್ಟು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಸ್ಮರಿಸಿದರು.

ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೊ.ಎಲ್.ನಾಗರಾಜ್, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಶಾಂತಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಪ್ರಕಾಶ್, ಸಾವಿತ್ರಿ ಬಾಪುಲೆ ಪ್ರಶಸ್ತಿ ಪುರಸ್ಕøತೆ ಯಶೋಧಮ್ಮ, ಬಸವರಾಜ್, ರವಿಕಿರಣ್, ನಂದೀಶ್, ಮಲ್ಲಿಕಾರ್ಜುನ ಇತರರಿದ್ದರು.

(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ  https://www.facebook.com/chitradurganews?mibextid=ZbWKwL)

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ambedkarChitradurgacompetitiveexamnewsಅಂಬೇಡ್ಕರ್ಚಿತ್ರದುರ್ಗಪರೀಕ್ಷೆಸುದ್ದಿಸ್ಫರ್ಧಾತ್ಮಕ
Share This Article
Facebook Email Print
Previous Article ಟೌನ್ ಕೋ-ಆಪರೇಟಿವ್ ಸೊಸೈಟಿ ಟೌನ್ ಕೋ-ಆಪರೇಟಿವ್ ಸೊಸೈಟಿ ಸದಸ್ಯರಿಗೆ ಗುಡ್ ನ್ಯೂಸ್ | ಗೃಹ-ಬಂಗಾರದ ಸಾಲದ ಪ್ರಮಾಣದಲ್ಲಿ ಹೆಚ್ಚಳ
Next Article ಭಾರತೀಯ ಮಹಿಳಾ ಅಂಧರ ಕ್ರಿಕೇಟ್ ತಂಡಕ್ಕೆ ನಾಯಕಿ ಭಾರತೀಯ ಮಹಿಳಾ ಅಂಧರ ಕ್ರಿಕೇಟ್ ತಂಡಕ್ಕೆ ನಾಯಕಿಯಾದಳು ಹಿರಿಯೂರಿನ ಮಗಳು ವರ್ಷಾ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up