
CHITRADURGA NEWS | 08 FEBRUARY 2025
ಚಿತ್ರದುರ್ಗ: ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಶನಿವಾರ ವೀರಶೈವ ಸಮಾಜದ ವತಿಯಿಂದ ಕುವೆಂಪು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಡಾ.ಬಸವಪ್ರಭು ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
Also Read: SJM ಕಾಲೇಜಿನ ವಿದ್ಯಾರ್ಥಿನಿಗೆ 5ನೇ ರ್ಯಾಂಕ್

ಶ್ರೀಗಳು ಡಾ.ಸಣ್ಣರಾಮಪ್ಪ ಅವರ ಮಾರ್ಗದರ್ಶನದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರ ಸಾಹಿತ್ಯ ಮತ್ತು ಸಂಸ್ಕೃತಿ ವಿಷಯದ ಮೇಲೆ PHD ಮಹಾಪ್ರಬಂಧವನ್ನು ಮಂಡಿಸಿದ್ದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಬಸವಪ್ರಭು ಸ್ವಾಮಿಗಳು, ಜೀವನದಲ್ಲಿ ಋಣಾನುಬಂಧ ಇರುತ್ತದೆ. ತಂದೆ, ತಾಯಿ, ಗುರುಗಳ ಋಣ ಎಲ್ಲರಲ್ಲೂ ಇರುತ್ತೆ. ನನ್ನ ಗುರುಗಳನ್ನು ನಾನು ಯಾವತ್ತೂ ಮರೆಯುವುದಿಲ್ಲ. ಓದಲು ಮುರುಘಾಮಠಕ್ಕೆ ಬಂದೆ. ನಂತರದಲ್ಲಿ ನನಗೆ ದಾವಣಗೆರೆ ವಿರಕ್ತಮಠದ ಜವಾಬ್ದಾರಿ ವಹಿಸಿದರು.
ನಮ್ಮ ಪೂರ್ವಿಕರಿಗೆ ಶ್ರೀಮಠದ ಬಗ್ಗೆ ಅಪಾರ ಭಕ್ತಿ ಇತ್ತು. ನನ್ನನ್ನು ಸಮಾಜದವರು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಹೇಳಿದರು.
Also Read: ದೆಹಲಿಯಲ್ಲಿ ಭರ್ಜರಿ ಗೆಲುವು | ಚಿತ್ರದುರ್ಗದಲ್ಲಿ ಪಟಾಕಿ ಸಿಡಿಸಿದ ಬಿಜೆಪಿ ಕಾರ್ಯಕರ್ತರು
ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎನ್. ತಿಪ್ಪೇಸ್ವಾಮಿ ಮಾತನಾಡಿದರು.
ಎಸ್.ಜೆ.ಎಂ. ಬ್ಯಾಂಕ್ನ ಮ್ಯಾನೇಜರ್ ಟಿ.ಕೆ. ರಾಜಶೇಖರ್, ವೈಜ್ಞಾನಿಕ ಪರಿಷತ್ನ ನಾಗರಾಜ್ ಸಂಗಮ್, ವಿವಿಧ ಸಂಘಟನೆಗಳು ಶ್ರೀಗಳನ್ನು ಸನ್ಮಾನಿಸಿದರು.
Also Read: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಚುನಾವಣೆ | ಕಾರೇಹಳ್ಳಿ ಉಲ್ಲಾಸ್ ಪುನರಾಯ್ಕೆ
ಕಾರ್ಯದರ್ಶಿ ಪಿ.ವೀರೇಂದ್ರಕುಮಾರ್, ಸಹಕಾರ್ಯದರ್ಶಿ ಜಿತೇಂದ್ರ ಎನ್.ಹುಲಿಕುಂಟೆ, ನಿರ್ದೇಶಕ ಎಸ್.ವಿ. ನಾಗರಾಜಪ್ಪ ಸಿದ್ದಾಪುರ, ಡಿ.ಎಸ್.ಮಲ್ಲಿಕಾರ್ಜುನ, ಎಸ್. ಷಡಾಕ್ಷರಯ್ಯ, ಎಸ್.ವಿ.ಕೊಟ್ರೇಶ್, ಡಿ.ವಿ.ಎಸ್. ಪ್ರದೀಪ್, ಕೆ.ಎನ್.ವಿಶ್ವನಾಥಯ್ಯ, ನಿರಂಜನ ದೇವರಮನೆ, ಚಿನ್ಮಯಾನಂದ, ಲತಾ ಉಮೇಶ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
