By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಲೋಕ ಸಮರಕ್ಕೆ ಡೇಟ್‌ ಫಿಕ್ಸ್‌ | ಏ.26, ಮೇ 7ಕ್ಕೆ ಮತದಾನ | ಜೂನ್ 4 ಫಲಿತಾಂಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಲೋಕ ಸಮರಕ್ಕೆ ಡೇಟ್‌ ಫಿಕ್ಸ್‌ | ಏ.26, ಮೇ 7ಕ್ಕೆ ಮತದಾನ | ಜೂನ್ 4 ಫಲಿತಾಂಶ

ಲೋಕಸಮರ 2024

ಲೋಕ ಸಮರಕ್ಕೆ ಡೇಟ್‌ ಫಿಕ್ಸ್‌ | ಏ.26, ಮೇ 7ಕ್ಕೆ ಮತದಾನ | ಜೂನ್ 4 ಫಲಿತಾಂಶ

News Desk Chitradurga News
Last updated: 16 March 2024 16:36
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 MARCH 2024
ಚಿತ್ರದುರ್ಗ: ಬಿಸಿಲಿನಂತೆ ಲೋಕಸಭೆ ಚುನಾವಣೆ 2024 ರ ಕಾವು ಜೋರಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಘೋಷಿಸಿದರು.

ಏಪ್ರಿಲ್ 19ರಂದು ಮೊದಲ ಹಂತದ ಮತದಾನ, ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಮೇ 7ರಂದು ಮೂರನೇ ಹಂತದ ಮತದಾನ, ಮೇ 20 ರಂದು ನಾಲ್ಕನೇ ಹಂತದ ಮತದಾನ, ಮೇ 25 ರಂದು ಐದನೇ ಹಂತದ ಮತದಾನ, ಮೇ 25 ರಂದು ಐದನೇ ಹಂತದ ಮತದಾನ, ಜೂನ್ 1 ರಂದು ಐದನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

ಕ್ಲಿಕ್ ಮಾಡಿ ಓದಿ: https://chitradurganews.com/payment-of-crop-insurance-within-a-week

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26, ಉತ್ತರ ಕರ್ನಾಟಕದಲ್ಲಿ ಹಾಗೂ ಮೇ 7ಕ್ಕೆ ಮತದಾನ ನಡೆಯಲಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 14,18,211 ಮತದಾರರು ಇದ್ದಾರೆ. 7,04,896 ಪುರುಷರು ಹಾಗೂ 7,13,228 ಮಹಿಳಾ ಮತದಾರರು ಮತ್ತು 87 ಇತರೆ ಮತದಾರರು ಸೇರಿ ಒಟ್ಟು 14,18,211 ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,661 ಮತಗಟ್ಟೆಗಳಿವೆ. ಮತದಾರರ ಅಂತಿಮ ಪಟ್ಟಿಯಲ್ಲಿ 18-19 ವರ್ಷ ವಯೋಮಿತಿಯ ಯುವ ಮತದಾರರು 35,683 ಮಂದಿ ಇದ್ದಾರೆ.
ಮೊಳಕಾಲ್ಮುರು: 2,49,252, ಚಳ್ಳಕೆರೆ: 2,22,560, ಚಿತ್ರದುರ್ಗ: 2,64,248, ಹಿರಿಯೂರು: 2,45,728, ಹೊಸದುರ್ಗ: 1,99,457 ಹಾಗೂ ಹೊಳಲ್ಕೆರೆ ಕ್ಷೇತ್ರದಲ್ಲಿ 2,36,966 ಮತದಾರರಿದ್ದಾರೆ.

ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.

ದೇಶದಲ್ಲಿ ಮೊದಲ ಬಾರಿ ಮತ ಚಲಾವಣೆ ಮಾಡಲಿದ್ದಾರೆ 1.8 ಕೋಟಿ ಮತದಾರರು. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.

ಕ್ಲಿಕ್ ಮಾಡಿ ಓದಿ: https://chitradurganews.com/farmers-struggle-to-save-crops/

12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.

ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್‌ಡೆಸ್ಕ್‌, ವಿದ್ಯುತ್‌ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್‌ ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ.
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್‌ಪೋಸ್ಟ್‌ ಇರಲಿವೆ, ಡ್ರೋನ್‌ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್‌ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು ರೌಡಿಶೀಟರ್‌ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು.

ಅಕ್ರಮದ ಬಗ್ಗೆ ಆ್ಯಪ್‌ ಮೂಲಕ ಮಾಹಿತಿ ಲಭ್ಯ ಇರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್‌ನಲ್ಲಿರಲಿದೆ. ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ನಿಗಾ ಇಡಲಾಗುವುದು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ. ರೈಲ್ವೆ ಸ್ಟೇಷನ್‌, ಏರ್‌ಪೋರ್ಟ್‌ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ಹೇಳಿದರು.

ಕ್ರಿಮಿನಲ್‌ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು. 11 ರಾಜ್ಯಗಳ ಚುನಾವಣೆಯಲ್ಲಿ 3,400 ಕೋಟಿ ರೂ. ಸೀಜ್‌ ಮಾಡಲಾಗಿದೆ. ಚುನಾವಣೆ ವೇಳೆ‌ ವಶಕ್ಕೆ‌ 3,400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು. ಎಲ್ಲ ಬ್ಯಾಂಕ್‌ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ನಿರ್ದೇಶನ ನೀಡಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:DeclarationElectionLok SabharesultVotingಘೋಷಣೆಚುನಾವಣೆಫಲಿತಾಂಶಮತದಾನಲೋಕಸಭೆ
Share This Article
Facebook Email Print
Previous Article ಶಕ್ತಿ ಯೋಜನೆಯಡಿ 1.52 ಕೋಟಿ ಮಹಿಳೆಯರ ಪ್ರಯಾಣ | ₹ 52 ಕೋಟಿ ಲಾಭ
Next Article ಚಿತ್ರದುರ್ಗದ ಮತದಾರರೇ ಇಲ್ಲಿದೆ ನೋಡಿ ನಿಮ್ಮ ಮತದಾನದ ದಿನ | ಮಿಸ್ ಮಾಡದೇ ವೋಟ್ ಮಾಡಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up