
CHITRADURGA NEWS | 04 JANUARY 2024
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಎನ್. ಮಹದೇವಪುರ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಕಾಯಕ ಮಿತ್ರರಾಗಿ ಕೆಲಸ ನಿರ್ವಹಿಸುತ್ತಿದ್ದ ಜಿ.ಟಿ. ಭವ್ಯ ಅವರು ಸಮರ್ಪಕ ಕರ್ತವ್ಯ ನಿರ್ವಹಿಸದ ಕಾರಣಕ್ಕಾಗಿ ಅವರನ್ನು ವಜಾಗೊಳಿಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್…
ಗ್ರಾಮ ಕಾಯಕ ಮಿತ್ರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಜಿ.ಟಿ. ಭವ್ಯ ಅವರು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವುದಿಲ್ಲ, ನರೇಗಾ ಫೈಲ್ಗಳನ್ನು ಸರಿಯಾಗಿ ನಿರ್ವಹಿಸಿರುವುದಿಲ್ಲ ಎಂಬುದಾಗಿ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರುಗಳು ಚರ್ಚಿಸಿ, ಇವರನ್ನು ಕರ್ತವ್ಯದಲ್ಲಿ ಮುಂದುವರೆಸುವುದು ಸೂಕ್ತವಲ್ಲ ಎಂಬುದಾಗಿ ತೀರ್ಮಾನಿಸಿದ್ದರು.
ಹೀಗಾಗಿ ಜಿ.ಟಿ. ಭವ್ಯ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಬೇರೊಬ್ಬರನ್ನು ನೇಮಕ ಮಾಡಿಕೊಡಬೇಕೆಂದು ಗ್ರಾ.ಪಂ. ಪಿಡಿಒ ಅವರು ಕೋರಿದ್ದರು.
ಕ್ಲಿಕ್ ಮಾಡಿ ಓದಿ: ಡಿವೈಡರ್ ಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು
ಈ ಹಿನ್ನೆಲೆಯಲ್ಲಿ ಗ್ರಾಮ ಕಾಯಕ ಮಿತ್ರರಾಗಿ ಕೆಲಸ ನಿರ್ವಹಿಸುತ್ತಿದ್ದ ಜಿ.ಟಿ. ಭವ್ಯ ಅವರನ್ನು ವಜಾಗೊಳಿಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
