CHITRADURGA NEWS | 29 JUNE 2025
ಚಿತ್ರದುರ್ಗ: ಸೋಲು-ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ಮಾಡಿ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳಿಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಹೇಳಿದರು.
ALSO READ: ಹೊಸದುರ್ಗ ಬಂದ್ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ರಾಹುಲ್ಗಾಂಧಿ ಯುವ ಜನಾಂಗಕ್ಕೆ ಪಕ್ಷದಲ್ಲಿ ಆದ್ಯತೆ ನೀಡಿದ್ದಾರೆ. ಬ್ಲಾಕ್, ಬೂತ್ ಮಟ್ಟದಲ್ಲಿ ಯುತ್ ಕಾಂಗ್ರೆಸ್ನ್ನು ಸಂಘಟಿಸಿ. 2028 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದಾರೆ. ಉಚಿತ ಗ್ಯಾರೆಂಟಿಗಳಿಂದ 44 ಸಾವಿರ ಕೋಟಿ ರೂ.ಬಡವರ ಮನೆಗಳಿಗೆ ತಲುಪಿದೆ. ಜಿಲ್ಲೆಯಲ್ಲಿ ನಾಲ್ಕು ಕೋಟಿ 36 ಲಕ್ಷ ರೂ.ಗಳನ್ನು ಶಕ್ತಿ ಯೋಜನೆಗೆ ನೀಡಿದೆ.
ಕರ್ನಾಟಕ ಉಸ್ತುವಾರಿ ಹಿಮಾಚಲ ಪ್ರದೇಶದ ನಿಗಮ್ ಭಂಡಾರಿ ಮಾತನಾಡಿ, ರಾಹುಲ್ಗಾಂಧಿ ಯೂಥ್ಸ್ ಗಳಿಗೆ ಅಧಿಕಾರ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ವಿಚಾರ, ತತ್ವ ಸಿದ್ದಾಂತಗಳನ್ನು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತಲುಪಿಸಿ ಶೋಷಿತರು, ರೈತರು, ಮಹಿಳೆಯರ ಪರವಾಗಿ ನಿಲ್ಲಬೇಕು.
ALSO READ: ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ದೇಶದ ಪ್ರಧಾನಿ ನರೇಂದ್ರಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಯುವ ಸಮೂಹವನ್ನು ನಂಬಿಸಿ ವಂಚಿಸಿದ್ದಾರೆ. ಕೊಟ್ಟ ಭರವಸೆ ಯಾವುದು ಈಡೇರಿಲ್ಲ. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಉಳಿಸಿಕೊಂಡು ಐದು ಉಚಿತ ಗ್ಯಾರೆಂಟಿಗಳನ್ನು ನೀಡಿದೆ.
ಕೇಂದ್ರ ಬಿಜೆಪಿ ಸರ್ಕಾರದ ತಪ್ಪು ನಿರ್ಧಾರಗಳನ್ನು ಜನರಿಗೆ ಮನವರಿಕೆ ಮಾಡಿ ಜಾಗೃತಿಗೊಳಿಸಿ ಎಂದರು.
ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್ ಮಾತನಾಡಿ, ರಾಹುಲ್ಗಾಂಧಿ ಪಕ್ಷದಲ್ಲಿ ಯುವಕರಿಗೆ ಪ್ರಾಧಾನ್ಯತೆ ನೀಡಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಸದಸ್ಯರು ನೊಂದಣಿಯಾಗಿದ್ದಾರೆ. ಪ್ರತಿ ಬೂತ್ನಲ್ಲಿಯೂ ಯುವ ಕಾಂಗ್ರೆಸ್ ಶಾಖೆ ತೆರೆದು ಪಕ್ಷ ಸಂಘಟಿಸಿ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸುವುದಾಗಿ ಭರವಸೆ ನೀಡಿದರು.
ಯೂತ್ ಕಾಂಗ್ರೆಸ್ನಲ್ಲಿ ಅಸಮಾಧಾನಗೊಂಡಿರುವವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಬಲಪಡಿಸುತ್ತೇವೆ. ನಿಗಮ ಮಂಡಳಿಗಳ ನೇಮಕದಲ್ಲಿ ಯುವ ಕಾಂಗ್ರೆಸ್ನ್ನು ಪರಿಗಣಿಸುವಂತೆ ರಾಜ್ಯಾಧ್ಯಕ್ಷ ಮಂಜುನಾಥ್ಗೌಡರವರಲ್ಲಿ ವಿನಂತಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿದರು.
ALSO READ: ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಈ ಸಂದರ್ಭದಲ್ಲಿ ವೈಶಾಖ್ ಯಾದವ್, ಸಂದೀಪ್, ಉಸ್ತುವಾರಿ ನಜ್ಮ, ಬಾಹುಬಲಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಗ್ಯಾರೆಂಟಿ ಅನುಷ್ಟಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಡಾ.ದಾದಾಪೀರ್ ಸೇರಿದಂತೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
