
CHITRADURGA NEWS | 26 NOVEMBER 2025
ಚಿತ್ರದುರ್ಗ: ವಿಶ್ವದಲ್ಲಿರುವ ಎಲ್ಲಾ ಸರ್ವ ಧರ್ಮಗಳ ಸಾರ ಭಾರತದ ಸಂವಿಧಾನದಲ್ಲಿ ಅಡಕವಾಗಿದೆ. ಮಾನವ ಕುಲದ ಶ್ರೇಯೋಭಿವೃದ್ಧಿಯೇ ಸಂವಿಧಾನದ ಆಶಯವಾಗಿದೆ ಎಂದು ಇಂಗ್ಲೀಷ್ ಪ್ರಾಧ್ಯಾಪಕ ಪ್ರೋ. ನಟರಾಜ ಡಿ.ಹೆಚ್ ಅಭಿಪ್ರಾಯ ವ್ಯಕ್ತಪಡಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 26 | ಯಾವ ಅಡಿಕೆಗೆ ಎಷ್ಟು ರೇಟ್
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಗರದ ಲಿಡ್ಕರ್ ಭವನದಲ್ಲಿರುವ ಶಿವಶರಣ ಮಾದಾರ ಚೆನ್ನಯ್ಯ ಸಭಾಭವನದಲ್ಲಿ ಬುಧವಾರ ಆಯೋಜಿಸಲಾದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಜಾಗೃತಿ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.
1946 ರಲ್ಲಿ ಬ್ರಿಟೀಷ್ ಸರ್ಕಾರ ಭಾರತದ ಸಂವಿಧಾನ ರಚನಾ ಸಮಿತಿ ಸ್ಥಾಪಿಸಿತು. ಡಾ. ಸಚ್ಚಿದಾನಂದ ಸಿನ್ಹ ಸಂವಿಧಾನ ಸಭೆಯ ತಾತ್ಕಾಲಿಕ ಅಧ್ಯಕ್ಷರಾಗಿದ್ದರು. ನಂತರ ಡಾ.ರಾಜೇಂದ್ರ ಪ್ರಸಾದ್ ಅವರು ಸಂವಿಧಾನ ರಚನೆ ಸಭೆಯ ಅಧ್ಯಕ್ಷರಾಗಿ, ಡಾ.ಬಿ.ಆರ್.ಅಂಬೇಡ್ಕರ್ ಕರಡು ರಚನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರು.
ಅಂಬೇಡ್ಕರ್ ವಿಶ್ವದ 60 ದೇಶಗಳ ಸಂವಿಧಾನವನ್ನು ಓದಿ ಅರ್ಥೈಸಿಕೊಂಡು ನಮ್ಮ ದೇಶದ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನ ರಚನಾ ಸಭೆ 12 ಬಾರಿ ಅಧಿವೇಶನ ನಡೆಸಿ, ಒಟ್ಟು 2 ವರ್ಷ 11 ತಿಂಗಳು 18 ದಿನಗಳ ಸುಧಿರ್ಘ ಚರ್ಚೆಯ ನಂತರ ಸಂವಿಧಾನದ ಕರಡು ಪ್ರತಿಗೆ 26 ನವೆಂಬರ್ 1949 ರಂದು ಅಂಗೀಕಾರ ದೊರಕಿತು. ಇದರ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26ರನ್ನು ಕಾನೂನು ದಿವಸ್ ಎಂದ ದೇಶದಾದ್ಯಂತ ಆಚರಿಸಲಾಗುತ್ತಿತ್ತು. 2015 ರಿಂದ ಈ ಕಾನೂನು ದಿವಸ್ನ್ನು ಸಂವಿಧಾನ ದಿನ ಎಂದು ಮರುನಾಮಕರಣದೊಂದಿಗೆ ಆಚರಿಸಲಾಗುತ್ತಿದೆ.
ಇದನ್ನೂ ಓದಿ: ಬೀದಿ ನಾಯಿಗಳ ಆಶ್ರಯ ತಾಣ ನಿರ್ಮಿಸಲು ಪ್ರತ್ಯೇಕ ಜಾಗ ಗುರುತಿಸಿ | ADC ಸೂಚನೆ
ಅಂಗೀಕಾರಗೊಂಡ ಸಂವಿಧಾನ 26 ಜನವರಿ 1950 ರಂದು ದೇಶದೆಲ್ಲಡೆ ಜಾರಿಗೆ ಬಂದಿತು. ಜಾರಿಯಾದ ಸಂದರ್ಭದಲ್ಲಿ ಸಂವಿಧಾನ 22 ಭಾಗ, 395 ವಿಧಿ 8 ಅನುಸೂಚಿಗಳನ್ನು ಒಳಗೊಂಡಿತ್ತು. ಪ್ರಸ್ತುತ 25 ಭಾಗ, 448 ವಿಧಿ ಹಾಗೂ 12 ಅನುಸೂಚಿಗಳನ್ನು ಒಳಗೊಂಡಿದೆ. ಸಂವಿಧಾನದ ಮೂಲ ಪ್ರತಿಯನ್ನು ಪ್ರೇಮ್ ಬಿಹಾರಿ ನರೇನ್ ರಾಯಿಜಾದ್ ತಮ್ಮ ಸುಂದರ ಕೈ ಬರಹದ ಅಕ್ಷರಗಳಲ್ಲಿ ಬರೆದಿದ್ದಾರೆ.
ರವೀಂದ್ರನಾಥ್ ಠ್ಯಾಗೂರ್ ಅವರ ಶಾಂತಿ ನಿಕೇತನದ ಪ್ರಸಿದ್ಧ ಚಿತ್ರಕಲಾವಿದ ರಾಮ ಮನೋಹರ ಸಿನ್ಹ ಹಾಗೂ ನಂದಲಾಲ್ ಬೋಸ್ ಅವರು ಸಂವಿಧಾನದ ಪ್ರತಿ ಪುಟದಲ್ಲಿ ಭಾರತದ ಇತಿಹಾಸ ಹಾಗೂ ಸಂಸ್ಕøತಿಗಳನ್ನು ಬಿಂಬಿಸುವ ಚಿತ್ರಗಳನ್ನು ಬರೆದಿದಾರೆ. ಸಂವಿಧಾನ ರಚನೆಯ ಲಾಂಛನ ಆನೆಯಾಗಿತ್ತು.
ಸಂವಿಧಾನ ಜಾರಿಯಾಗಿ 75 ವರ್ಷಪೂರ್ಣಗೊಂಡರು ದೇಶ ಅದರ ಆಧಾರದಲ್ಲಿಯೇ ಮುನ್ನಡೆಯುತ್ತಿದೆ. ನಮ್ಮ ದೇಶದೊಂದಿಗೆ ಉದಯವಾದ ಪಾಕಿಸ್ತಾನ 75 ವರ್ಷದಲ್ಲಿ 03 ಬಾರಿ ಸಂವಿಧಾನವನ್ನು ಬದಲಾಯಿಸಿದೆ. ನೇಪಾಳ 07 ಬಾರಿ ಸಂವಿಧಾನ ಬದಲಾಯಿಸಿದೆ. ಆದರೆ ಭಾರತ ಸಂವಿಧಾನ ಸರ್ವಕಾಲಕ್ಕೂ ಸಲ್ಲುವ ತತ್ವಗಳಿಂದ ಕೂಡಿದ್ದು, ಮುಂದೆಯೂ ದೇಶದ ಮುನ್ನೆಡೆಸಲು ಆಧಾರವಾಗಿದೆ ಎಂದು ಪ್ರೋ. ನಟರಾಜ.ಡಿ.ಹೆಚ್. ಹೇಳಿದರು.
ಇದನ್ನೂ ಓದಿ:
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಹೆಚ್.ಆಂಜನೇಯ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಎಲ್ಲಾ ಧರ್ಮದ ಜನರು ಜ್ಯಾತ್ಯತೀತವಾಗಿ ಹೋರಾಟ ನಡೆಸಿದ್ದಾರೆ. ಇದರ ಫಲವಾಗಿ ಬ್ರೀಟಿಷರ ಗುಲಾಮಗಿರಿಯಿಂದ ನಮಗೆ ಮುಕ್ತಿ ದೊರೆಯಿತು. ನಂತರ ದೇಶದಲ್ಲಿ ಜಾರಿಯಾದ ಸಂವಿಧಾನ, ಮಹಿಳೆಯರು ಹಾಗೂ ಶೋಷಿತರಿಗೆ ನಿಜ ಅರ್ಥದಲ್ಲಿ ಸ್ವಾತ್ರಂತ್ರ್ಯ ಹಾಗೂ ಸಮಾನತೆಯನ್ನು ದೊರಕಿಸಿಕೊಟ್ಟಿತ್ತು. ಸಂವಿಧಾನ ಜಾರಿಯಿಂದ ರಾಜಪ್ರಭುತ್ವ ಕೊನೆಗೊಂಡು ಮತಪೆಟ್ಟಿಗೆಗಳಿಂದ ಜನಪ್ರತಿನಿಧಿಗಳು ಉದಯವಾಗುವಂತೆ ಆಯಿತು.
ಸಂವಿಧಾನ ನಮಗೆ ಹಕ್ಕುಗಳ ಜೊತೆಗೆ ಪಾಲಿಸಬೇಕಾದ ಕರ್ತವ್ಯಗಳನ್ನು ಸಹ ತಿಳಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಶೋಷಿತರಿಗೆ ಸಂವಿಧಾನದ ಮೂಲಕ ನ್ಯಾಯ ದೊರಕಿಸಿಕೊಟ್ಟು ವಿಮೋಚಕರು ಎಂದು ಹೆಸರಾಗಿದ್ದಾರೆ. ಪ್ರತಿಯೊಬ್ಬ ಭಾರತಿಯರಿಗೂ ಆಗಸ್ಟ್ 15 ಹಾಗೂ ಜನವರಿ 26 ರಾಷ್ಟ್ರೀಯ ಹಬ್ಬಗಳಾಗಿವೆ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ ಸಂವಿಧಾನ ಪ್ರತಿಯೊಬ್ಬರಿಗೂ ತಾಯಿ ಇದ್ದಂತೆ, ಯಾವುದೇ ಸರ್ಕಾರಗಳು ಸಂವಿಧಾನ ಉಲ್ಲಂಘಿಸಿ ನಡೆದುಕೊಳ್ಳಬಾರದು ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಿ, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ, ಪ್ರಬಂದ, ಚಿತ್ರಕಲೆ, ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ಇದನ್ನೂ ಓದಿ: ಮುರುಘಾ ಶರಣರು ನಿರ್ದೋಷಿ | ಪೋಕ್ಸೋ ಪ್ರಕರಣದಿಂದ ಬಿಡುಗಡೆ
ವಿದ್ಯಾರ್ಥಿಗಳು ಸಂವಿಧಾನ ಕುರಿತು ಬಿಡಿಸಿದ ಚಿತ್ರಗಳ ಪ್ರದರ್ಶನ ಇದೇ ವೇಳೆ ಏರ್ಪಡಿಸಲಾಗಿತ್ತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಲಿಡ್ಕರ್ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿ.ಪಂ. ಯೋಜನಾಧಿಕಾರಿ ಗಾಯಿತ್ರಿ, ವಕೀಲರ ಸಂಘದ ಅಧ್ಯಕ್ಷ ಮಹೇಶ್ವರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ಸ್ವಾಗತಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ತಂಡ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಡಾ.ನವೀನ್ ಮಸ್ಕಲ್ ಕಾರ್ಯಕ್ರಮ ನಿರೂಪಿಸಿದರು.
ಗಮನ ಸೆಳೆದ ಸಂವಿಧಾನ ಜಾಗೃತಿ ಜಾಥ:
ಸಂವಿಧಾನ ದಿನಾಚರಣೆ ಅಂಗವಾಗಿ ನಗರದ ಐತಿಹಾಸಿಕ ಕೋಟೆ ಆವರಣದ ಬಳಿ ಅಂಬೇಡ್ಕರ್ ಪುತ್ಥಳಿ ಹಾಗೂ ಸಂವಿಧಾನ ಪ್ರತಿಕೃತಿ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಇದನ್ನೂ ಓದಿ: IAS ಅಧಿಕಾರಿ ಮಹಾಂತೇಶ ಬೀಳಗಿ ನಿಧನಕ್ಕೆ ಸಿರಿಗೆರೆ ಶ್ರೀ ಸಂತಾಪ
ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆ ವಿದ್ಯಾರ್ಥಿಗಳು ಸಂವಿಧಾನ ಜಾಗೃತಿಗೆ ಸಂಬಂಧಿಸಿದ ಸಂದೇಶಗಳನ್ನು ಘೋಷಿಸುವ ಮೂಲಕ ಸಂಭ್ರಮ ಹಾಗೂ ಸಡಗರದಿಂದ ಮೆರವಣಿಗೆಯಲ್ಲಿ ನೃತ್ಯದೊಂದಿಗೆ ಹೆಜ್ಜೆಹಾಕಿದರು.
ಮೆರವಣಿಗೆ ಕೋಟೆ ಮುಂಭಾಗದಿಂದ ಪ್ರಾರಂಭವಾಗಿ, ಕಾಮನಬಾವಿ ಬಡಾವಣೆ, ಕರುವಿನಕಟ್ಟೆ ಸರ್ಕಲ್, ಜೋಗಿಮಟ್ಟಿ ರಸ್ತೆ, ಬುದ್ದ ಪ್ರತಿಮೆ, ಸ್ಟೇಡಿಯಂ ರಸ್ತೆ, ಹಳೇ ವೈಶಾಲಿ ವೃತ್ತ, ಮದರಕರಿ ನಾಯಕ ವೃತ್ತದ ಮೂಲಕ ಸಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಮಾಪ್ತಿಗೊಂಡಿತು. ಈ ವೇಳೆ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳಿಸಿಂಗೆ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

A lot of thanks to District administration for having conducted the Constitution day that reached many people of city and surrounding areas. Following of our constitution is nothing but people living with dignity and brotherhood across the society. I salute many times whole heartedly, Dr.BheemRao Ramji Ambedkar,the architect of our great constitution