CHITRADURGA NEWS | 07 SEPTRMBER 2024
ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC BANK) ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಹಾಲಿ ಬ್ಯಾಂಕಿನ ಅಧ್ಯಕ್ಷ ಸಚಿವ ಡಿ.ಸುಧಾಕರ್ ಸೇರಿದಂತೆ 6 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಡಿಸಿಸಿ ಬ್ಯಾಂಕ್ನಲ್ಲಿ ಸುಧಾಕರ್ ಹಿಡಿಯ ಮತ್ತಷ್ಟು ಬಿಗಿಯಾಗಿದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಶಾಸಕ ಟಿ.ರಘುಮೂರ್ತಿ ನಾಮಪತ್ರ ತಿರಸ್ಕøತ

ನಾಮಪತ್ರಗಳ ಪರಿಶೀಲನೆ ನಂತರ, ಹಿಂಪಡೆಯಲು ಸೆ.6 ಶುಕ್ರವಾರ ಕಡೆಯ ದಿನವಾಗಿತ್ತು. ಎಲ್ಲ ಪ್ರಕ್ರಿಯೆಗಳ ನಂತರ ಚಳ್ಳಕೆರೆಯ ನಗರಂಗೆರೆ ಸೊಸೈಟಿ ಪ್ರತಿನಿಧಿಯಾಗಿ ಸ್ಪರ್ಧೆ ಮಾಡಿದ್ದ ಡಿ.ಸುಧಾಕರ್ ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಹೊಳಲ್ಕೆರೆಯಿಂದ ಎಸ್.ಆರ್.ಗಿರೀಶ್, ಹಿರಿಯೂರಿನಿಂದ ಒ.ಮಂಜುನಾಥ್, ಟಿಎಪಿಸಿಎಂಎಸ್ನಿಂದ ಎಚ್.ಬಿ.ಮಂಜುನಾಥ್, ನೇಕಾರಿಕೆ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜಗಣ್ಣ, ಪಟ್ಟಣ ಸಹಕಾರ ಬ್ಯಾಂಕ್ ಕ್ಷೇತ್ರದಿಂದ ರಘುರಾಮರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಎತ್ತಿನಹೊಳೆ ಪ್ರಾಜೆಕ್ಟ್ ಬಟನ್ ಹೊಡೆಯಿರಿ | ಜನರಿಗೆ ಸುಳ್ಳು ಹೇಳಬೇಡಿ
ಹಾಲು ಉತ್ಪಾಧಕರ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರೂ, ಅವರ ವಿರುದ್ಧವಾಗಿ ನಾಮಪತ್ರ ಸಲ್ಲಿಸಿರುವ ಶಶಿಧರ್ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಘೋಷಣೆ ನಡೆ ಹಿಡಿಯಲಾಗಿದೆ.
ಸೆ.9ರ ನ್ಯಾಯಾಲಯದ ತೀರ್ಪು ಆಧರಿಸಿ ಉಳಿದ 5 ಅಥವಾ 6 ಸ್ಥಾನಗಳಿಗೆ ಸೆ.12ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆದು, ಅದೇ ದಿನ ಫಲಿತಾಂಶ ಘೋಷಣೆ ಆಗಲಿದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
