By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್

ಮುಖ್ಯ ಸುದ್ದಿ

ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್

News Desk Chitradurga News
Last updated: 1 July 2024 19:56
News Desk Chitradurga News
12 months ago
Share
ತರಬೇತಿ ಕಾರ್ಯಕ್ರಮ
ತರಬೇತಿ ಕಾರ್ಯಕ್ರಮ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 JULY 2024  

ಚಿತ್ರದುರ್ಗ: ಜಿಲ್ಲೆಯಲ್ಲಿ 158 ಸಹಕಾರ ಸಂಘಗಳಲ್ಲಿ 148 ಪಿಎಸಿಎಸ್ ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ ಕೆಲಸ ನಡೆಯುತ್ತಿದೆ. ಇದರಿಂದ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಬರುತ್ತದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಫ್ ಹೇಳಿದರು.

ಇದನ್ನೂ ಓದಿ: ರಾಜಾವೀರ ಮದಕರಿ ನಾಯಕ ಪಟ್ಟಾಭಿಷೇಕ | ಚಿತ್ರದುರ್ಗದಂತಹ ಕೋಟೆ ಏಷ್ಯಾ ಖಂಡದಲ್ಲೇ ಇಲ್ಲ | ಡಾ.ಎಸ್.ಎನ್.ಮಹಾಂತೇಶ್

ನಗರದ ಕೆಳಗೋಟೆಯ ಬಿ.ಎಲ್.ಗೌಡ ಲೇಔಟ್‍ನ ಸಹಕಾರ ಭವನದಲ್ಲಿ ಸೋಮವಾರ ಸಹಕಾರ ಇಲಾಖೆ, ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿವಿಧಾನಗಳ ಕುರಿತು ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಇಂದು ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಹಕಾರ ಚುನಾವಣೆ ದಿನಾಂಕದ 5 ವರ್ಷಗಳಲ್ಲಿ 2 ವಾರ್ಷಿಕ ಮಹಾಸಭೆಗೆ ಹಾಜರಾದಲ್ಲಿ ಚುನಾವಣೆ ಮತದಾನಕ್ಕೆ ಅರ್ಹರಾಗಿರುತ್ತಾರೆ.

ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಬಹಳ ಮಹತ್ವವಿದೆ. ಚುನಾವಣೆ ಸುಗುಮವಾಗಿ ನಡೆಯಲು ಸಹಕಾರ ಸಂಘಗಳ ಕಾರ್ಯನಿರ್ವಾಹಕರ ಜವಾಬ್ದಾರಿ ಬಹಳ ಮುಖ್ಯ. ಕಾನೂನು ಏನು ಹೇಳುತ್ತದೆ ಅದನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು. ಚುನಾವಣೆ ಕುರಿತು ನೀಡುವ ಇಂತಹ ಉಪನ್ಯಾಸವನ್ನು ಸಂಘದ ಪ್ರತಿನಿಧಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅದ್ದೂರಿ 50ನೇ ಜನ್ಮ ದಿನಾಚರಣೆ

ಕಾರ್ಯಕ್ರಮ ಉದ್ಘಾಟಿಸಿದ ಸಹಕಾರರತ್ನ ಪುರಸ್ಕøತರು ಹಾಗೂ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್.ರಾಮರೆಡ್ಡಿ ಮಾತನಾಡಿ, ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಇನ್ನು ಹೆಚ್ಚಿನ ಒಳ್ಳೆಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಸಂಬಂಧಿಸಿದವರು ಚುನಾವಣೆ ನಡೆಸುವ ಬಗ್ಗೆ ತರಬೇತಿಯ ಉಪನ್ಯಾಸಕರಿಂದ ಮಾಹಿತಿಯನ್ನು ಪಡೆದುಕೊಳ್ಳಬೇಕು. ಇದೇ ರೀತಿ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಇದೇ ರೀತಿಯ ಸಹಕಾರ ದೊರೆತಲ್ಲಿ ಸಹಕಾರ ಮಹಾಮಂಡಳದಿಂದ ಇನ್ನಷ್ಟು ತರಬೇತಿಗಳನ್ನು ನೀಡಲು ನಾವು ಸಿದ್ದರಿದ್ದೇವೆ” ಎಂದು ಹೇಳಿದರು.

ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿಂಕಲು ಬಸವರಾಜ್ ಮಾತನಾಡಿ, ಚುನಾವಣೆ ವಿಚಾರದಲ್ಲಿ ಯಾವುದೇ ಗೊಂದಲವಾಗದಂತೆ ಸಹಕಾರ ಸಂಘಗಳಲ್ಲಿ ಚುನಾವಣೆ ನಡೆಸುವ ಸಲುವಾಗಿ ತರಬೇತಿ ಹಮ್ಮಿಕೊಂಡಿದ್ದು, ಹೆಚ್ಚಿನ ಮಾಹಿತಿ ಪಡೆಯಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಗಾಣಿಗ ಸಮುದಾಯದ ವಧು-ವರರ ಸಮಾವೇಶ | ವ್ಯಕ್ತಿಯನ್ನು ವ್ಯಕಿತ್ವದಿಂದ ಗುರುತಿಸಿ | ಡಾ. ಬಸವಕುಮಾರ ಸ್ವಾಮೀಜಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತಾಪಿ ವರ್ಗಕ್ಕೆ, ಬಡವರಿಗೆ ಮತ್ತು ಮಹಿಳೆಯರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು. ಸಂಘದ ಮುಖ್ಯ ಕಾರ್ಯನಿರ್ವಾಹಕರಿಗೆ ಉತ್ತಮವಾಗಿ ಜ್ಞಾನ ಹೊಂದಿದ ಸಿಬ್ಬಂದಿಗಳನ್ನು ಸಂಘದ ಆಡಳಿತ ಮಂಡಳಿ ನೇಮಕ ಮಾಡಿಕೊಂಡು, ಸಂಘದಲ್ಲಿ ಹೊಸ ಹೊಸ ಬಗೆಯ ತಿದ್ದುಪಡಿಗಳನ್ನು ಮಾಡಿಕೊಂಡು ಸಂಘವನ್ನು ಲಾಭಾಂಶ ಬರುವಂತೆ ಕೆಲಸ ನಿರ್ವಹಿಸಬೇಕು ಸಂಘವನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ರವರು ಮಾತನಾಡಿದರು. ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿ-ವಿಧಾನಗಳ ಕುರಿತು ಚಿಕ್ಕಮಗಳೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕ (ನಿವೃತ್ತ) ಎಸ್.ವಿ.ಬಸವರಾಜ್ ಉಪನ್ಯಾಸ ನೀಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ ಇದ್ದಂತೆ..

ಕಾರ್ಯಕ್ರಮದಲ್ಲಿ ಯೂನಿಯನ್ ನಿರ್ದೇಶಕ ಜೆ.ಶಿವಪ್ರಕಾಶ್, ಎನ್.ಮಂಜುನಾಥ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಸಹಾಯಕ ನಿರ್ದೇಶಕ ಪಿ.ಅಂಜನಮೂರ್ತಿ, ಸಹಕಾರ ಸಂಘಗಳ ನಿರೀಕ್ಷಕ ಎಸ್. ಸಂಜಯ್‍ರಾಮ್, ರಾಮು, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಶಂಕರಮೂರ್ತಿ, ಹಿಮಂತರಾಜ್ ಹಾಗೂ ಚಿತ್ರದುರ್ಗ, ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdaptationChitradurga newsComputerFor cooperative societiesIlyasullah SharifKannada Newsಅಳವಡಿಕೆಇಲ್ಯಾಸ್‍ಉಲ್ಲಾ ಷರೀಪ್ಕನ್ನಡ ನ್ಯೂಸ್ಕಂಪ್ಯೂಟರ್‌ಚಿತ್ರದುರ್ಗ ನ್ಯೂಸ್ಸಹಕಾರ ಸಂಘಗಳಿಗೆ
Share This Article
Facebook Email Print
Previous Article ವೀರ ಮದಕರಿ ನಾಯಕ ರಾಜಾವೀರ ಮದಕರಿ ನಾಯಕ ಪಟ್ಟಾಭಿಷೇಕ | ಚಿತ್ರದುರ್ಗದಂತಹ ಕೋಟೆ ಏಷ್ಯಾ ಖಂಡದಲ್ಲೇ ಇಲ್ಲ | ಡಾ.ಎಸ್.ಎನ್.ಮಹಾಂತೇಶ್
Next Article ಸಚಿವ ಡಿ.ಸುಧಾಕರ್ ಮಹತ್ವದ ಸಭೆ ಸಚಿವ ಡಿ.ಸುಧಾಕರ್ ಮಹತ್ವದ ಸಭೆ | ಭದ್ರಾ, ನೇರ ರೈಲು ಹಾಗೂ ಕೈಗಾರಿಕಾ ಕಾರಿಡಾರ್ ಕುರಿತು ಅಧಿಕಾರಿಗಳಿಂದ ಮಾಹಿತಿ
Leave a Comment

Leave a Reply Cancel reply

Your email address will not be published. Required fields are marked *

Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಹಿರಿಯೂರು ನಗರಸಭೆಯಿಂದ ಆರ್ಥಿಕ ನೆರವು | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಸರ್ಕಾರಿ ಶಾಲೆ | D-GROUP ನೌಕರರ ನೇಮಕಕ್ಕೆ ಮನವಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up