CHITRADURGA NEWS | 19 AUGUST 2026
ಚಿತ್ರದುರ್ಗ: ಹರ್ ಘರ್ ಜಲ್ ಘೋಷಣೆಯಾಗಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ, ಕಾಮಗಾರಿ ಪೂರ್ಣಗೊಳಿಸಲು ಕಾಲಾವಧಿ ವಿಸ್ತರಣೆ ಪ್ರಸ್ತಾವನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 4 ದಿನಗಳ ಒಳಗಾಗಿ ನಿಗದಿತ ನಮೂನೆಯಲ್ಲಿ ಗುತ್ತಿಗೆದಾರರು ಮನವಿ ಪತ್ರ ಸಲ್ಲಿಸಬಹುದು ಎಂದು ಜಿ.ಪಂ.ಸಿಇಓ ಡಾ.ಆಕಾಶ್.ಎಸ್ ಹೇಳಿದರು.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ | ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ
ನಗರದ ಜಿಲ್ಲಾ ಪಂಚಾಯಿತಿ ನೀರ್ಲ್ಯಾಬ್ನಲ್ಲಿ ಬುಧವಾರ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜೆ.ಜೆ.ಎಂ. ಅಡಿ ಅನುಷ್ಠಾನಗೊಳಿಸುತ್ತಿರುವ ಹರ್ ಘರ್ ಜಲ್ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವ ಷರತ್ತಿನ ಅನ್ವಯ ಗುತ್ತಿಗೆದಾರರಿಗೆ ಈ ಹಿಂದೆ ಕಾರ್ಯಾದೇಶ ನೀಡಲಾಗಿತ್ತು. ಆದರೆ ಗುತ್ತಿಗೆದಾರರು ಕಾಮಗಾರಿಗಳನ್ನು ಪೂರ್ಣಗೊಳಿಸಿದೆ ಹರ್ ಘರ್ ಜಲ್ ಗ್ರಾಮಗಳ ಘೋಷಣೆಗೆ ವಿಳಂಬವಾಗಿತ್ತು.
ಈ ಹಿಂದೆ ಜುಲೈ 2 ರಂದು ಜರುಗಿದ ಸಭೆಯಲ್ಲಿ, ಪ್ರಾಮಾಣಿಕವಾಗಿ ಕೆಲಸ ಮಾಡುವ ಗುತ್ತಿಗೆದಾರರು ಮುಂದೆ ಬಂದು ಕೆಲಸ ಮುಗಿಸಿಕೊಡಲು ಇಚ್ಛಿಸಿದರೆ, ಕಾಮಗಾರಿ ವಿಳಂಬಕ್ಕೆ ವಿಧಿಸಲಾಗುವ ದಂಡಕ್ಕೆ ವಿನಾಯಿತಿ ನೀಡಲು ತೀರ್ಮಾನಿಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಗುತ್ತಿಗೆದಾರರು ಮನವಿ ಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಕಾಲಾವಧಿ ವಿಸ್ತರಣೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಭದ್ರಾ ಕಾಡಾ ವ್ಯಾಪ್ತಿಗೆ ಚಿತ್ರದುರ್ಗ ಸೇರ್ಪಡೆಗೆ ನೀರಾವರಿ ಹೋರಾಟ ಸಮಿತಿ ಆಗ್ರಹ
ಗುತ್ತಿಗೆದಾರರು ತಮ್ಮ ವ್ಯಾಪ್ತಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ನಮೂನೆ-1 ರಲ್ಲಿ ವಿಳಂಬವಾಗಿದ್ದಕ್ಕೆ ಕಾರಣ ನೀಡಿ ಮನವಿ ಪತ್ರ ಸಲ್ಲಿಸಬೇಕು. ಇದಕ್ಕಾಗಿ 4 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ಮನವಿ ಪತ್ರ ಆಧರಿಸಿ ಆಯಾ ಗ್ರಾ.ಪಂ.ಗಳ ಪಿಡಿಓ ಹಾಗೂ ಆಡಳಿತ ಅಧಿಕಾರಿ, ಶಾಖಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು ನಮೂನೆ-2 ರಲ್ಲಿ ಧೃಢಿಕರಣ ವರದಿಯನ್ನು ನೀಡಬೇಕು.
ಸಹಾಯಕ ಕಾರ್ಯಪಾಲ ಅಭಿಯಂತರರು 7 ದಿನಗಳ ಒಳಗಾಗಿ ಪ್ರಸ್ತಾವನೆ ವರದಿಗಳನ್ನು ನಮೂನೆ-3 ರಲ್ಲಿ ಕಾರ್ಯಾಪಾಲಕ ಅಭಿಯಂತರರಿಗೆ ಸಲ್ಲಿಸಬೇಕು. ಎಲ್ಲಾ ಕಾಮಗಾರಿಗಳ ಪ್ರಸ್ತಾವನೆಗಳನ್ನು ಕ್ರೂಢಿಕರಿಸಿ, ಸೆ.4ರ ಒಳಗಾಗಿ ವಿಭಾಗೀಯ ಕಚೇರಿಗೆ ಸಲ್ಲಿಸಲು ಕಾರ್ಯಪಾಲಕ ಅಭಿಯಂತರರು ಕ್ರಮ ಕೈಗೊಳ್ಳುವಂತೆ ಸಿಇಓ ಡಾ.ಆಕಾಶ್.ಎಸ್ ಸೂಚನೆ ನೀಡಿದರು.
ಬಹುಗ್ರಾಮ ಕುಡಿಯುವ ನೀರು ಯೋಜನೆ ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಪ್ರತಿ ವ್ಯಕ್ತಿಗೆ ಪ್ರತಿ ದಿನ 55 ಲೀಟರ್ ಸರಬರಾಜು ಮಾಡುವುದನ್ನು ಧೃಡಿಕರಿಸಲು ಹಾಗೂ ಮಾಹಿತಿ ಸಂಗ್ರಹಿಸಲು ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ. ಇದರ ಭಾಗವಾಗಿ ಈಗಾಗಲೇ ನೀರ್ ಲ್ಯಾಬ್ ಸ್ಥಾಪಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್….
ಇದೇ ಮಾದರಿಯಲ್ಲಿ ಆರ್.ಓ.ಪ್ಲಾಂಟ್ ಕಾರ್ಯಾಚರಣೆ ಸ್ಥಿತಿಗತಿಯನ್ನು ಮಾನವ ಹಸ್ತಕ್ಷೇಪವಿಲ್ಲದೆ ಮಾಹಿತಿ ಪಡೆಯಲು ಸುಮಾರು 1000 ಆರ್.ಓ.ಪ್ಲಾಂಟ್ಗಳಲ್ಲಿ ತಂತ್ರಜ್ಞಾನ ಆಧಾರಿತ ನೀರಿನ ಹರಿವಿನ ಮೀಟರ್ ಅಳವಡಿಸಲು ಚಿಂತಿಸಲಾಗುತ್ತಿದೆ ಎಂದು ಸಿಇಓ ಡಾ.ಆಕಾಶ್.ಎಸ್ ತಿಳಿಸಿದರು.
ಜಿ.ಪಂ.ಉಪಕಾರ್ಯದರ್ಶಿ ಬಾಬು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಸಂತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಕಾರ್, ಜಲತಜ್ಞ ದೇವರಾಜ ರೆಡ್ಡಿ ಸೇರಿದಂತೆ ಸಹಾಯಕ ಕಾರ್ಯಪಾಲಕ ಇಂಜಿಯರ್ಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

