CHITRADURGA NEWS | 12 SEPTEMBER 2024
ಚಿತ್ರದುರ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಡಿಸಿಸಿ) ನಿರ್ದೇಶಕರ ಸ್ಥಾನಗಳಿಗೆ ಇಂದು ಸೆ.12 ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದೆ.
ಒಟ್ಟು 12 ನಿರ್ದೇಶಕರ ಸ್ಥಾನಗಳಿದ್ದು, ಇದರಲ್ಲಿ 7 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೈಪೋಟಿ ಇರುವ 5 ಕ್ಷೇತ್ರಗಳಿಗೆ ಇಂದು ಡಿಸಿಸಿ ಬ್ಯಾಂಕಿನೊಳಗೆ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಶಾಸಕ ಟಿ.ರಘುಮೂರ್ತಿಗೆ ಹಿನ್ನಡೆ
ಚುನಾವಣೆ ಹಿನ್ನೆಲೆಯಲ್ಲಿ ಬ್ಯಾಂಕಿನ ಕೆಳ ಮಹಡಿಯಲ್ಲಿ 3 ಬೂತ್ ಹಾಗೂ 1ನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ 2 ಬೂತ್ ಸ್ಥಾಪನೆ ಮಾಡಲಾಗಿದೆ. ಸಂಜೆ 4 ಗಂಟೆ ನಂತರ ಮತ ಎಣಿಕೆ ಪ್ರಾರಂಭವಾಗಲಿದ್ದು, 7 ಗಂಟೆ ವೇಳೆಗೆ ಫಲಿತಾಂಶ (RESULT) ಪ್ರಕಟವಾಗುವ ಸಾಧ್ಯತೆ ಇದೆ.
ಚಿತ್ರದುರ್ಗದಲ್ಲಿ ತ್ರಿಕೋನ, ನಾಲ್ಕರಲ್ಲಿ ನೇರ ಹಣಾಹಣಿ:
‘ಎ’ ವರ್ಗದಲ್ಲಿ ಬರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚಿತ್ರದುರ್ಗ ಕ್ಷೇತ್ರದಿಂದ ಟಿ.ಪಿ.ಅನೂಪ್, ಎಚ್.ಎಂ.ದ್ಯಾಮಣ್ಣ ಹಾಗೂ ಬಿ.ಮಂಜುನಾಥ್ ಅವರ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಉಳಿದಂತೆ ಹೊಸದುರ್ಗ ‘ಎ’ ಕ್ಷೇತ್ರದಿಂದ ಕೆ.ಅನಂತ್ ಹಾಗೂ ಎಚ್.ಬಸವರಾಜ್ ನಡುವೆ ಪೈಪೋಟಿ ಇದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ ಫಿಕ್ಸ್ | ಘಟಾನುಘಟಿಗಳ ನಡುವೆ ಪೈಪೋಟಿ
ಮೊಳಕಾಲ್ಮೂರು ಕ್ಷೇತ್ರದಿಂದ ಎಚ್.ಟಿ.ನಾಗೀರೆಡ್ಡಿ ಹಾಗೂ ಜಿಂಕಲ್ ಬಸವರಾಜ್ ನಡುವೆ ಪೈಪೋಟಿ ಇದ್ದರೆ, ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಹಾಲು ಉತ್ಪಾಧಕರ ಸಹಕಾರ ಸಂಘ ಕ್ಷೇತ್ರದಿಂದ ಎಂ.ಭಾರತಿ ಹಾಗೂ ಪಿ.ವಿನೋದಸ್ವಾಮಿ ನಡುವೆ ಪೈಪೋಟಿ ಏರ್ಪಟ್ಟಿದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ ಸಚಿವ ಡಿ.ಸುಧಾಕರ್ ಸೇರಿ 6 ಜನ ಅವಿರೋಧ ಆಯ್ಕೆ
ಜಿಲ್ಲೆಯ ಇತರೆ ಸಹಕಾರಿ ಕ್ಷೇತ್ರದಿಂದ ಬಿ.ಸಿ.ಸಂಜೀವಮೂರ್ತಿ ಹಾಗೂ ನಿಶಾನಿ ಎಂ.ಜಯ್ಯಣ್ಣ ನಡುವೆ ಪೈಪೋಟಿ ಇದೆ.
59 ಮತದಾರರಿಂದ ಮತದಾನ ಪ್ರಕ್ರಿಯೆ:
‘ಎ’ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ನಡೆಯುವ ಹೊಸದುರ್ಗ ಕ್ಷೇತ್ರದಿಂದ 19 ಮತದಾರರಿದ್ದರೆ, ಚಿತ್ರದುರ್ಗ ತಾಲೂಕಿನಲ್ಲಿ 14 ಮತದಾರರಿದ್ದಾರೆ. ಮೊಳಕಾಲ್ಮೂರು ತಾಲೂಕಿನಲ್ಲಿ 11 ಮತದಾರರಿದ್ದಾರೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ
ಇತರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಫ್ ವರ್ಗದಲ್ಲಿ 10 ಮತದಾರರಿದ್ದಾರೆ. ಹಾಲು ಉತ್ಪಾಧಕರ ಕ್ಷೇತ್ರದ ಡಿ ವರ್ಗದಲ್ಲಿ 5 ಮತದಾರರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
