
ಮುಖ್ಯ ಸುದ್ದಿ
Diwali festival: ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮ | ಡಿಸಿ ಚಾಲನೆ


CHITRADURGA NEWS | 29 OCTOBER 2024
ಚಿತ್ರದುರ್ಗ: ದೀಪಾವಳಿ ಹಬ್ಬದ(Diwali festival) ಪ್ರಯುಕ್ತ ನಗರದ ಒನಕೆ ಓಬವ್ವ ವೃತ್ತದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್ ಅವರು ಚಾಲನೆ ನೀಡಿದರು.
ಕ್ಲಿಕ್ ಮಾಡಿ ಓದಿ: ವಿಶೇಷಚೇತನರ ವಿವಾಹ | 50 ಸಾವಿರ ಪ್ರೋತ್ಸಾಹ ಧನದ ಬಾಂಡ್ ವಿತರಣೆ
ದೀಪ ಸಂಜೀವಿನಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಆರು ತಾಲ್ಲೂಕುಗಳಿಂದ ಬಂದಂತಹ ಸ್ವ ಸಹಾಯ ಗುಂಪಿನ ಮಹಿಳೆಯರು ತಮ್ಮ ಸ್ವಂತ ಪರಿಶ್ರಮ ಹಾಗೂ ಕರ ಕುಶಲತೆಯಿಂದ ತಯಾರಿಸಿದ ದೀಪಗಳು, ಮಣ್ಣಿನ ಹಣತೆ, ಕೊಬ್ಬರಿ ಎಣ್ಣೆ, ತಿಂಡಿ-ತಿನಿಸುಗಳು, ಕೈಕಸೂತಿ ಬಟ್ಟೆ, ಬ್ಯಾಗ್, ಗೊಂಬೆ ಹಾಗೂ ವಿವಿಧ ಬಗೆಯ ಉಪ್ಪಿನಕಾಯಿ ಮತ್ತು ರೊಟ್ಟಿಯ ಖಾದ್ಯಗಳು ಸೇರಿದಂತೆ ಸ್ವದೇಶಿ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಯಿತು.
ವಿಶೇಷವಾಗಿ ಹಲವು ರೀತಿಯಲ್ಲಿ ವಿನ್ಯಾಸ ಮಾಡಲಾಗಿದ್ದ ದೀಪಗಳು ನೋಡುಗರನ್ನು ಆಕರ್ಷಿಸಿದವು.
ಕ್ಲಿಕ್ ಮಾಡಿ ಓದಿ: Attempted suicide: ಅಂಬೇಡ್ಕರ್ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ | ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ ಮತ್ತಿತರರು ಇದ್ದರು.

