By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಡೆಸ್ಟಿನಿ-2025 | 42ನೇ ವರ್ಷದ ಅದ್ದೂರಿ ಉತ್ಸವಕ್ಕೆ ಭರದ ಸಿದ್ಧತೆ | ಮ್ಯೂಸಿಕ್, ರ‍್ಯಾಪ್, ಡಿಜೆ ಅಬ್ಬರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಡೆಸ್ಟಿನಿ-2025 | 42ನೇ ವರ್ಷದ ಅದ್ದೂರಿ ಉತ್ಸವಕ್ಕೆ ಭರದ ಸಿದ್ಧತೆ | ಮ್ಯೂಸಿಕ್, ರ‍್ಯಾಪ್, ಡಿಜೆ ಅಬ್ಬರ

ಮುಖ್ಯ ಸುದ್ದಿ

ಡೆಸ್ಟಿನಿ-2025 | 42ನೇ ವರ್ಷದ ಅದ್ದೂರಿ ಉತ್ಸವಕ್ಕೆ ಭರದ ಸಿದ್ಧತೆ | ಮ್ಯೂಸಿಕ್, ರ‍್ಯಾಪ್, ಡಿಜೆ ಅಬ್ಬರ

News Desk Chitradurga News
Last updated: 13 January 2025 18:32
News Desk Chitradurga News
5 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 13 JANUARY 2025

ಚಿತ್ರದುರ್ಗ: ನಗರದ ಪ್ರತಿಷ್ಠಿತ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಜ.15 ರಿಂದ 18 ರವರೆಗೆ ನಾಲ್ಕು ದಿನಗಳ ಕಾಲ 42ನೇ ವರ್ಷದ ಡೆಸ್ಟಿನಿ 2025 ಕಾರ್ಯಕ್ರಮ ರೂಪಿಸಿದ್ದು, ಅದ್ದೂರಿಯಾಗಿ ಆಚರಿಸಲು ಭರದ ಸಿದ್ದತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ರೀಲ್ಸ್ ಮಾಡಿ ಬಹುಮಾನ ಗೆಲ್ಲಿ | ಪೊಲೀಸ್ ಇಲಾಖೆಯ ಪ್ರಕಟಣೆ

ಶಾಲಾ ಶಿಕ್ಷಣದಿಂದ ಆರಂಭಗೊಂಡು ವೈದ್ಯಕೀಯ ಶಿಕ್ಷಣದವರೆಗೆ 10 ವಿದ್ಯಾಸಂಸ್ಥೆಗಳನ್ನು ಮುನ್ನಡೆಸುತ್ತಿರುವ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಮಧ್ಯ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗದಲ್ಲಿ ಸಾವಿರಾರು ಬಡ ಮಕ್ಕಳ ಶಿಕ್ಷಣ ಒದಗಿಸುತ್ತಿದ್ದು, ಸಾಂಸ್ಕೃತಿಕ ಕ್ರೀಡೆ ಇನ್ನಿತರೆ ಮನೋರಂಜನಾ ಚಟುವಟಿಕೆಗಳನ್ನು ಪ್ರತಿ ವರ್ಷವು ಆಚರಿಸಿಕೊಂಡು ಬರುತ್ತಿದೆ.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ರೀತಿಯ ಸುಪ್ತ ಪ್ರತಿಭೆ ಅಡಗಿರುವುದನ್ನು ಗುರುತಿಸಿ ಹೊರ ತೆಗೆಯುವುದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಉದ್ದೇಶವಾಗಿದ್ದು, ಅದಕ್ಕಾಗಿ ಡೆಸ್ಟಿನಿ- 2025 ಸಾಂಸ್ಕೃತಿಕ ಉತ್ಸವ ಆಯೋಜನೆಗೊಂಡಿದೆ.

ಜ.15 ರಂದು ಸಂಜೆ 6 ಗಂಟೆಗೆ ಡೆಸ್ಟಿನಿ-2025 ಬೃಹತ್ ಸಾಂಸ್ಕೃತಿಕ ಉತ್ಸವವನ್ನು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಲಿದ್ದು, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಡಿಡಿಪಿಐ ಎಂ.ಆರ್.ಮಂಜುನಾಥ್, ಖ್ಯಾತ ವಾಗ್ಮಿಗಳು, ಹಾಸ್ಯ ಚಟಾಕಿಯಿಂದ ಮನೆ ಮಾತಾಗಿರುವ ಪ್ರೊ.ಕೃಷ್ಣಗೌಡ ಹಾಗೂ ಸುಧಾ ಬರಗೂರು ಭಾಗವಹಿಸುವರು.

ಸಂಸ್ಥೆಯ ಆಡಳಿತಾಧಿಕಾರಿಗಳಾದ ಹೆಚ್.ಚಂದ್ರಕಲಾ, ಅಧ್ಯಕ್ಷರಾದ ಎಂ.ಸಿ. ಯಶಸ್ವಿನಿ ಕಿರಣ್ ಹಾಗೂ ಸಿಇಓ ಎಂ.ಸಿ.ರಘುಚಂದನ್ ಭಾಗವಹಿಸಲಿದ್ದಾರೆ.

ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಕಣ್ಮನ ಸೆಳೆಯುವ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಲೈಸಲಿವೆ. ನಂತರ ವಾದ್ಯ ಸಂಗೀತಗೋಷ್ಠಿ ನಡೆಯಲಿದೆ.

ಜ.16 ರಂದು ಖ್ಯಾತ ಗಾಯಕ ವಿಜಯಪ್ರಕಾಶ್, ಗಾಯಕಿ ಅನುರಾಧ ಭಟ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಆಯೋಜಿಸಲಾಗಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಜ.17 ರಂದು ರ್ಯಾಪ್ ಗಾಯಕ ರಾಹುಲ್ ಡಿಟ್ಟೋ, ಕೆ.ಜಿ.ಎಫ್ ಖ್ಯಾತಿಯ ಗಾಯಕ ವೆಂಕಿ ಅವರಿಂದ ಗಾನಸುಧೆ. ಆ.18 ರಂದು ಎಚ್.ಟು.ಓ ತಂಡದಿಂದ ಡಿ.ಜಿ. ಬ್ಯಾಂಡ್ ಮೂಲಕ ಡೆಸ್ಟಿನಿ-2025 ಸಮಾರೋಪಗೊಳ್ಳಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Anuradha BhattChitradurgaChitradurga newsChitradurga UpdatesDestiny-2025Devaraj Arasu Institute of EducationDr.M.ChandrappaKannada Latest NewsKannada NewsMC RaghuchandanRahul DittoVijay Prakashಅನುರಾಧ ಭಟ್ಎಂ.ಸಿ.ರಘುಚಂದನ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಎಂ.ಚಂದ್ರಪ್ಪಡೆಸ್ಟಿನಿ-2025ದೇವರಾಜ್ ಅರಸು ಶಿಕ್ಷಣ ಸಂಸ್ಥೆರಾಹುಲ್ ಡಿಟ್ಟೋವಿಜಯ ಪ್ರಕಾಶ್
Share This Article
Facebook Email Print
Previous Article chitradurga District Police ರೀಲ್ಸ್ ಮಾಡಿ ಬಹುಮಾನ ಗೆಲ್ಲಿ | ಪೊಲೀಸ್ ಇಲಾಖೆಯ ಪ್ರಕಟಣೆ
Next Article ಛಲವಾದಿ ಸಮಾಜ ಬಲಪಡಿಸಲು ಮುಖಂಡರ ಸಭೆ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಹಿರಿಯೂರು ನಗರಸಭೆಯಿಂದ ಆರ್ಥಿಕ ನೆರವು | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up