CHITRADURGA NEWS | 11 AUGUST 2026
ಚಿತ್ರದುರ್ಗ: ಚಿಕ್ಕಂದಿನಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಹಾಗೂ ಪ್ರಶ್ನಿಸುವ ಮನೋಭಾವ ಬೆಳೆಸಿದರೆ, ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಲು ಸಹಕಾರಿಯಾಗಲಿದೆ ಎಂದು ಡಾನ್ಬೋಸ್ಕೋ ಐಸಿಎಸ್ಇ ಶಾಲೆಯ ಪ್ರಾಂಶುಪಾಲ ಫಾದರ್ ಜೈಮೋನ್ ಜೋಸೆಫ್ ಹೇಳಿದರು.
ಇದನ್ನೂ ಓದಿ: ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
ನಗರದ ಡಾನ್ಬೋಸ್ಕೋ ಐಸಿಎಸ್ಇ ಶಾಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಆಧುನಿಕ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಶರವೇಗದಲ್ಲಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ವಿಜ್ಞಾನ ಹಾಗೂ ತಂತ್ರಜ್ಞಾನದ ಕುರಿತು ಅಗತ್ಯ ಮಾಹಿತಿಯನ್ನು ನೀಡುವುದರ ಜೊತೆಗೆ, ಅವರಲ್ಲಿರುವ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ವಿಜ್ಞಾನ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಹಿರಿಯ ವಿಜ್ಞಾನ ಶಿಕ್ಷಕ ಸಂಪತ್ಕುಮಾರ್ ಮಾತನಾಡಿ, ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಮೂಲಕ ಅವರ ಸೃಜನಶೀಲತೆ ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು ಎಂದು ತಿಳಿಸಿದರು.
ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ 450 ವಿವಿಧ ವಿಜ್ಞಾನ ಮಾದರಿಗಳು ಗಮನ ಸೆಳೆದವು. ವಿದ್ಯಾರ್ಥಿಗಳ ವಿಜ್ಞಾನ ಮಾದರಿಗಳನ್ನು ಪೋಷಕರು ಹಾಗೂ ಡಾನ್ಬೋಸ್ಕೋ ಐಸಿಎಸ್ಇ ಶಾಲೆಯ ಸಿಬ್ಬಂದಿ ಕುತೂಹಲದಿಂದ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಿಬ್ಬಂದಿ ಪ್ರತಿನಿಧಿ ಮಾನಸ ಎಲ್.ಜೆ., ಶಿಕ್ಷಕರಾದ ಸಂದೀಪ್, ಜಿ. ಇಂಧೂದರ್ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

