
CHITRADURGA NEWS | 14 NOVEMBER 2025
ಚಿತ್ರದುರ್ಗ: 2024-25ನೇ ಸಾಲಿನಲ್ಲಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ವಿವಿಧ ಅಂಗಸಂಸ್ಥೆಗಳಲ್ಲಿ ಪದವಿ ಶಿಕ್ಷಣ ಪಡೆದಿರುವ ಸುಮಾರು 600 ವಿದ್ಯಾರ್ಥಿಗಳಿಗೆ ಪರಿಣಿತ್-2025 ಪದವಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ಮೆದೇಹಳ್ಳಿ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಅನ್ನದಾನ
ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೊಪ್ಪಳ ವಿಶ್ವ ವಿದ್ಯಾನಿಲಯದ ಕುಪತಿಗಳಾದ ಬಿ.ಕೆ.ರವಿ, ಕಠಿಣ ಪರಿಶ್ರಮದ ಜೊತೆಗೆ ಪದವಿ ಪಡೆದು ಇದರೊಂದಿಗೆ ಕೌಶಲ್ಯ ಹೊಂದುವುದರ ಮೂಲಕ ತಮ್ಮ ಜೀವನದಲ್ಲಿ ಪ್ರಗತಿ ಕಾಣಬಹುದಾಗಿದೆ. ಇದರೊಂದಿಗೆ ಪ್ರಮಾಣಿಕತೆ, ನ್ಯಾಯ, ನೀತಿ ಪಾಲಿಸುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.
ದೇವರಾಜು ಅರಸು ಹೆಸರಿನಲ್ಲಿ ನಡೆಯುತ್ತಿರುವ ವಿದ್ಯಾ ಸಂಸ್ಥೆಯಲ್ಲಿ ಬಡವರಿಗೆ ಉಚಿತವಾಗಿ ಶಿಕ್ಷಣ ನೀಡುವುದರ ಮೂಲಕ ಚಂದ್ರಪ್ಪರವರು ವಿದ್ಯಾದಾನಿಗಳಾಗಿದ್ದಾರೆ. ಅರಸುರವರ ಚಿಂತನೆಗಳನ್ನು ತಮ್ಮಲ್ಲಿ ಅಳವಡಿಕೆ ಮಾಡಿಕೊಳ್ಳುವುದರ ಮೂಲಕ ಇಲ್ಲಿನ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುತ್ತಿದ್ದಾರೆ.
ಚಿತ್ರದುರ್ಗ ಬರ ಪೀಡಿತ ಪ್ರದೇಶವಾಗಿದೆ, ಇಲ್ಲಿ ಶಿಕ್ಷಣವೊಂದೇ ದಾರಿಯಾಗಿದೆ, ಶಿಕ್ಷಣ ಇದ್ದಲ್ಲಿ ನಮ್ಮ ಜೀವನ ಸಾಗಿಸಬಹುದಾಗಿದೆ. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ತಾವುಗಳಿಸುವ ಪದವಿಯ ಜೊತೆಗೆ ಕೌಶಲ್ಯವನ್ನು ಸಹಾ ಗಳಿಸುವಂತೆ ಆಗಬೇಕಿದೆ, ಆಗ ಮಾತ್ರ ನೀವು ಗಳಿಸಿದ ಅಂಕಗಳಿಗೆ ಬೆಲೆ ಸಿಗುತ್ತದೆ.
ಬಿಎಡ್ ಎಂದರೆ ಶಿಕ್ಷಕರುಗಳನ್ನು ತಯಾರು ಮಾಡುವ ಕಾರ್ಯವಾಗಿದೆ, ಇಲ್ಲಿ ಉತ್ತಮವಾಗಿ ಕೆಲಸ ಮಾಡಿದರೆ ಮುಂದೆ ಉತ್ತಮವಾದ ಪ್ರಜೆಗಳು ನಿಮ್ಮಿಂದ ನಿರ್ಮಾಣವಾಗಲು ಸಾಧ್ಯವಿದೆ.
ಇದನ್ನೂ ಓದಿ: ಸೈನಿಕ ಮಂಡಳಿ ಪುನರ್ ರಚನೆ | ಅರ್ಜಿ ಆಹ್ವಾನ
ಬಲಿಷ್ಠವಾದ ಭಾರತವನ್ನು ನಿರ್ಮಾಣ ಮಾಡುವುದು ಶಿಕ್ಷಕರಿಂದ ಮಾತ್ರ ಸಾಧ್ಯವಿದೆ. ಯುವ ಪೀಳಿಗೆ ತಯಾರು ಮಾಡುವ ಹೊಣೆಗಾರಿಕೆ ನಿಮ್ಮ ಮೇಲೆ ಇದೆ, ಸಾಮಾಜಿಕ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಹೆಚ್ಚಾಗಿದೆ ಎಂದು ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ.ಬಿ.ಡಿ.ಕುಂಬಾರ್ ಮಾತನಾಡಿ, ಬೇರೆ ಕಾಲೇಜುಗಳಿಗೆ ಹೋಲಿಸಿದರೆ ದೇವರಾಜು ಅರಸು ವಿದ್ಯಾಸಂಸ್ಥೆ ಉತ್ತಮವಾದ ಪ್ರಗತಿ ಸಾಧಿಸಿದೆ. ಇಂದಿನ ದಿನಮಾನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತಂತ್ರಜ್ಞಾನವನ್ನು ಅವಲಂಬಿಸಿದೆ. ನಮ್ಮ ಜ್ಞಾನದ ಬಳಕೆ ಮಾಡಬೇಕು. ಇದರಿಂದ ನಮ್ಮ ಜ್ಞಾನವೂ ಸಹಾ ಬಳಕೆಯಾಗುತ್ತದೆ. ತಾವುಗಳಿಸುವ ಪದವಿಯೊಂದಿಗೆ ಕೌಶಲ್ಯ ಹೊಂದಿದಾಗ ಮಾತ್ರ ನಿಮ್ಮ ಪದವಿಗೆ ಮಾನ್ಯತೆ ಸಿಗುತ್ತದೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳು ಹಾಗೂ ಹೊಳಲ್ಕೆರೆ ಕ್ಷೇತ್ರದ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಕಳೆದ 40 ವರ್ಷಗಳಿಂದ ಚಿತ್ರದುರ್ಗದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಇಲ್ಲಿ 5 ಸಾವಿರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಈಗಾಗಲೇ 22 ಸಾವಿರದಷ್ಟು ವಿದ್ಯಾರ್ಥಿಗಳು ವಿವಿಧ ರೀತಿಯ ಪದವಿಯ ಪಡೆದು ತೆರಳಿದ್ದಾರೆ. 4000 ಶಿಕ್ಷಕರನ್ನು ತಯಾರು ಮಾಡಲಾಗಿದೆ.
ನಮ್ಮ ಸಂಸ್ಥೆಯಲ್ಲಿ ಕಲಿಯುವ ಮಕ್ಕಳಿಗೆ ಯಾವುದೇ ಫಲಾಫೇಕ್ಷೆ ಇಲ್ಲದೆ ಶಿಕ್ಷಣ ನೀಡಲಾಗುತ್ತಿದೆ. ರಾಜಕೀಯವಾಗಿ ಶಾಸಕನಾಗಿ ಕೆಲಸ ಮಾಡಿದ್ದೇನೆ ಎಂದರು.
ಇದನ್ನೂ ಓದಿ: 2 ದಿನ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ ಸಾಕಾಣಿಕೆ ತರಬೇತಿ
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಮಾತನಾಡಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಹೆಚ್.ಚಂದ್ರಕಲಾ,ಅಧ್ಯಕ್ಷರಾದ ಎಂ.ಸಿ.ಯಶಸ್ವಿನಿ, ಡೀನ್ ಡಾ.ಬಿ.ಸಿ.ಅನಂತರಾಮು, ವಿವಿಧ ಪದವಿ ಕಾಲೇಜುಗಳ ಪ್ರಾಂಶುಪಾಲರು, ಬೋಧಕ ಸಿಬ್ಬಂದಿ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
