CHITRADURGA NEWS | 25 MAY 2024
ಹಿರಿಯೂರು: ಎದೆ ಮಟ್ಟ ಹರಿಯುವ ಚಾನೆಲ್ ನೀರಿನಲ್ಲಿ ಶವ ಹೊತ್ತು ದಾಟಿ ಸ್ಮಶಾನಕ್ಕೆ ಹೋಗಿ ಅಂತ್ಯಕ್ರಿಯೆ ನಡೆಸಿರುವ ಘಟನೆ ಹಿರಿಯೂರು ತಾಲೂಕಿನಲ್ಲಿ ನಡೆದಿದೆ.
ರಿಯೂರು ತಾಲೂಕು ಹುಚ್ಚವ್ವನಹಳ್ಳಿ ಗ್ರಾಮಕ್ಕೆ ತಾಲೂಕು ಆಡಳಿತ ನೀಡಿರುವ ಸ್ಮಶಾನಕ್ಕೆ ಚಾನೆಲ್ ದಾಟಿ ಹೋಗಬೇಕಿದೆ. ಇಲ್ಲಿಗೆ ಸರಿಯಾದ ರಸ್ತೆ, ಸೇತುವೆ ಇಲ್ಲದ ಕಾರಣ ಈಗ ಹರಿಯುವ ನೀರಿನಲ್ಲಿ ಶವ ಹೊತ್ತು ಸಾಗಿದ ಘಟನೆ ಜರುಗಿದೆ.
ಇದನ್ನೂ ಓದಿ: ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ | ಮೂರು ದಿನದ ಬಳಿಕ ಮತ್ತೆ ಹಾಜರಾದ ಮಳೆರಾಯ
ಗುಯಿಲಾಳು ಟೋಲ್ ಬಳಿ ಮೇ.24 ಶುಕ್ರವಾರ ಹುಚ್ಚವ್ವನಹಳ್ಳಿ ಗ್ರಾಮದ ತಿಪ್ಪೇಸ್ವಾಮಿ ಎಂಬ ವ್ಯಕ್ತಿ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನಡೆಸಲು ಬಂಧುಗಳು, ಸಂಬಂಧಿಕರು ತಿಪ್ಪೇಸ್ವಾಮಿ ಅವರ ಮೃತ ದೇಹ ಹೊತ್ತು ಇಳಿ ಜಾರಿನ ಚಾನೆಲ್ ಇಳಿದು, ನೀರಿನಲ್ಲಿ ಸಾಗಿ ಮತ್ತೆ ಮೇಲೇರಿ ಸ್ಮಶಾನ ತಲುಪಿದ್ದಾರೆ.
ಇದನ್ನೂ ಓದಿ: ಬೆಸ್ಕಾ ಕಚೇರಿ ಸ್ಥಳಾಂತರ | ಇನ್ನೂ ವಿದ್ಯುತ್ ಬಿಲ್ ಕಟ್ಟಲು ಇಲ್ಲಿಗೆ ಬನ್ನಿ
ನೀರಿನಲ್ಲಿ ಶವ ಸಾಗಿಸುವಾಗ ವ್ಯಕ್ತಿಯೊಬ್ಬರ ಕೈಗೆ ಪೆಟ್ಟಾದ ಘಟನೆಯೂ ನಡೆದಿದೆ.
ಮಳೆ ಬಂದಾಗ ಹಾಗೂ ವಿವಿ ಸಾಗರದಿಂದ ನೀರು ಬಿಟ್ಟಾಗ ಇಲ್ಲಿ ಸಮಸ್ಯೆ ಆಗುತ್ತಿದ್ದು, ಸೇತುವೆ ಹಾಗೂ ರಸ್ತೆ ವ್ಯವಸ್ಥೆ ಕಲ್ಪಿಸದ ತಾಲೂಕು ಆಡಳಿತದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
