
CHITRADURGA NEWS | 20 AUGUST 2024
ಚಿತ್ರದುರ್ಗ: ಸ್ಥಳೀಯ ಸಂಸ್ಥೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಘೋಷಣೆಯಾದ ಬೆನ್ನಲ್ಲೇ ಚುನಾವಣೆ ನಡೆಯುತ್ತಿವೆ. ಜಿಲ್ಲೆಯಲ್ಲಿ ಹಿರಿಯೂರು ನಗರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧ ಆಯ್ಕೆ ಮಾಡಲಾಗಿದೆ.
ಹಿರಿಯೂರು ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಜೆ.ಆರ್.ಅಜಯ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಸಿ. ಅಂಬಿಕಾ ಅವಿರೋಧವಾಗಿ ಸೋಮವಾರ ಆಯ್ಕೆಯಾದರು. ಹಿಂದುಳಿದ ವರ್ಗ (ಎ)ಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಹತ್ತು ಸದಸ್ಯರ ನಡುವೆ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ 22ನೇ ವಾರ್ಡ್ ಸದಸ್ಯ ಜೆ.ಆರ್.ಅಜಯ್ ಕುಮಾರ್ ಅವರಿಗೆ ಅದೃಷ್ಟ ಒಲಿಯಿತು. ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಇಲ್ಲದ ಕಾರಣ ನಿರೀಕ್ಷೆಯಂತೆ ಸಿ.ಅಂಬಿಕಾ ಆಯ್ಕೆಯಾದರು.
ಕ್ಲಿಕ್ ಮಾಡಿ ಓದಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತು | ಕರ್ತವ್ಯ ಲೋಪದ ಆರೋಪ
ಆಯ್ಕೆಯ ಬಳಿಕ ಮಾತನಾಡಿದ ಅಜಯ್ ಕುಮಾರ್ , ‘ನಗರದ ಪ್ರಧಾನ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಪ್ರವಾಸಿ ಮಂದಿರ ವೃತ್ತದಿಂದ ವೇದಾವತಿ ಸೇತುವೆವರೆಗೆ ನಡೆಸಲಾಗುತ್ತಿದೆ. ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುವ ಕಾರ್ಯ ಪೂರ್ಣಗೊಂಡಿದೆ. ವೇದಾವತಿ ಸೇತುವೆಯಿಂದ ಗಾಂಧಿ ವೃತ್ತದವರೆಗೆ ರಸ್ತೆ ವಿಸ್ತರಣೆ ಆಗಬೇಕೆಂಬುದು ಸಾರ್ವಜನಿಕರ ಒತ್ತಾಯ. ಇದಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು’ ಎಂದು ಅಜಯ್ ಕುಮಾರ್ ತಿಳಿಸಿದರು.
ನಗರದ ಅಭಿವೃದ್ಧಿ ವಿಚಾರದಲ್ಲಿ ಅಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಉಪಾಧ್ಯಕ್ಷೆ ಸಿ.ಅಂಬಿಕಾ ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
