By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Death note: ಡೆತ್‌ನೋಟ್ ಓದುತ್ತಿದ್ದಂತೆ ಸಿಎಂ ಮೌನ | ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Death note: ಡೆತ್‌ನೋಟ್ ಓದುತ್ತಿದ್ದಂತೆ ಸಿಎಂ ಮೌನ | ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ

ಮುಖ್ಯ ಸುದ್ದಿ

Death note: ಡೆತ್‌ನೋಟ್ ಓದುತ್ತಿದ್ದಂತೆ ಸಿಎಂ ಮೌನ | ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ

News Desk Chitradurga News
Last updated: 20 July 2024 11:23
News Desk Chitradurga News
12 months ago
Share
by vijayaendra
ಚಿತ್ರದುರ್ಗ ನಗರದ ಭೋವಿ ಗುರುಪೀಠಕ್ಕೆ ಶನಿವಾರ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ .
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 JULY 2024
ಚಿತ್ರದುರ್ಗ: ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯ ದೀಕ್ಷಾ ರಜತ ಮಹೋತ್ಸವ ಹಾಗೂ ಜನ್ಮದಿನದ ಪ್ರಯುಕ್ತ ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಗುರುಗಳಿಗೆ ಶುಭಕೋರಿ ಆಶೀರ್ವಾದ ಪಡೆದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಇಂದು ಭೋವಿ ಗುರುಪೀಠಕ್ಕೆ ಅವಿಸ್ಮರಣೀಯ ದಿನವಾಗಿದೆ. ದೀಕ್ಷಾ ರಜತ ಮಹೋತ್ಸವದಲ್ಲಿ ನಾನು ಭಾಗಿಯಾಗಿದ್ದು ಪುಣ್ಯದ ಕಾರ್ಯ. ನನ್ನಂತ ಲಕ್ಷಾಂತರ ಭಕ್ತರು ಮಠಕ್ಕೆ ಬಂದು ಆಶೀರ್ವಾದ ಪಡೆಯುತ್ತಿದ್ದಾರೆ. ನಾನು ಸಹ ಸ್ವಾಮೀಜಿ ಆಶೀರ್ವಾದ ಪಡೆದಿದ್ದೇನೆ. ಗುರುಗಳ ಆಶೀರ್ವಾದ ನಮ್ಮ ಕುಟುಂಬದ ಮೇಲೆ ಸದಾ ಇರುತ್ತದೆ’ ಎಂದರು.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕರಡಿ ಸಾವು | ಹೊಸ ಬೈಪಾಸ್‍ನಲ್ಲಿ ಘಟನೆ

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಹಗರಣ ಹೆಚ್ಚಾಗಿವೆ. ವಾಲ್ಮೀಕಿ ಸಮುದಾಯದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸದನದಲ್ಲಿ ಈ ಬಗ್ಗೆ ಕೇಳಿದರೆ ಮುಖ್ಯಮಂತ್ರಿ ಸರಿಯಾದ ಉತ್ತರ ನೀಡುತ್ತಿಲ್ಲ. ಚಂದ್ರಶೇಖರ್‌ ಡೆತ್‌ನೋಟ್ ಓದುತ್ತಿದ್ದಂತೆ ಸಿಎಂ ಮೌನ ವಹಿಸಿದ್ದಾರೆ’ ಎಂದರು.

bhovi sri
ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ

‘ಮೊದಲು ನಾಗೇಂದ್ರ ತಪ್ಪು ಮಾಡಿಲ್ಲ ಅಂತ ಹೇಳುತ್ತಿದ್ದರು. ಆದರೆ ನಾಗೇಂದ್ರ ಬಂಧನವಾದ ಬಳಿಕ ಸರ್ಕಾರ ತಪ್ಪು ಮಾಡಿಲ್ಲ ಅನ್ನುತ್ತಿದ್ದಾರೆ. ಹಗರಣದಲ್ಲಿ ಸರ್ಕಾರ ಭಾಗಿ ಆಗಲ್ಲ ಅಂತ ಸಹ ಹೇಳುತ್ತಿದ್ದಾರೆ. ಸಿಎಂ ಆಗ ಹಾಗೆ ಹೇಳಿದ್ದರು, ಈಗ ಹಿಂಗೆ ಹೇಳುತ್ತಿದ್ದಾರೆ. ಅವರ ಹೇಳಿಕೆಯಲ್ಲಿ ಗೊತ್ತಾಗುತ್ತದೆ ಹಗರಣ ಆಗಿದೆ ಅಂತ’ ಎಂದು ತಿಳಿಸಿದರು.

‘ಮೊದಲು ಅವರು ಮಾಡಿದ ಹಗರಣಗಳಿಗೆ ಉತ್ತರ ಕೊಡಲಿ. ಆಮೇಲೆ ನಮ್ಮ ನಾಯಕರ ಹಗರಣಗಳ ಬಗ್ಗೆ ತನಿಖೆ ಮಾಡಲಿ. ಯಾರೇ ತಪ್ಪು ಮಾಡಿದರು ಸಹ ತನಿಖೆ ನಡೆಸಲಿ ನಾವು ಬದ್ಧವಾಗಿದ್ದೇವೆ’ ಎಂದರು.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಪ್ರಮುಖ ಆರೋಪಿ ರಘು ತಾಯಿ ನಿಧನ

ಶಾಸಕ ಮಾನಪ್ಪ ವಜ್ಜಲ್‌, ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಮುರುಳಿ, ಹನುಮಂತೇಗೌಡ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BhoviBJPCmDeath NoteMaunaMlaState Presidentಡೆತ್‍ನೋಟ್ಬಿಜೆಪಿಭೋವಿಮೌನರಾಜ್ಯಾಧ್ಯಕ್ಷಶಾಸಕಸಿಎಂ
Share This Article
Facebook Email Print
Previous Article death Death: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಪ್ರಮುಖ ಆರೋಪಿ ರಘು ತಾಯಿ ನಿಧನ
Next Article Drama: 23ಕ್ಕೆ ಸಾದ್ವಿ ಸರಸ್ವತಿ ನಾಟಕ ಪ್ರದರ್ಶನ | ಸಂಚಾರಿ ಕೆಬಿಆರ್‌ ಡ್ರಾಮಾ ಕಂಪನಿ
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up