ಡಿಸೆಂಬರ್ 31ಕ್ಕೆ ಹೊಸ ರೈಲು ನಿಲ್ದಾಣ ಉದ್ಘಾಟನೆಗೆ ಗಡುವು | ಗೋವಿಂದ ಕಾರಜೋಳ

ಹೊಸ ರೈಲು ನಿಲ್ದಾಣ ಕಟ್ಟಡ ಕಾಮಗಾರಿಯನ್ನು ಸಂಸದರಾದ ಗೋವಿಂದ ಕಾರಜೋಳ ಅವರು ವೀಕ್ಷಿಸಿದರು

CHITRADURGA NEWS | 19 JUNE 2025

ಚಿತ್ರದುರ್ಗ: ನಗರದ ರೈಲ್ವೆ ಸ್ಟೇಷನ್ ಬಳಿ ಹೊಸ ರೈಲು ನಿಲ್ದಾಣ ಕಟ್ಟಡ ಕಾಮಗಾರಿಯನ್ನು ಗುರುವಾರ ಸಂಸದರಾದ ಗೋವಿಂದ ಕಾರಜೋಳ ಅವರು ವೀಕ್ಷಿಸಿದರು.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ನಂತರ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ಆರಂಭಗೊಂಡಿರುವ ನೂತನ ಕಟ್ಟಡ ಕಾಮಗಾರಿ ಯಾವಾಗಲೋ ಉದ್ಘಾಟನೆಯಾಗಬೇಕಿತ್ತು, ತಡವಾಗಿದೆ. ಡಿಸೆಂಬರ್ 31ಕ್ಕೆ ಉದ್ಘಾಟಿನೆ ಇಟ್ಟುಕೊಳ್ಳಿ ಎಂದು ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಚಿಕ್ಕಜಾಜೂರು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮುರು, ಬಳ್ಳಾರಿವರೆಗೆ ರೈಲ್ವೆಗೆ ರೂ.3400 ಕೋಟಿ ಅನುದಾನ ಸಿಕ್ಕಿದೆ. ಇದರಿಂದ ಆರ್ಥಿಕ ಹಾಗೂ ವ್ಯಾಪಾರ ವಹಿವಾಟಿಗೆ ಅನುಕೂಲವಾಗುತ್ತದೆ. ಪಾವಗಡ-ಮಡಕಶಿರ ರೈಲು ಮಾರ್ಗಕ್ಕೆ ರೂ.265 ಕೋಟಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಸೌಲಭ್ಯಗಳನ್ನು ಒದಗಿಸಬೇಕಷ್ಟೆ.

ಚಿಕ್ಕಜಾಜೂರು, ಚಿತ್ರದುರ್ಗ, ಹಳಿಯೂರು ರೈಲ್ವೆ ಗೇಟ್‍ಗಳಿಗೆ ಕೇಂದ್ರ ಒಪ್ಪಿಗೆ ನೀಡಿದೆ. ಚಿತ್ರದುರ್ಗದಲ್ಲಿ ದಿನಕ್ಕೆ 30 ಸಾರಿ ರೈಲ್ವೆ ಗೇಟ್ ಹಾಕುವುದರಿಂದ ಬಹಳ ತೊಂದರೆಯಾಗುತ್ತಿದೆ. ಇಲ್ಲಿ ಅಂಡರ್ ಬ್ರಿಡ್ಜ್ ನಿರ್ಮಾಣ ಕುರಿತು ಕೇಂದ್ರದ ಜೊತೆ ಮಾತನಾಡುತ್ತೇನೆ ಎಂದರು.

Also Read: ಹುಲ್ಲಿನ ಮೇಲೆ ಬರಿಗಾಲಿನಲ್ಲಿ ಮಕ್ಕಳು ನಡೆದರೆ ಏನೆಲ್ಲಾ ಪ್ರಯೋಜನವಿದೆ ಎಂದು ತಿಳಿದರೆ ನೀವೇ ಶಾಕ್ ಆಗ್ತೀರಾ

ಚಿತ್ರದುರ್ಗ, ದಾವಣಗೆರೆಗೆ ರೂ.550 ಕೋಟಿಗಳನ್ನು ನೀಡಲಾಗಿದೆ. 5 ಸಾವಿರ ಕೋಟಿ ರೂ.ಗಳಿಗಿಂತಲೂ ಹೆಚ್ಚು ಹಣ ಬಂದಿದೆ ಎಂದು ತಿಳಿಸಿದರು.

ನೂತನ ಕಟ್ಟಡದಲ್ಲಿ ವಾಹನಗಳ ನಿಲುಗಡೆಗೆ ಪ್ರತ್ಯೇಕ ಜಾಗವಿರಬೇಕು. 2023 ಡಿಸೆಂಬರ್ ನಲ್ಲಿ ಆರಂಭಗೊಂಡ ಕಾಮಗಾರಿ ಇನ್ನು ಏಕೆ ಮುಗಿದಿಲ್ಲ. ತಡವಾಗುವುದು ಬೇಡ. ಚುರುಕಿನಿಂದ ಕೆಲಸವಾಗಬೇಕು.

ರೂ.12 ಕೋಟಿ ಕಾಮಗಾರಿಗೆ ಚಿತ್ರದುರ್ಗದಲ್ಲಿ ಯಾರು ಥರ್ಡ್ ಪಾರ್ಟಿ ಇನ್ಸ್‍ಪೆಕ್ಷನ್ ಸಿಗಲಿಲ್ಲವೇ ಎಂದು ರೈಲ್ವೆ ಅಧಿಕಾರಿಯನ್ನು ಪ್ರಶ್ನಿಸಿದ ಸಂಸದ ಗೋವಿಂದ ಕಾರಜೋಳರವರು ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆಯೇ ಇಲ್ಲವೋ ಎನ್ನುವುದನ್ನು ಉಪವಿಭಾಗಾಧಿಕಾರಿಗೆ ಕೇಳಿ ಎಂದು ಸೂಚಿಸಿದರು.

ಅಮೃತ ಭಾರತ್ ರೈಲ್ವೆ ಸ್ಟೇಷನ್ ಮಾಡಬೇಕೆಂಬುದು ದೇಶದ ಪ್ರಧಾನಿ ಮೋದಿರವರ ಕನಸು. ಕೇಂದ್ರ ಸರ್ಕಾರದಲ್ಲಿ ದುಡ್ಡಿಗೆ ತೊಂದರೆಯಿಲ್ಲ. ತುರ್ತಾಗಿ ಕಾಮಗಾರಿ ಕೆಲಸ ಪೂರ್ಣಗೊಳಿಸುವಂತೆ ಹೇಳಿದರು.

Also Read: ಮತಾಂತರ ಯತ್ನ | ದೂರು ದಾಖಲು | ಇಬ್ಬರು ಪೊಲೀಸ್‌ ವಶಕ್ಕೆ

ಈ ವೇಳೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಖಜಾಂಚಿ ಮಾಧುರಿ ಗಿರೀಶ್, ಮಾಜಿ ಅಧ್ಯಕ್ಷ ಎ.ಮುರಳಿ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version