ಚಿತ್ರದುರ್ಗ ನ್ಯೂಸ್.ಕಾಂ
ಚಿತ್ರದುರ್ಗದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ದೇವರಾಜ್ ಅರಸು ಶಿಕ್ಷಣ ಸಂಸ್ಥೆ ಶೈಕ್ಷಣಿಕ ಕ್ಷೇತ್ರದಲ್ಲಿ 40 ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ‘ಡೆಸ್ಟಿನಿ 2023’ ಮೂಲಕ ಈ ಸಂಭ್ರಮವನ್ನು ಅವಿಸ್ಮರಣೀಯಗೊಳಿಸಲು ಸಂಸ್ಥೆ ಸಿದ್ಧತೆ ನಡೆಸಿದೆ. ಡಿ.21 ರಿಂದ 24 ರವರೆಗೆ ಕೋಟೆನಾಡು ಬೃಹತ್ ಸಾಂಸ್ಕೃತಿಕ ಹಬ್ಬಕ್ಕೆ ಸಾಕ್ಷಿಯಾಗಲಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಟಿಕೆಟ್ ಕೇಳಿದ್ದೇನೆ; ಎಂ.ಸಿ.ರಘುಚಂದನ್
‘ಎಲ್ಲ ಹಂತದ ಪರೀಕ್ಷೆಗಳಲ್ಲೂ ಸಂಸ್ಥೆ ಅತ್ಯುತ್ತಮ ಸಾಧನೆ ಮಾಡುತ್ತಿದೆ. ದಾವಣಗೆರೆ ವಿಶ್ವ ವಿದ್ಯಾಲಯ ಮಟ್ಟದಲ್ಲಿ ಬಿ.ಕಾಂ ನಲ್ಲಿ ಪ್ರಥಮ ರ್ಯಾಂಕ್ ಬಂದಿದೆ. ಸಿಬಿಎಸ್ಇ ತರಗತಿಗಳು ಅತ್ಯುತ್ತಮ ಫಲಿತಾಂಶ ನೀಡಿವೆ’ ಎಂದು ವಿವರಿಸಿದರು.
ಡಿ.21 ರಂದು ಸಂಜೆ 5.30ಕ್ಕೆ ‘ಡೆಸ್ಟಿನಿ 2023’ ವೈಭವಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಚಿಕ್ಕಮಗಳೂರು ಗೌರಿಗದ್ದೆ ಅವಧೂತಶ್ರಮ ಶ್ರೀ ವಿನಯ್ ಗೂರೂಜಿ ಸಾನ್ನಿಧ್ಯವಹಿಸಲಿದ್ದಾರೆ. ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ, ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಸಂಸ್ಥೆ ಆಡಳಿತಾಧಿಕಾರಿ ಎಚ್.ಚಂದ್ರಕಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ರವಿಶಂಕರ ರೆಡ್ಡಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
‘ಡಿ.22 ರ ಸಂಜೆ 6.30ಕ್ಕೆ ಸ್ಯಾಂಡಲ್ವುಡ್ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಂಡದಿಂದ ಮ್ಯೂಸಿಕಲ್ ನೈಟ್ ಜತೆಗೆ ಸಂಸ್ಥೆ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಲಿದೆ. ಡಿ.23 ರಂದು ಸಂಜೆ 6.30ರಿಂದ ಕನ್ನಡ ರ್ಯಾಪರ್ ಚಂದನ್ಶೆಟ್ಟಿ ತಂಡ ಮ್ಯೂಸಿಕಲ್ ಶೋ ಅಬ್ಬರಿಸಲಿದೆ. ಡಿ.24 ರಂದು ಡಿಜೆ ನೈಟ್ ಮೂಲಕ ಸಂಭ್ರಮಕ್ಕೆ ತೆರೆ ಬೀಳಲಿದೆ’ ಎಂದು ವಿವರಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number