By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಭಗೀರಥ ಶ್ರೀಗಳ ರಜತ ಮಹೋತ್ಸವಕ್ಕೆ ಕ್ಷಣಗಣನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಭಗೀರಥ ಶ್ರೀಗಳ ರಜತ ಮಹೋತ್ಸವಕ್ಕೆ ಕ್ಷಣಗಣನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಮುಖ್ಯ ಸುದ್ದಿ

ಭಗೀರಥ ಶ್ರೀಗಳ ರಜತ ಮಹೋತ್ಸವಕ್ಕೆ ಕ್ಷಣಗಣನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

News Desk Chitradurga News
Last updated: 9 February 2024 04:39
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 09 FEBRUARY 2024
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಬ್ರಹ್ಮ ವಿದ್ಯಾನಗರ ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಅವರ ಪಟ್ಟಾಭಿಷೇಕದ ರಜತ ಮಹೋತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಸಗರ ಚಕ್ರವರ್ತಿ ಮಹಾಮಂಟಪದ ಹೆಸರಿನ ಬೃಹತ್ ವೇದಿಕೆ ಸಿದ್ಧವಾಗಿದ್ದು, ಶ್ರೀಮಠ ಮದುವಣಗಿತ್ತಿಯಂತೆ ಅಲಂಕೃತಗೊಂಡಿದೆ.

ಬ್ರಹ್ಮ ವಿದ್ಯಾನಗರದ ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನದ ಭಗೀರಥ ಗುರುಪೀಠಕ್ಕೆ 13 ನೇ ಜಗದ್ಗುರುಗಳಾಗಿ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಅವರಿಗೆ 2000 ನೇ ಸಾಲಿನ ಫೆ. 10 ರಂದು ಪಟ್ಟಾಭಿಷೇಕ ನಡೆಯಿತು. ಲೇಪಾಕ್ಷಿ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಡೆದು, ಕೃಷಿ, ಧಾರ್ಮಿಕ, ಆಧ್ಯಾತ್ಮಿಕ, ಶಿಕ್ಷಣದ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | 24ರಂದು ಬ್ರಹ್ಮ ರಥೋತ್ಸವ | ರಥವನ್ನು ಎಳೆದು ತಂದಿದ್ದೇ ಒಂದು ರೋಚಕ

ಫೆ. 9ರ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಿ. ಸುಧಾಕರ್, ಕೆ.ಎನ್. ರಾಜಣ್ಣ, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಮಧು ಬಂಗಾರಪ್ಪ, ಆರ್.ಬಿ. ತಿಮ್ಮಾಪುರ, ಎನ್.ಎಸ್. ಬೋಸರಾಜು, ನಾಗೇಂದ್ರ, ಶಾಸಕರಾದ ಪುಟ್ಟರಂಗಶೆಟ್ಟಿ, ಬಿ.ಜಿ‌. ಗೋವಿಂದಪ್ಪ ಸೇರಿ ಹಲವು ಜನಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಸಾಲುಮರದ ತಿಮ್ಮಕ್ಕ, ಡಾ.ಕೆ.ಎಸ್. ರವೀಂದ್ರನಾಥ್, ಕುಂಸಿ ಚಂದ್ರಪ್ಪ, ವಿಜಯ್ ಕುಮಾರ್ ತೋರ್ಗಲ್, ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ಸವಿತ ಮಹತೋ ಅವರಿಗೆ ‘ಭಗೀರಥರತ್ನ ಪ್ರಶಸ್ತಿ’ ನೀಡಲಾಗುವುದು. ಮಧ್ಯಾಹ್ನ 2ಕ್ಕೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ಫೆ.11ರಂದು ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನೆ ‌| ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನಿಧ್ಯ

ಫೆ. 10ಕ್ಕೆ ಶ್ರೀಮಠದ ಆವರಣದಲ್ಲಿ ಹೋಮ, ಹವನ, ಪೀಠಾರೋಹಣ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರೋಗ್ಯ ಉಚಿತ ತಪಾಸಣಾ ಶಿಬಿರ, ನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕುರಿತ ಪ್ರದರ್ಶನ ಹಾಗೂ ಫೆ. 8ರಿಂದ 10ರವರೆಗೆ ನಿರಂತರ ದಾಸೋಹ ನಡೆಯಲಿದೆ. ಭಗೀರಥ ದೇವಾಲಯ, ಆಂಜನೇಯ ಸೇರಿದಂತೆ ಮಠದ ಆವರಣದಲ್ಲಿನ ಎಲ್ಲಾ ದೇವಾಲಯಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಸಾವಿರಾರು ಜನ ಸೇರುವ ನಿರೀಕ್ಷೆಯಿದೆ. ಈಗಾಗಲೇ ಐದು ಸಾವಿರ ಜನ ಆಗಮಿಸಿದ್ದು, ಅವರಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ರೈತರ ಖಾತೆಗೆ ಬೆಳೆವಿಮೆ | ವಿಮಾ ಕಂಪನಿಗೆ 21 ದಿನ ಡೆಡ್‌ಲೈನ್‌

ಶ್ರೀಮಠದ ಆವರಣದಲ್ಲಿ 60 ಅಡಿ ಎತ್ತರದ ಭಗೀರಥ ಏಕಶಿಲಾ ಮೂರ್ತಿ ನಿರ್ಮಾಣ, ಕಲ್ಲಿನ ಭುವನೇಶ್ವರಿ ದೇವಿ ರಥ ನಿರ್ಮಾಣ, ಉತ್ತರ ಭಾರತದ ಗಂಗಾನದಿ ದಡದಲ್ಲಿ ಭಗೀರಥ ಮೂರ್ತಿ ನಿರ್ಮಾಣದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನದ ವರದಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಮೀಸಲಾತಿಗಾಗಿ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲು ಸಿದ್ಧತೆ ನಡೆಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BhagirathChief MinisterEthnologyRajata Mahotsavastudyಅಧ್ಯಯನಕುಲಶಾಸ್ತ್ರೀಯಭಗೀರಥಮುಖ್ಯಮಂತ್ರಿರಜತ ಮಹೋತ್ಸವ
Share This Article
Facebook Email Print
Previous Article ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | 24 ರಂದು ಬ್ರಹ್ಮ ರಥೋತ್ಸವ | ರಥವನ್ನು ಎಳೆದು ತಂದಿದ್ದೇ ಒಂದು ರೋಚಕ
Next Article ತರಳಬಾಳು ಹುಣ್ಣಿಮೆ ಸರಳ ಆಚರಣೆ | ಅಡ್ಡಪಲ್ಲಕ್ಕಿ ಉತ್ಸವಕ್ಕೆ ಬೇಡವೆಂದ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up