CHITRADURGA NEWS | 30 JULY 2026
ಚಿತ್ರದುರ್ಗ: ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಸಮಗ್ರ ಕೃಷಿ ತರಬೇತಿ-ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಅಣಬೆ ಬೇಸಾಯ ಮತ್ತು ಕೃಷಿಗೆ ಸಂಬಂಧಿಸಿದ ವಿಷಯಗಳ ತರಬೇತಿ ನೀಡಲಾಗುವುದು.
ಇದನ್ನೂ ಓದಿ: ಹಿರಿಯೂರು ಉಪಚುನಾವಣೆ | ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕೆಪಿಸಿಸಿ
ತರಬೇತಿಯು 2026ರ ಆಗಸ್ಟ್ 03 ರಿಂದ ಪ್ರಾರಂಭವಾಗಲಿದ್ದು, 13 ದಿನಗಳ ಕಾಲ ತರಬೇತಿ ನಡೆಯಲಿದೆ. ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ. 19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ಹೊಲಿಗೆ ಬಗ್ಗೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.
ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಆಗಸ್ಟ್ 03ರಂದು ರುಡ್ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯನ್ನು ಮೊದಲ ಆದ್ಯತೆಯಲ್ಲಿ ಬರ ಘೋಷಿಸಿ | ಆರ್.ಅಶೋಕ್
ಹೆಚ್ಚಿನ ಮಾಹಿತಿಗಾಗಿ ಮೊ.8431329162, 861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

