By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬೆಳಗಾವಿ ಅಧಿವೇಶನದಲ್ಲಿ ಚಿತ್ರದುರ್ಗ ಡಿವೈಡರ್ ಕುರಿತ ಚರ್ಚೆ | ಸರ್ಕಾರದ ಗಮನ ಸೆಳೆದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬೆಳಗಾವಿ ಅಧಿವೇಶನದಲ್ಲಿ ಚಿತ್ರದುರ್ಗ ಡಿವೈಡರ್ ಕುರಿತ ಚರ್ಚೆ | ಸರ್ಕಾರದ ಗಮನ ಸೆಳೆದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ಮುಖ್ಯ ಸುದ್ದಿ

ಬೆಳಗಾವಿ ಅಧಿವೇಶನದಲ್ಲಿ ಚಿತ್ರದುರ್ಗ ಡಿವೈಡರ್ ಕುರಿತ ಚರ್ಚೆ | ಸರ್ಕಾರದ ಗಮನ ಸೆಳೆದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

chitradurganews.com
Last updated: 12 December 2023 18:36
chitradurganews.com
2 years ago
Share
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ:

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚಿತ್ರದುರ್ಗ ನಗರದಲ್ಲಿ ನಿರ್ಮಾಣವಾಗಿರುವ ಡಿವೈಟರ್‍ಗಳ ಬಗ್ಗೆ ಚರ್ಚೆ ನಡೆಯಿತು.

ಮಂಗಳವಾರದ ಕಲಾಪದಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಸದನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆದರು.

ಐತಿಹಾಸಿಕ ಚಿತ್ರದುರ್ಗ ನಗರದಲ್ಲಿ ಮೊದಲಿನಿಂದಲೂ ಪುಟ್ಟ ಪುಟ್ಟ ರಸ್ತೆಗಳಿವೆ. ನಗರದ ಮುಖ್ಯ ರಸ್ತೆಯೇ ಕೇವಲ 40 ಅಡಿ ಅಗಲವಿದೆ. ಇದರ ಮಧ್ಯ 5 ಎತ್ತರ ಹಾಗೂ 4 ಅಡಿ ಅಗಲದ ಅವೈಜ್ಞಾನಿಕ ರಸ್ತೆ ವಿಭಜಕಗಳನ್ನು ನಿರ್ಮಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು, ಪಾದಚಾರಿಗಳು, ವ್ಯಾಪಾರಿಗಳು ಬವಣೆ ಪಡುವಂತೆಯಾಗಿದೆ. ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ-ತುಮಕೂರು ನಡುವೆ ವಿಮಾನ ನಿಲ್ದಾಣಕ್ಕೆ ಚಿಂತನೆ

ಚಿತ್ರದುರ್ಗ ನಗರದ ಕೆಎಸ್‍ಆರ್‍ಟಿ ಬಸ್ ನಿಲ್ದಾಣದಿಂದ ಗಾಂಧಿ ವೃತ್ತವನ್ನು ಸಂಪರ್ಕಿಸುವ ರಸ್ತೆ ಕಳೆದ 35 ವರ್ಷಗಳಿಂದ ಏಕಮುಖ ಸಂಚಾರದ ರಸ್ತೆಯಾಗಿದೆ. ಕಿರಿದಾದ ಏಕಮುಖ ರಸ್ತೆಯಲ್ಲೂ ದೊಡ್ಡ ರಸ್ತೆ ವಿಭಜಕಗಳನ್ನು ನಿರ್ಮಿಸಿರುವುದರಿಂದ ಇಲ್ಲಿನ ರಸ್ತೆ ಕೇವಲ 10 ರಿಂದ 12 ಅಡಿಯಾಗಿದೆ. ಬಸ್ ಸೇರಿದಂತೆ ಇತರೆ ಭಾರಿ ವಾಹನಗಳು ಸಂಚಾರಕ್ಕೆ ತೊಂದರೆಯಾಗಿದೆ. ಇಲ್ಲಿ ಸಂಚರಿಸುವ ಪಾದಚಾರಿಗಳಿಗೂ ಕಿರಿಕಿರಿಯಾಗುತ್ತಿದೆ ಎಂದು ವಿವರಿಸಿದರು.

ನಗರವಾಸಿಗಳು ಹಾಗೂ ನಗರಕ್ಕೆ ಆಗಮಿಸುವ ಸಾರ್ವಜನಿಕರು ರಸ್ತೆ ವಿಭಜಕಗಳ ತೆರವಿಗೆ ಆಗ್ರಹಿಸುತ್ತಿದ್ದಾರೆ. ವೈಯಕ್ತಿಕವಾಗಿ ಸ್ವತಃ ರಸ್ತೆ ವಿಭಜಕಗಳ ಪರಿಶೀಲನೆ ನೆಡೆಸಿದ್ದೇನೆ. ತುರ್ತಾಗಿ ರಸ್ತೆ ವಿಭಜಕಗಳನ್ನು ತೆರವು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪರವಾಗಿ ಸದನದಲ್ಲಿ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಅವೈಜ್ಞಾನಿಕ ಡಿವೈಡರ್ ನಿರ್ಮಾಣ ಮಾಡಿದ ಗುತ್ತಿಗೆದಾರರ ಬಿಲ್‍ಗಳನ್ನು ಸರ್ಕಾರ ಈಗಾಗಲೇ ತಡೆ ಹಿಡಿದಿದೆ. ವಿಭಜಕಗಳ ತೆರವಿನ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತರುವುದಾಗಿ ಎಂದು ಪ್ರತಿಕ್ರಿಯಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Belgaum SessionChitradurgaK.C.Virendra(Pappy)Unscientific Dividerಅವೈಜ್ಞಾನಿಕ ಡಿವೈಡರ್ಕೆ.ಸಿ.ವೀರೇಂದ್ರ(ಪಪ್ಪಿ)ಚಿತ್ರದುರ್ಗಬೆಳಗಾವಿ ಅಧಿವೇಶನ
Share This Article
Facebook Email Print
Previous Article arecanut price list ಅಡಕೆ ಧಾರಣೆ | ಡಿಸೆಂಬರ್ 12 | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್
Next Article FIR ದೇವಸ್ಥಾನದ ಗಂಟೆ ಬಾರಿಸುವಾಗ ಹಲ್ಲೆ; ಹಾರಿತು ಪ್ರಾಣಪಕ್ಷಿ; ಕಾರಣವಾಯ್ತು ₹ 150 ಸಾಲ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up