Connect with us

    DCC BANK ಚುನಾವಣೆ | ಸಚಿವ ಡಿ.ಸುಧಾಕರ್ ಸೇರಿ 6 ಮಂದಿ ಅವಿರೋಧ ಆಯ್ಕೆ

    dcc bank election

    ಮುಖ್ಯ ಸುದ್ದಿ

    DCC BANK ಚುನಾವಣೆ | ಸಚಿವ ಡಿ.ಸುಧಾಕರ್ ಸೇರಿ 6 ಮಂದಿ ಅವಿರೋಧ ಆಯ್ಕೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 07 SEPTRMBER 2024

    ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC BANK) ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಹಾಲಿ ಬ್ಯಾಂಕಿನ ಅಧ್ಯಕ್ಷ ಸಚಿವ ಡಿ.ಸುಧಾಕರ್ ಸೇರಿದಂತೆ 6 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಡಿಸಿಸಿ ಬ್ಯಾಂಕ್‍ನಲ್ಲಿ ಸುಧಾಕರ್ ಹಿಡಿಯ ಮತ್ತಷ್ಟು ಬಿಗಿಯಾಗಿದೆ.

    ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಶಾಸಕ ಟಿ.ರಘುಮೂರ್ತಿ ನಾಮಪತ್ರ ತಿರಸ್ಕøತ

    ನಾಮಪತ್ರಗಳ ಪರಿಶೀಲನೆ ನಂತರ, ಹಿಂಪಡೆಯಲು ಸೆ.6 ಶುಕ್ರವಾರ ಕಡೆಯ ದಿನವಾಗಿತ್ತು. ಎಲ್ಲ ಪ್ರಕ್ರಿಯೆಗಳ ನಂತರ ಚಳ್ಳಕೆರೆಯ ನಗರಂಗೆರೆ ಸೊಸೈಟಿ ಪ್ರತಿನಿಧಿಯಾಗಿ ಸ್ಪರ್ಧೆ ಮಾಡಿದ್ದ ಡಿ.ಸುಧಾಕರ್ ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

    ಹೊಳಲ್ಕೆರೆಯಿಂದ ಎಸ್.ಆರ್.ಗಿರೀಶ್, ಹಿರಿಯೂರಿನಿಂದ ಒ.ಮಂಜುನಾಥ್, ಟಿಎಪಿಸಿಎಂಎಸ್‍ನಿಂದ ಎಚ್.ಬಿ.ಮಂಜುನಾಥ್, ನೇಕಾರಿಕೆ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜಗಣ್ಣ, ಪಟ್ಟಣ ಸಹಕಾರ ಬ್ಯಾಂಕ್ ಕ್ಷೇತ್ರದಿಂದ ರಘುರಾಮರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಇದನ್ನೂ ಓದಿ: ಎತ್ತಿನಹೊಳೆ ಪ್ರಾಜೆಕ್ಟ್ ಬಟನ್ ಹೊಡೆಯಿರಿ | ಜನರಿಗೆ ಸುಳ್ಳು ಹೇಳಬೇಡಿ

    ಹಾಲು ಉತ್ಪಾಧಕರ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರೂ, ಅವರ ವಿರುದ್ಧವಾಗಿ ನಾಮಪತ್ರ ಸಲ್ಲಿಸಿರುವ ಶಶಿಧರ್ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಘೋಷಣೆ ನಡೆ ಹಿಡಿಯಲಾಗಿದೆ.

    ಸೆ.9ರ ನ್ಯಾಯಾಲಯದ ತೀರ್ಪು ಆಧರಿಸಿ ಉಳಿದ 5 ಅಥವಾ 6 ಸ್ಥಾನಗಳಿಗೆ ಸೆ.12ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆದು, ಅದೇ ದಿನ ಫಲಿತಾಂಶ ಘೋಷಣೆ ಆಗಲಿದೆ.

    ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top