
CHITRADURGA NEWS | 08 SEPTEMBER 2025
ಚಿತ್ರದುರ್ಗ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಂಟಿಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಜಾಗತಿಕವಾಗಿ ಅಲ್ಲಲ್ಲಿ ನಡೆದ ಯುದ್ಧಗಳ ಕಾರಣದಿಂದಾಗಿ ಯೂರಿಯಾ ಪೂರೈಕೆಯಲ್ಲಿ ಸ್ವಲ್ಪ ಸಮಸ್ಯೆ ಉಂಟಾಗಿತ್ತು. ಆದರೆ ಈಗ ಕೊರತೆ ಇಲ್ಲ.
ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ನೋಟೀಸ್ ನೀಡಿ | ಸಚಿವ ಡಿ.ಸುಧಾಕರ್

ಈವರೆಗೆ 26760 ಮೆ. ಟನ್ ಯೂರಿಯಾ ಮಾರಾಟವಾಗಿದ್ದು, ಪ್ರಸ್ತುತ 1533 ಟನ್ ಯೂರಿಯಾ ದಾಸ್ತಾನು ಲಭ್ಯವಿದೆ. ಬೇಡಿಕೆಗಿಂತಲೂ ಹೆಚ್ಚು ಯೂರಿಯಾ ಈಗ ಪೂರೈಕೆ ಆಗುತ್ತಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 3.16 ಲಕ್ಷ ಹೆ. ಬಿತ್ತನೆ ಗುರಿ ಇದ್ದು, ಈವರೆಗೆ 2.71 ಲಕ್ಷ ಹೆ. ನಲ್ಲಿ ಬಿತ್ತನೆಯಾಗಿದೆ.
ಹಿರಿಯೂರು ತಾಲ್ಲೂಕಿನಲ್ಲಿ ಮಾತ್ರ 40510 ಹೆ. ಗುರಿಗೆ ಬದಲಾಗಿ ಕೇವಲ 6759 ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ 20,700 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ 2022 ರಲ್ಲಿ ಇದ್ದಂತಹ 12 ಸಾವಿರ ಹೆ. ತೊಗರಿ ಬೆಳೆ ಪ್ರದೇಶ ಇದೀಗ ವಿಸ್ತರಣೆಗೊಂಡಿದ್ದು, ಈಗ 31 ಸಾವಿರ ಹೆ. ನಲ್ಲಿ ತೊಗರಿ ಬೆಳೆಯಲಾಗುತ್ತಿದೆ.
ತೊಗರಿ ಬೆಳೆಯಲು ಖರ್ಚು ಕೂಡ ಕಡಿಮೆ, ಇಳುವರಿ ಉತ್ತಮವಾಗಿ ಬಂದಲ್ಲಿ ರೈತರಿಗೆ ಲಾಭದ ಪ್ರಮಾಣವು ಕೂಡ ಹೆಚ್ಚು ಇರಲಿದೆ. ಹೀಗಾಗಿ ತೊಗರಿ ಪ್ರದೇಶ ವಿಸ್ತರಣೆ ಕಂಡಿದೆ. ಕಳೆದ 40-50 ವರ್ಷಗಳಿಂದಲೂ ಟಿಎಂವಿ-2 ತಳಿ ಶೇಂಗಾ ಬೆಳೆಯುತ್ತಿದ್ದು, ತಳಿಯು ತನ್ನ ಚೈತನ್ಯ ಕಳೆದುಕೊಂಡಿರುವುದರಿಂದ ಶೇಂಗಾ ಬೆಳೆಯಲ್ಲಿ ರೈತರಿಗೆ ಉತ್ತಮ ಇಳುವರಿ ದೊರೆಯುತ್ತಿಲ್ಲ.
ಜಿಲ್ಲೆಯಲ್ಲಿ ಡಿಹೆಚ್-256 ಹಾಗೂ ಸಹ್ಯಾದ್ರಿ ದುರ್ಗ ಎಂಬ ಎರಡು ಹೊಸ ಶೇಂಗಾ ತಳಿಗಳನ್ನು ಪರಿಚಯಿಸಲಾಗುತ್ತಿದ್ದು, ರೈತರಿಗೆ ಪ್ರಾತ್ಯಕ್ಷಿಕೆಗಾಗಿ ನೀಡಿ ಪರೀಕ್ಷೆ ಮಾಡಲಾಗುತ್ತಿದೆ, ಇವು ಉತ್ತಮವಾಗಿವೆ ಎಂಬ ವರದಿಯೂ ಬಂದಿವೆ ಎಂದರು.
ಇದನ್ನೂ ಓದಿ: ರಾಜ್ಯಸಭೆ ಮಾಜಿ ಸದಸ್ಯ ಹನುಮಂತಪ್ಪನವರ ಪತ್ನಿ ನಿಧನ
ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, 2022-23 ನೇ ಸಾಲಿನಲ್ಲಿ ಬೆಳೆ ವಿಮೆ ಪರಿಹಾರ ಯೋಜನೆಯಲ್ಲಿ 48 ಕೋಟಿ ರೂ. ಗೂ ಹೆಚ್ಚಿನ ಅಕ್ರಮ ಜರುಗಿದ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಒದಗಿಸಲು ತಿಳಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ಜಂಟಿಕೃಷಿ ನಿರ್ದೇಶಕ ಮಂಜುನಾಥ್ ಅವರು, ಈ ಪ್ರಕರಣದ ಬಗ್ಗೆ ಈಗಾಗಲೆ ತನಿಖೆ ಕೈಗೊಂಡು, ದಾಖಲೆಗಳ ಸಹಿತ ವರದಿಯನ್ನು ಸಲ್ಲಿಸಲಾಗಿದೆ ಎಂದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
