
CHITRADURGA NEWS | 06 JANUARY 2025
ಚಿತ್ರದುರ್ಗ: ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಕುರಿತಂತೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ದೂರು ದಾಖಲಾಗಿದೆ.
ಯತಿರಾಜ್ ಬ್ಯಾಲಹಳ್ಳಿ ಎಂಬ ಫೇಸ್ಬುಕ್ ಖಾತೆಯಿಂದ ಮಾದಾರ ಚನ್ನಯ್ಯ ಶ್ರೀಗಳ ಕುರಿತು ಮೂರು ದಿನಗಳ ಹಿಂದೆ ಎರಡು ಬಾರಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪ ದೂರಿನಲ್ಲಿದೆ.
ಇದನ್ನೂ ಓದಿ: 15. ಹಿರೇ ಬಡಗಿ ಗೌನಳ್ಳಿಗೆ ಬಂದರು | ಹಬ್ಬಿದಾ ಮಲೆ ಮಧ್ಯದೊಳಗೆ
ಶ್ರೀಗಳು ಆರೆಸ್ಸೆಸ್ಸ್ ಮತ್ತು ಬಿಜೆಪಿ ಕಟ್ಟುವಲ್ಲಿ ನಿರತರಾಗಿದ್ದಾರೆ. ಸಮುದಾಯದ ದಿಕು ತಪ್ಪಿಸುವ ಪ್ರವೃತ್ತಿ ಮುಂದುವರೆದರೆ ಸಮುದಾಯ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆಯ ಸಂದೇಶ ಹಾಕಿದ್ದಾರೆ.
ಇದಕ್ಕೆ ಅನೇಕ ರೀತಿಯ ಕಮೆಂಟ್ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ.
ಇದನ್ನೂ ಓದಿ: ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಪ್ರಶಸ್ತಿಗೆ ಸಾಣೇಹಳ್ಳಿ ಶ್ರೀ ಆಯ್ಕೆ
ಈ ಹಿನ್ನೆಲೆಯಲ್ಲಿ ಶ್ರೀಗಳು ಹಾಗೂ ಸಮುದಾಯವನ್ನು ಅವಮಾನಿಸಿದ ಆರೋಪದಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಎಚ್.ಶ್ರೀನಿವಾಸ್ ದೂರು ನೀಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
