ಇಲ್ಲಿ ನಂದೇನು ಹೊಲ ಇಲ್ಲ, ನನಗೆ ಬೆಳೆವಿಮೆ ಬರಲ್ಲ: ರೈತರ ಹಿತವಷ್ಟೇ ಮುಖ್ಯ | ಡಿಸಿ ದಿವ್ಯಪ್ರಭು

ಜಿಲ್ಲಾಧಿಕಾರಿ, ದಿವ್ಯಪ್ರಭು

ಚಿತ್ರದುರ್ಗ ನ್ಯೂಸ್.ಕಾಂ: ಇಲ್ಲಿ ನನ್ನದೇನು ಹೊಲ ಇಲ್ಲಪ್ಪ, ನನ್ನ ಖಾತೆಗೆ ಬೆಳೆ ವಿಮೆ ಬರುವುದಿಲ್ಲ. ಜಿಲ್ಲೆಯ ರೈತರ ಹಿತ ಕಾಯುವುದಷ್ಟೇ ನನ್ನ ಕೆಲಸ.

ಹೀಗೆ ನಿಷ್ಠುರವಾಗಿ ವಿಮಾ ಕಂಪನಿ ಅಧಿಕಾರಿಗಳಿಗೆ ಹೇಳುವ ಮೂಲಕ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಬರಪೀಡಿತ ಜಿಲ್ಲೆಯ ರೈತರಿಗೆ ನೆರವಾಗುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: ಜಿಲ್ಲೆಯಲ್ಲಿ ಬರಗಾಲ, ಶೇ.25ರಷ್ಟು ಮಧ್ಯಂತರ ಪರಿಹಾರಕ್ಕೆ ಸರ್ಕಾರಕ್ಕೆ ಶಿಫಾರಸ್ಸು | ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿ ರೈತರು, ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತರು, ಕೃಷಿ, ತೋಟಗಾರಿಕೆ ಅಧಿಕಾರಿಗಳು, ವಿಜ್ಞಾನಿಗಳು ಹಾಗೂ ವಿಮಾ ಕಂಪನಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆಯಾಗದೆ ಬೆಳೆ ಹಾನಿಯಾಗಿರುವುದು, ರೈತರು ಹಾಕಿದ ಬಂಡವಾಳವೂ ಸಿಗದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ನೀವು ಎಲ್ಲ ಕಡೆ ಪ್ರವಾಸ ಮಾಡಿ ರೈತರ ಜತೆ ಮಾತಾಡಿ, ಕೃಷಿ ಭೂಮಿಗಳಿಗೆ ಭೇಟಿ ನೀಡಿದ್ದೀರಾ ಎಂದು ವಿಮಾ ಕಂಪನಿ ಅಧಿಕಾರಿಗಳನ್ನು ಪ್ರಶ್ನಿಸಿದರು.

ಈ ವೇಳೆ ಬೆಳವಿಮೆ ಕಟ್ಟಿಸಿಕೊಂಡಿರುವ ಕಂಪನಿಯವರು, ಶೇಂಗಾ ಬೆಳೆ ಹಾನಿಯಾಗಿದೆ. ಈರುಳ್ಳಿ ಕುರಿತು ಇನ್ನೂ ಮಾಹಿತಿ ಪಡೆದುಕೊಂಡಿಲ್ಲ ಎಂದು ಹೇಳಿದರು.

ಈ ವೇಳೆ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಯಾವ ಬೆಳೆಯೂ ಬಂದಿಲ್ಲ. ಈ ಬಗ್ಗೆ ಸ್ವತಃ ಕೃಷಿ ಸಚಿವರೇ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃಷಿ ವಿಜ್ಞಾನಿಗಳು ಕೂಡಾ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಬೆಳೆಗಳ ಈಗಿನ ಸ್ಥಿತಿ ಅರಿತು ವರದಿ ನೀಡಿದ್ದಾರೆ ಎಂದರು.

ಮಧ್ಯಂತರ ಪರಿಹಾರಕ್ಕೆ ಸರ್ಕಾರಕ್ಕೆ ಶಿಫಾರಸ್ಸು

ಜಿಲ್ಲೆಯಲ್ಲಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲೆಯಲ್ಲಿ 83,606 ರೈತರು ನೊಂದಣಿ ಮಾಡಿಕೊಡಿದ್ದಾರೆ. ಒಟ್ಟು 11.92 ಕೋಟಿ ರೂಪಾಯಿ ಪ್ರೀಮಿಯಂ ಮೊತ್ತ ಪಾವತಿಸಲಾಗಿದೆ. ಶೇ.80 ರಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣಕ್ಕೆ ಮಧ್ಯಂತರ ಪರಿಹಾರವಾಗಿ ಶೇ.25 ರಷ್ಟನ್ನು ಬಿಡುಗಡೆ ಮಾಡಬೇಕಿದೆ ಎಂದು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ರೈತರ ಪರವಾಗಿ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಾ, ಬರ ಪರಿಸ್ಥಿತಿಯನ್ನು ವಿಮಾ ಕಂಪನಿಗಳು ಹಾಗೂ ಸರ್ಕಾರಕ್ಕೆ ಮನದಟ್ಟು ಮಾಡುವಲ್ಲಿ ತೋರಿದ ಆಸಕ್ತಿಯನ್ನು ಮೆಚ್ಚಿಕೊಂಡ ರೈತರು ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version