By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ | ಎಂ.ಫಣಿಂಧರ್ ಕುಮಾರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ | ಎಂ.ಫಣಿಂಧರ್ ಕುಮಾರ್

ಚಳ್ಳಕೆರೆ

ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ | ಎಂ.ಫಣಿಂಧರ್ ಕುಮಾರ್

News Desk Chitradurga News
Last updated: 2 March 2024 08:04
News Desk Chitradurga News
1 year ago
Share
ವಿಜ್ಞಾನ ದಿನಾಚರಣೆ ನಿಮಿತ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ
ವಿಜ್ಞಾನ ದಿನಾಚರಣೆ ನಿಮಿತ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 MACH 2024

ನಾಯಕನಹಟ್ಟಿ: ವಿದ್ಯಾರ್ಥಿಗಳು ಆರಂಭಿಕ ಹಂತದಲ್ಲಿ ಸಣ್ಣ ಸಣ್ಣ ಪ್ರಯೋಗಗಳು ಮತ್ತು ಮಾದರಿಗಳನ್ನು ರಚಿಸಲು ಮುಂದಾಗಬೇಕು. ಆಗ ವಿಜ್ಞಾನದ ಪರಿಚಯವಾಗಿ ವೈಜ್ಞಾನಿಕ ಮನೋಭಾವನೆಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಎಸ್.ಟಿ.ಎಸ್.ಆರ್ ವಿದ್ಯಾಸಂಸ್ಥೆಯ ಶಿಕ್ಷಕ ಎಂ.ಫಣೀಂಧರ್ ಕುಮಾರ್ ಹೇಳಿದರು.

ಇದನ್ನೂ ಓದಿ: ಯುವ ಸೌರಭ ಕೇವಲ ಒಂದು ದಿನಕ್ಕೆ ಸೀಮತವಾಗಬಾರದು | ಡಾ.ಎಂ.ಯು. ಲೋಕೇಶ್

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಂದ ರಚಿತವಾದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ವಿಧ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ಮೂಲ ವಿಜ್ಞಾನದ ಅಧ್ಯಯನದಲ್ಲಿ ತೊಡಗಬೇಕು, ವೈಜ್ಞಾನಿಕ ಚಿಂತನೆ ಮತ್ತು ವೈಚಾರಿಕ ಸಾಮಥ್ರ್ಯ ಲಭಿಸುತ್ತದೆ. ಆಗ ಮೌಢ್ಯತೆಗಳು, ಕಂದಾಚಾರಗಳು, ಮೂಢನಂಬಿಕೆಗಳ ಹಿಂದೆ ಇರುವ ತರ್ಕ ಅರ್ಥವಾಗಿ ಮೋಸ ಹೋಗುವುದು ತಪ್ಪುತ್ತದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಗಮನವಿಟ್ಟು ವಿಜ್ಞಾನ ತರಗತಿಗಳನ್ನು ಕೇಳಬೇಕು. ಮತ್ತು ಆಸಕ್ತಿವಹಿಸಿ ವಿಜ್ಞಾನ ವಿಷಯವನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: ಪತ್ಯೇಕ ಚುನಾವಣೆ ಕಚೇರಿ ತೆರೆದರೆ ನಿರಾಸೆ ಕಟ್ಟಿಟ್ಟ ಬುತ್ತಿ | ಬಿಜೆಪಿ ನಾಯಕ ಪ್ರೀತಂ ಗೌಡ ಎಚ್ಚರಿಕೆ

ಸಮಾಜದಲ್ಲಿರುವ ಮೌಢ್ಯ ಅಂಧಕಾರವನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ವಿನಾಶಮಾಡಲು ವಿಜ್ಞಾನ ಅತ್ಯಂತ ಸಹಕಾರಿಯಾಗಲಿದೆ ಎಂದರು.

ಪ.ಪಂ.ಸದಸ್ಯ ಸೈಯದ್‍ಅನ್ವರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಕಣ್ಮನ ಸೆಳೆಯುವ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ನೀಡುತ್ತಿರುವುದು ತುಂಬಾ ಸಂತಸದ ಸಂಗತಿ. ಹಾಗೇ ಶಾಲಾ ಹಂತದಲ್ಲಿ ಪ್ರತಿ ಮಗುವೂ ಎಲ್ಲ ವಿಷಯಗಳಲ್ಲಿ ತೀವ್ರ ಕುತೂಹಲಿಗಳಾಗಿರಬೇಕು. ಕುತೂಹಲ ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ. ಅದರಲ್ಲೂ ವಿಜ್ಞಾನ ಅಧ್ಯಯನ ಕ್ರಮಬದ್ಧ ಮತ್ತು ಶಿಸ್ತು ಕಲಿಕೆಗೆ ಪೂರಕವಾಗಿರುತ್ತದೆ ಎಂದರು.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬಿಜೆಪಿ ನಾಯಕಿ ಭಾರ್ಗವಿ ದ್ರಾವಿಡ್ ಆರೋಗ್ಯ ವಿಚಾರಿಸಿದ | ಜಿ.ಹೆಚ್.ತಿಪ್ಪಾರೆಡ್ಡಿ

ಡಾನ್‍ಬಾಸ್ಕೋ ಶಾಲೆ ಕಾರ್ಯದರ್ಶಿ ಎಸ್.ಟಿ.ಬೋರಸ್ವಾಮಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಹಿರಿಯ ಮುಖ್ಯ ಶಿಕ್ಷಕಿ ಎನ್.ಇಂದಿರಮ್ಮ, ಶಿಕ್ಷಕ ತೀರ್ಥಕುಮಾರ್, ಇಸಿಒ ಈರಸ್ವಾಮಿ, ಸಿಆರ್‍ಪಿ ಈಶ್ವರಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಲತಾ, ಸದಸ್ಯರಾದ ರಾಜಣ್ಣ, ಸುಮಯ್ಯ, ಅನಿತಾ, ನಾಗರತ್ನಮ್ಮ ಶಿಕ್ಷಕರಾದ ಗಾಯಿತ್ರಮ್ಮ, ಮಂಜುಳಮ್ಮ, ಶಿಲ್ಪ, ಕೃಷ್ಣರೆಡ್ಡಿ, ಮಂಜುನಾಥ್, ಉಷಾ, ಸುಮಾ ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:As a leaderM. Phaninder KumarObject displayScienceಎಂ.ಫಣೀಂಧರ್ ಕುಮಾರ್ನಾಯಕನಹಟ್ಟಿವಸ್ತು ಪ್ರದರ್ಶನವಿಜ್ಞಾನ
Share This Article
Facebook Email Print
Previous Article ನಿವೃತ್ತ ಐಎಎಸ್ ಅಧಿಕಾರಿ ಸಿ.ಶಿವಯೋಗಿ ಕಳಸದ ಮುರುಘಾ ಮಠದ ಆಡಳಿತ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ ನೇಮಕ | ಸಿ.ಶಿವಯೋಗಿ ಕಳಸದ ಸಮಿತಿ ಅಧ್ಯಕ್ಷ
Next Article ಕರುನಾಡ ವಿಜಯಸೇನೆ ಕಾರ್ಯಕರ್ತರು ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಡೀನ್ ನೇಮಕಕ್ಕೆ ವಿರೋಧ | ಡಾ.ಸಂಜೀವ್ ನೇಮಕಕ್ಕೆ ಶಿಫಾರಸ್ಸು ಮಾಡಿರುವ ಸಚಿವರ ಕ್ರಮಕ್ಕೆ ಆಕ್ಷೇಪ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up