CHITRADURGA NEWS | 02 SEPTEMBER 2024
ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಎದುರಿನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದ, ತಳ್ಳಾಟ, ನೂಕಾಟ ನಡೆಸಿದ ಪ್ರಸಂಗ ನಡೆಯಿತು.
ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದ ಸಚವೆ ಹೆಬ್ಬಾಳ್ಕರ್ ಅವರನ್ನು ಅದ್ದೂರಿಯಾಗಿ ಕಾಂಗ್ರೆಸ್ ಕಚೇರಿಗೆ ಬರಮಾಡಿಕೊಂಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಕಚೇರಿಯ ಒಳಗೆ ನಡೆದ ಸಭೆಯಲ್ಲಿ ಗೊಂದಲ ಮಾಡಿಕೊಂಡರು.
ಇದನ್ನೂ ಓದಿ: ಇಂದಿನ ಭವಿಷ್ಯ | ಕೈಗೊಂಡ ಕೆಲಸ ನಿಧಾನ, ಕುಟುಂಬ ಸದಸ್ಯರೊಂದಿಗೆ ವಿವಾದ
ಸಚಿವೆ ಇದ್ದ ವೇದಿಕೆಯಲ್ಲಿ ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀಕಾಂತ್ ಮಾತನಾಡುತ್ತಾ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾರ್ಯಕರ್ತರದ್ದು ನಾಯಿಪಾಡಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ವೇದಿಕೆ ಮೇಲಿದ್ದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಮೈಕ್ ಕಿತ್ತುಕೊಳ್ಳಲು ಯತ್ನಿಸಿದರು. ಈ ವೇಳೆ ಪರಸ್ಪರ ತಳ್ಳಾಟ ನೂಕಾಟ ನಡೆಯಿತು.
ಇದನ್ನೂ ಓದಿ: ಅಮೇರಿಕಾದ ಅಕ್ಕಾ ಸಮ್ಮೇಳನದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಭಾಗೀ
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಷ್ಟೊಂದು ಅದ್ದೂರಿಯಾಗಿ ಸ್ವಾಗತ ಮಾಡಿದ್ದೀರಿ. ಇದನ್ನೆಲ್ಲಾ ನೋಡಿ ನಾನು ಮೂಕವಿಸ್ಮಿತಳಾಗಿದ್ದೆ. ಆದರೆ, ಈ ಸಣ್ಣ ಘಟನೆಯಿಂದ ಅದೆಲ್ಲವೂ ಮರೆಮಾಚಿ ಮಾಧ್ಯಮಗಳಲ್ಲಿ ಸಂಜೆವರೆಗೆ ಗಲಾಟೆಯ ಸುದ್ದಿಯೇ ಬರುತ್ತದೆ.
ಪಕ್ಷದ ವೇದಿಕೆಯ ಒಳಗೆ ಇಂತಹ ವಿಚಾರಗಳನ್ನು ಬಗೆಹರಿಸಿಕೊಳ್ಳಬೇಕು. ನಿಮ್ಮ ಅಭಿಪ್ರಾಯವನ್ನು ಪಕ್ಷದ ಅಧ್ಯಕ್ಷರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಮೂಲ ನಕ್ಷೆಯಲ್ಲಿ ಮುಖ್ಯ ರಸ್ತೆಗಳು ವಿಶಾಲವಾಗಿವೆ | ಡಿಸಿ ಟಿ.ವೆಂಕಟೇಶ್
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number