CHITRADURGA NEWS | 22 MARCH 2026
ಹೊಸದುರ್ಗ: ಹೊಸದುರ್ಗ ತಾಲೂಕು ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಈಗ ಬಹಿರಂಗವಾಗಿದೆ. ತಾಲೂಕು ಅಧ್ಯಕ್ಷರ ಆಯ್ಕೆಯಾದಾಗಿನಿಂದ ಹೊಗೆಯಾಡುತ್ತಿದ್ದ ಅಸಮಧಾನ ಸ್ಪೋಟಗೊಂಡಿದೆ.
ತಾಲೂಕು ಅಧ್ಯಕ್ಷರಾಗಿ ಅಣ್ಣಪ್ಪಸ್ವಾಮಿ ಅವರನ್ನು ಜಿಲ್ಲಾ ಘಟಕದವರು ನೇಮಕ ಮಾಡಿದ ದಿನದಿಂದಲೇ ಸಾಮಾಜಿಕ ಮಾಧ್ಯಮಗಳು, ವಾಟ್ಸಪ್ನಲ್ಲಿ ಭಾರೀ ಚರ್ಚೆಯಾಗಿತ್ತು. ಈ ಅಸಮಧಾನಕ್ಕೆ ತೇಪೆ ಹಾಕುವ ಜಿಲ್ಲಾ ಘಟಕದ ಯಾವ ಪದಾಧಿಕಾರಿಗಳೂ ಮುಂದಾಗಿರಲಿಲ್ಲ.
ಇದನ್ನೂ ಓದಿ:ಮಾರುಕಟ್ಟೆ ಧಾರಣೆ | ಮಾರ್ಚ್ 18 | ಮೆಕ್ಕೆಜೋಳ ರೇಟ್…
ಈಗ ಹೊಸದುರ್ಗ ಬಿಜೆಪಿ ಕಾರ್ಯಕರ್ತರು ಭಾನುವಾರು ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಅಸಮಧಾನ ಹೊರಗೆ ಹಾಕಿದ್ದಾರೆ.
ಪಕ್ಷಕ್ಕಾಗಿ ಹಲವು ವರ್ಷಗಳ ಕಾಲ ದುಡಿದ ಎಲ್ಲ ಕಾರ್ಯಕರ್ತರು, ಹಿರಿಯರನ್ನು ಕಡೆಗಣಿಸಲಾಗಿದೆ. ಯಾರೂ ನಾಯಕರು ಹೇಳಿದವರನ್ನು ಅಧ್ಯಕ್ಷರು, ಪದಾಧಿಕಾರಿಗಳಾಗಿ ಮಾಡಿ ಇಷ್ಟು ವರ್ಷಗಳ ಕಾಲ ಕೆಲಸ ಮಾಡಿದವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಯಿತು.
ಈ ಹಿಂದೆ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಗೂಳಿಹಟ್ಟಿ ಜಗದೀಶ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಅಣ್ಣಪ್ಪ ಸ್ವಾಮಿ ಅವರನ್ನು ಆಯ್ಕೆ ಮಾಡುವಾಗ ಪಕ್ಷದ ಎಲ್ಲ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ. ಪಕ್ಷದ ಸದಸ್ಯರೇ ಅಲ್ಲದವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್
ಈ ಹಿಂದೆ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮಾವಿನಕಟ್ಟೆ ಗುರುಸ್ವಾಮಿ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾಗ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಅಣ್ಣಪ್ಪಸ್ವಾಮಿ ಅವರನ್ನು ಆಯ್ಕೆ ಮಾಡಿರುವುದೇ ವಿಪರ್ಯಾಸ. ಇದು ಕಾರ್ಯಕರ್ತರಿಗೆ ಮಾಡಿದ ಅವಮಾನ ಎಂದರು.
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ರಾಜೇಶ್ ಬುರುಡೆಕಟ್ಟೆ, ಹೇರೂರು ಮಂಜುನಾಥ್, ಶಿವನೇಕಟ್ಟೆ ಶಶಿ ಹೆಸರು ಮುಂಚೂಣಿಯಲ್ಲಿತ್ತು.ಆದರೆ, ಇವರಾರಿಗೂ ಅವಕಾಶ ಸಿಗಲಿಲ್ಲ.
ಬಿಜೆಪಿಯಲ್ಲಿ ಪಕ್ಷದ ಅಧ್ಯಕ್ಷರಾಗಲು ಹಲವು ನಿಯಮಗಳಿವೆ. ಆದರೆ, ಅಧ್ಯಕ್ಷ ಸ್ಥಾನಕ್ಕೆ ಅರ್ಹತೆಯೇ ಇಲ್ಲದ ಅಣ್ಣಪ್ಪ ಸ್ವಾಮಿ ಅವರನ್ನು ಯಾರದ್ದೋ ಒತ್ತಡಕ್ಕೆ ಮಣಿದು ನೇಮಕ ಮಾಡಲಾಗಿದೆ. ನೇಮಕವಾಗಿ 9 ತಿಂಗಳಾದರೂ ಪದಗ್ರಹಣವನ್ನೇ ಮಾಡಿಲ್ಲ. ಪಕ್ಷದ ಕಚೇರಿಯನ್ನೂ ತೆರೆದಿಲ್ಲ ಎಂದು ಹೇಳಿದರು.
ಅಧ್ಯಕ್ಷರಾಗಿ ಪದಗ್ರಹಣ ಮಾಡದಿರಲು ಕಾರಣವೇನು?
ಅಧ್ಯಕ್ಷನಾಗಿ 9 ತಿಂಗಳಾದರೂ ಪಕ್ಷದ ಜವಬ್ದಾರಿ ತೆಗೆದುಕೊಳ್ಳದಿರುವುದಕ್ಕೆ ಕಾರಣವೇನು. ತಾಲೂಕು ಅಧ್ಯಕ್ಷರಾಗಿ ಪದಗ್ರಹಣ ಮಾಡದೆ ಉಳಿದ ಪದಾಧಿಕಾರಿಗಳ ಜವಾಬ್ದಾರಿಗಳನ್ನು ಹೇಗೆ ಹಂಚಿಕೆ ಮಾಡಿದಿರಿ ? ಪಕ್ಷದ ಹಿರಿಯರನ್ನು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಕಾರ್ಯಕರ್ತರ ಗಮನಕ್ಕೂ ಬಾರದೆ ಹಾಗೇ ತಾಲೂಕು ಘಟಕಕ್ಕೆ ವಿವಿಧ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದಾರೆ. ಒಂದು ತಾಲೂಕಿಗೆ ಮೂರು ಪ್ರಧಾನ ಕಾರ್ಯದರ್ಶಿ ಹುದ್ದೆ ಸೃಷ್ಟಿಸಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಸಮಗ್ರ ಕೃಷಿ ಕುರಿತು ಮೂರು ದಿನ ವಸತಿ ಸಹಿತ ತರಬೇತಿ | ಆರ್.ರಜನೀಕಾಂತ್
ಅಧ್ಯಕ್ಷರಾಗಿ ಆಯ್ಕೆಯಾದಾಗಿನಿಂದ ಈವರೆಗೆ ಬೂತ್ ಪ್ರವಾಸ ಮಾಡಿಲ್ಲ. ಬೂತ್ಗಳ ಅಧ್ಯಕ್ಷರ ನೇಮಕವಾಗಿಲ್ಲ. ಬಿಎಲ್ಒ ಗಳನ್ನೂ ನೇಮಿಸಿಲ್ಲ. ಪಕ್ಷದ ಯಾವುದೇ ಕೆಲಸಗಳನ್ನು ಮಾಡದೆ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದಲ್ಲಿ ಉಂಟಾಗಿರುವ ಗೊಂದಲಗಳಿಗೆ ಉತ್ತರಿಸದೆ ಹೋದಲ್ಲಿ ನಿಮ್ಮ ಸರ್ವಾಧಿಕಾರಿ ಧೋರಣೆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.
ಪದಾಧಿಕಾರಿಗಳ ಆಯ್ಕೆ ನಿಯಮ ಉಲ್ಲಂಘನೆ:
ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷದ ನಿಯಮಗಳೇ ಅನ್ವಯವಾಗಿಲ್ಲ. ಅಧ್ಯಕ್ಷರಾಗಬೇಕಾದರೆ, ಮುಂಚಿತವಾಗಿ ಕಾರ್ಯದರ್ಶಿಯಾಗಿ ಕೆಲಸ ಮಾಡಿರಬೇಕು. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾಗಬೇಕಾದರೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕೆಲಸ ಮಾಡಬೇಕು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಆಗಬೇಕಾದರೆ, ಸಕ್ರಿಯ ಸದಸ್ಯರಾಗಿರಬೇಕು. ಸಕ್ರಿಯ ಆಗಬೇಕಾದರೆ, ಮೊದಲು ಪಕ್ಷದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದಿರಬೇಕು. ಇವೆಲ್ಲಾ ನಿಯಮಗಳನ್ನು ಧಿಕ್ಕರಿಸಿ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಗಿದೆ ಎಂದು ದೂರಿದರು.
ಬಿಜೆಪಿ ಮೊದಲು ಗೆಲ್ಲುವ ಕ್ಷೇತ್ರ ಹೊಸದುರ್ಗ:
ವಿಧಾನಸಭಾ ಕ್ಷೇತ್ರದ ಚುನಾವಣೆಗಳಲ್ಲಿ ಮಾಡದಕೆರೆ, ಕಸಬಾ ಹೋಬಳಿಗಳಲ್ಲಿ ಬಿಜೆಪಿ ಪಕ್ಷಕ್ಕೆ ಒಳ್ಳೆಯ ಲೀಡ್ ಬರುತ್ತದೆ. ಆದರೆ, ಶ್ರೀರಾಂಪುರ ಮತ್ತು ಮತ್ತೋಡು ಹೋಬಳಿಗಳಲ್ಲಿ ಮತ ಪ್ರಮಾಣ ಕಡಿಮೆಯಾಗಿ ಸೋತು, ಮನೆ ಕಡೆಗೆ ಹೋಗುತ್ತಿದ್ದೇವೆ. ಶ್ರೀರಾಂಪುರ ಭಾಗಕ್ಕೆ ಸಂಘಟನೆಗೆ ಹೆಚ್ಚಿನ ಹೊತ್ತು ನೀಡಲು ಆ ಭಾಗದ ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕಿತ್ತು. ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿದ ಕಾರ್ಯಕರ್ತರನ್ನ ಕಡೆಗಣಿಸಲಾಗಿದೆ. ನಮ್ಮ ಕೆಲವು ನಾಯಕರ ನಡೆಗಳಿಂದ ಪಕ್ಷದ ಕಾರ್ಯಕರ್ತರು ಮನೆ ಸೇರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ: ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷಕ್ಕೆ ಮೊದಲು ಗೆಲ್ಲುವಂತಹ ಅವಕಾಶವಿರುವುದು ಹೊಸದುರ್ಗ ಕ್ಷೇತ್ರದಲ್ಲಿ ಮಾತ್ರ. ಆದರೆ, ಸ್ಥಳೀಯ ಸಮಸ್ಯೆ ಮತ್ತು ಗೊಂದಲಗಳಿಂದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಾಧ್ಯವಾಗುತ್ತಿಲ್ಲ. ಕಳೆದ 2018ರ ಎಂ.ಎಲ್.ಏ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ಗೂಳಿಹಟ್ಟಿ ಶೇಖರ್ 30 ಸಾವಿರ ಅಂತರಗಳಿಂದ ಗೆದ್ದಿದ್ದರು. ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 10 ಸಾವಿರ ಲೀಡ್ ಆಗಿದೆ. ಎಂ.ಎಲ್.ಸಿ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವು ಪಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಓಬಿಸಿ ಮೋರ್ಚಾ ಮಂಡಲ ಅಧ್ಯಕ್ಷ ಹೇರೂರು ಮಂಜುನಾಥ್, ಮಂಡಲ ಉಪಾಧ್ಯಕ್ಷ ಸಾ.ಚ.ಮಂಜಯ್ಯ, ಯುವ ಮೋರ್ಚಾ ಅಧ್ಯಕ್ಷ ಕಲ್ಲೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಂಪಾ, ಗೂಳಿಹಟ್ಟಿ ರಮೇಶ್, ಸುಮಂತ್ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
