ಚಿತ್ರದುರ್ಗ ನ್ಯೂಸ್.ಕಾಂ
ಮಂಡ್ಯದಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯದಲ್ಲೇ ತಲ್ಲಣ ಸೃಷ್ಟಿಸಿದೆ. ಈ ವಿಚಾರವಾಗಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆದ ಸಮುಯದಲ್ಲೇ ಚಿತ್ರದುರ್ಗದಲ್ಲಿ ಆತಂಕಕಾರಿ ವಿಷಯವೊಂದು ಹೊರ ಬಿದ್ದಿದೆ.
ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಜಿಲ್ಲಾ ಪರಿಶೀಲನಾ ಮತ್ತು ತಪಾಸಣಾ ಸಮಿತಿ ಭೇಟಿ ನೀಡಿ ಪರಿಶೀಲಸಬೇಕು. ಆದರೆ ಈ ಕಾರ್ಯ ಈವರೆಗೂ ಸಮರ್ಪಕವಾಗಿ ನಡೆದಿಲ್ಲ. ಜತೆಗೆ ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಕಂಡಿರುವುದು ಆತಂಕದ ವಿಷಯವಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿ & ಪಿಎನ್ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಈ ಎಲ್ಲ ಅಂಶಗಳು ಬಹಿರಂಗವಾಗಿವೆ.
ಇದನ್ನೂ ಓದಿ: ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ; ಬೆಳಗಾವಿ ಅಧಿವೇಶನದಲ್ಲಿ ಕೃಷಿ ಸಚಿವರನ್ನು ಪ್ರಶ್ನಿಸಿದ ಶಾಸಕ ಟಿ.ರಘುಮೂರ್ತಿ
‘ಪಿಸಿ & ಪಿಎನ್ಡಿಟಿ ಕಾಯ್ದೆ ಅನ್ವಯ ಜಿಲ್ಲಾ ಪರಿಶೀಲನಾ ಮತ್ತು ತಪಾಸಣಾ ಸಮಿತಿಯು ಕನಿಷ್ಟ 3 ತಿಂಗಳಿಗೊಮ್ಮೆಯಾದರೂ ಸ್ಕ್ಯಾನಿಂಗ್ ಸೆಂಟರ್ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು. ಆದರೆ ಈ ಕ್ರಮ ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಯಾಗಿಲ್ಲ. ಈಗಲಾದರೂ ಸಮಿತಿಯ ತಂಡವು ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸುವ ಕಾರ್ಯ ಆಗಬೇಕು’ ಎಂದು ಸಮಿತಿ ಸದಸ್ಯ ಡಾ. ಸತ್ಯನಾರಾಯಣ ಒತ್ತಾಯಿಸಿದರು.
ಇದನ್ನೂ ಓದಿ: ಚಿತ್ರದುರ್ಗ– ತುಮಕೂರು ನಡುವೆ ಏರ್ಪೋರ್ಟ್; ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಚಿಂತನೆ
‘ಜಿಲ್ಲೆಯಲ್ಲಿ 12 ಸರ್ಕಾರಿ ಹಾಗೂ 60 ಖಾಸಗಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 72 ಸ್ಕ್ಯಾನಿಂಗ್ ಸೆಂಟರ್ಗಳಿದ್ದು, ಈ ಎಲ್ಲಾ ಸೆಂಟರ್ಗಳು ಕಾರ್ಯನಿರ್ವಹಿಸುತ್ತಿವೆ. ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯಲ್ಲಿ ಸ್ಕ್ಯಾನಿಂಗ್ ಸೆಂಟರ್ ಯಾವ ರೀತಿ ಇರಬೇಕು, ಯಾವ ದಾಖಲೆಗಳು ನಿರ್ವಹಣೆ ಮಾಡಬೇಕು ಇತ್ಯಾದಿ ಅಂಶಗಳನ್ನು ಭೇಟಿ ವೇಳೆ ಪರಿಶೀಲಿಸಿ, ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮವಹಿಸಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್ ಹೇಳಿದರು.
‘ಶೀಘ್ರದಲ್ಲಿಯೇ ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಸೆಂಟರ್ಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ, ದಾಖಲೆಗಳ ನಿರ್ವಹಣೆ, ಬಾಲಿಕಾ ತಂತ್ರಾಂಶ ನಮೂದು, ಕಾಯ್ದೆಯ ಸಂಪೂರ್ಣ ನಿರ್ದೇಶನಗಳ ಪಾಲನೆ ಕುರಿತಂತೆ ಪರಿಶೀಲಿಸಲಾಗುತ್ತದೆ’ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಕೇಳಿಬಂದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸಮಿತಿ ಸದಸ್ಯರು ತೀವ್ರ ಆತಂಕ ವ್ಯಕ್ತಪಡಿಸಿ, ಈ ಕುರಿತಂತೆ ಜಿಲ್ಲೆಯಲ್ಲಿಯೂ ಸಮಿತಿಯು ತೀವ್ರ ಕಟ್ಟೆಚ್ಚರ ವಹಿಸಬೇಕಿದೆ. ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳ ಕಾರ್ಯ ನಿರ್ವಹಣೆ ಬಗ್ಗೆಯೂ ತೀವ್ರ ನಿಗಾ ವಹಿಸುವುದು ಅಗತ್ಯವಿದೆ ಎಂದು ಸಮಿತಿಯ ಸರ್ವ ಸದಸ್ಯರು ಅಭಿಪ್ರಾಯಪಟ್ಟರು.
ಪಿ.ಸಿ. ಅಂಡ್ ಪಿ.ಎನ್.ಡಿ.ಟಿ. ಕಾಯ್ದೆ (ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆ) ಯನ್ವಯ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಸ್ಕ್ಯಾನಿಂಗ್ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಜಿಲ್ಲೆಯಲ್ಲಿನ ಎರಡು ಸ್ಕ್ಯಾನಿಂಗ್ ಸೆಂಟರ್ಗಳಿಗೆ ಮಾತ್ರ ಸೇವೆ ನೀಡಲು ಅವಕಾಶವಿದೆ’ ಎಂದು ಡಾ.ಜಿ.ಪಿ.ರೇಣುಪ್ರಸಾದ್ ತಿಳಿಸಿದರು.
ವೈದ್ಯರು ಭೇಟಿ ನೀಡುವ ಸ್ಕ್ಯಾನಿಂಗ್ ಸೆಂಟರ್ ಹಾಗೂ ಭೇಟಿ ಸಮಯವನ್ನು ಕಡ್ಡಾಯವಾಗಿ ಎಂಪ್ಯಾನಲ್ ಮಾಡಿಸಬೇಕು ಎಂದು ಈಗಾಗಲೆ ಇಲಾಖೆಯು ಸುತ್ತೋಲೆ ಮೂಲಕ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಎಲ್ಲ ವೈದ್ಯರಿಗೆ ಹಾಗೂ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಹಾಗೂ ಆಸ್ಪತ್ರೆಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಅನ್ಯ ಜಿಲ್ಲೆಗೆ ತೆರಳಿ ಸೇವೆ ನೀಡುವ ಕುರಿತಂತೆ ಸುತ್ತೋಲೆಯಲ್ಲಿ ಗೊಂದಲವಿದೆ. ಹೀಗಾಗಿ ಈ ಬಗ್ಗೆ ಇಲಾಖೆಯಿಂದ ಸ್ಪಷ್ಟನೆ ಪಡೆಯುವುದು ಸೂಕ್ತ ಎಂಬುದಾಗಿ ಸಲಹಾ ಸಮಿತಿ ಸದಸ್ಯರು ಅಭಿಪ್ರಾಯಪಟ್ಟರು.
ಜಿಲ್ಲಾ ಪಿ.ಸಿ. & ಪಿ.ಎನ್.ಡಿ.ಟಿ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್.ಸೌಮ್ಯ, ಸದಸ್ಯರಾದ ಡಾ.ಸತ್ಯನಾರಾಯಣ, ವಕೀಲ ಎಂ.ಉಮೇಶ್, ಗಾಯತ್ರಿ ಶಿವರಾಂ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಇದ್ದರು.
ಲಿಂಗಾನುಪಾತ ಕುಸಿತಕ್ಕೆ ಆತಂಕ
ಜಿಲ್ಲೆಯಲ್ಲಿ ಕಳೆದ ವರ್ಷ ಲಿಂಗಾನುಪಾತ 967 ದಾಖಲಾಗಿತ್ತು. ಅಂದರೆ 1000 ಗಂಡು ಮಕ್ಕಳಿಗೆ 967 ಹೆಣ್ಣು ಮಕ್ಕಳ ಜನನವಾಗಿದೆ. ಆದರೆ ಈ ವರ್ಷ ಅಕ್ಟೋಬರ್ ಅಂತ್ಯದವರೆಗೆ 5602-ಗಂಡು, 5292-ಹೆಣ್ಣು ಮಕ್ಕಳ ಜನನವಾಗಿದ್ದು, ಲಿಂಗಾನುಪಾತ 945 ದಾಖಲಾಗಿದೆ. ಇದು ಅತ್ಯಂತ ಗಂಭೀರ ವಿಷಯವಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಲಿಂಗಾನುಪಾತ ಉತ್ತಮವಾಗಿದ್ದು, ಇಲ್ಲಿ ಗಂಡುಮಕ್ಕಳಿಗಿಂತ ಹೆಣ್ಣು ಮಕ್ಕಳ ಜನನವೇ ಹೆಚ್ಚಿದೆ, ಇಲ್ಲಿ ಲಿಂಗಾನುಪಾತ-1100 ದಾಖಲಾಗಿದೆ. ಚಳ್ಳಕೆರೆ-989, ಚಿತ್ರದುರ್ಗ-968, ಹೊಳಲ್ಕೆರೆ-921 ದಾಖಲಾಗಿದ್ದರೆ, ಹೊಸದುರ್ಗ ತಾಲ್ಲೂಕಿನಲ್ಲಿ ಅತ್ಯಂತ ಕನಿಷ್ಟ 866 ಲಿಂಗಾನುಪಾತ ದಾಖಲಾಗಿದೆ. ಇಲ್ಲಿ 411 ಗಂಡುಮಕ್ಕಳು, 356 ಹೆಣ್ಣು ಮಕ್ಕಳ ಜನನವಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದಾಗ ಲಿಂಗಾನುಪಾತ ವ್ಯತ್ಯಾಸ ಹೆಚ್ಚಾಗಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಮಿತಿಯ ಸದಸ್ಯ ಡಾ. ಸತ್ಯನಾರಾಯಣ ಅವರು, ಪ್ರಸವಪೂರ್ವ ಲಿಂಗಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ, ಸ್ಕ್ಯಾನಿಂಗ್ ಸೆಂಟರ್ಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುವುದು ಅಗತ್ಯವಾಗಿದೆ ಎಂದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
