
CHITRADURGA NEWS | 16 JULY 2026
ಚಿತ್ರದುರ್ಗ: ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ತಲುಪಬೇಕಾದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅವರ ನಿಖರವಾದ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸುವುದು ಅತ್ಯಗತ್ಯ ಎಂದು ವಿಧಾನ ಪರಿಷತ್ ಶಾಸಕ ವೈ.ಎಂ. ಸತೀಶ್ ತಿಳಿಸಿದರು.
ಇದನ್ನೂ ಓದಿ: SIR ಜಾಗೃತಿಗೆ ವಿಕಲಚೇತನರ ಬೈಕ್ ರ್ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅವರ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್ ಮೆಂಟ್ ಸಹಿತ) ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿರುವ ವಿಕಲಚೇತನರ ದತ್ತಾಂಶವನ್ನು ಸರಿಯಾದ ಮಾಹಿತಿ ಜೋಡಣೆಯೊಂದಿಗೆ ಸರ್ಕಾರಕ್ಕೆ ಕಳುಹಿಸಬೇಕು. ಪ್ರಸ್ತುತ ನಮ್ಮ ಇಲಾಖೆಯಲ್ಲಿ ವಿಕಲಚೇತನರ ಸಮಗ್ರ ಮಾಹಿತಿ ಲಭ್ಯವಿಲ್ಲ.
ಕೇವಲ ಶೇ. 75 ಕ್ಕಿಂತ ಹೆಚ್ಚು, ಶೇ. 40 ರಿಂದ 75 ಮತ್ತು ಶೇ. 40 ಕ್ಕಿಂತ ಕಡಿಮೆ ಎಂಬ ಮೂರು ಸಾಮಾನ್ಯ ವರ್ಗಗಳ ಆಧಾರದ ಮೇಲೆ ಮಾತ್ರ ಸದ್ಯ ವರ್ಗೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದ ಅವರು, ವಿಕಲಚೇತನರ ಕೌಶಲ, ಆಸಕ್ತಿ ಮತ್ತು ವಿಶೇಷ ಜ್ಞಾನ ಆಧರಿಸಿ ಹೊಸ ಮಾದರಿಯ ಫಾಮ್ರ್ಯಾಟ್ ಸಿದ್ಧಪಡಿಸಿ ಮಾಹಿತಿ ಕ್ರೋಡೀಕರಿಸಬೇಕು. ಈ ಮಾಹಿತಿ ಲಭ್ಯವಾದರೆ ಅವರಿಗೆ ಸೂಕ್ತವಾದ ಯೋಜನೆಗಳ ಜಾರಿಗೆ ತರಲು ಸರ್ಕಾರಕ್ಕೆ ಸುಲಭವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಪ್ರತಿಭಾ ಪುರಸ್ಕಾರ : ಕುಂಚಿಗ ವೀರಶೈವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಮಾತನಾಡಿ, ವಿಕಲಚೇತನರ ಹಾಗೂ ಮಹಿಳೆಯರ ಸಬಲೀಕರಣ ಎಂದರೆ ಕೇವಲ ಅವರ ಮೇಲೆ ಸಹಾನುಭೂತಿ ತೋರಿಸುವುದಲ್ಲ. ಅವರಿಗೆ ಸಮಾಜದಲ್ಲಿ ಗೌರವಯುತವಾಗಿ ಬದುಕಲು ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವುದು ನಿಜವಾದ ಸಬಲೀಕರಣವಾಗಿದೆ ಎಂದರು.
ಸರ್ಕಾರದ ಯೋಜನೆಗಳು ಹಾಗೂ ಸಹಾಯಧನಗಳು ಅರ್ಹರಿಗೆ ತಲುಪಬೇಕು ಎಂಬುದು ನಮ್ಮ ಆಶಯ. ಕೆಲವು ಸಂದರ್ಭಗಳಲ್ಲಿ ಈ ಯೋಜನೆಗಳು ದುರುಪಯೋಗವಾಗುತ್ತಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಮಾತನಾಡಿ, ವಿಕಲಚೇತನ ಮಹಿಳೆಯರು ಕೇವಲ ಸರ್ಕಾರದ ನೆರವುಉ ನಂಬಿ ಕೂರದೆ ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಸಬಲರಾಗಲು ಅಗತ್ಯವಿರುವ ಉದ್ಯಮಶೀಲತಾ ತರಬೇತಿ ಹಾಗೂ ಬ್ಯಾಂಕ್ಗಳ ಮೂಲಕ ಆರ್ಥಿಕ ನೆರವು ಕೊಡಿಸಲು ಬದ್ಧ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ವಿಜ್ಞಾನ ಪುಸ್ತಕ ಪ್ರಶಸ್ತಿ | ಅರ್ಜಿ ಅಹ್ವಾನ
ದ್ವಿಚಕ್ರ ವಾಹನವೊಂದಕ್ಕೆ ಸುಮಾರು ರೂ.1.25 ಲಕ್ಷ ವೆಚ್ಚ ಮಾಡಿ ಅತ್ಯಾಧುನಿಕ ರೆಟ್ರೋಫಿಟ್ಮೆಂಟ್ ಅಳವಡಿಸಿದ 15 ದ್ವಿಚಕ್ರ ವಾಹನಗಳನ್ನು ಮಹಿಳಾ ವಿಕಲಚೇತನರಿಗೆ ನೀಡಲಾಗುತ್ತಿದ್ದು, ಈ ವಾಹನವನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿಕೊಳ್ಳಲು ಅಥವಾ ಸಮಯ ಸಿಕ್ಕಾಗ ಸುಮ್ಮನೆ ಓಡಾಡಲು ಬಳಸದೆ, ನಿಮ್ಮ ಆರ್ಥಿಕ ಪ್ರಗತಿಯ ಹೆದ್ದಾರಿಗೆ ಮುನ್ನುಡಿಯನ್ನಾಗಿ ಬಳಸಿಕೊಳ್ಳಬೇಕು. ನಿಮ್ಮಲ್ಲಿರುವ ಪ್ರತಿಭೆ, ಬುದ್ಧಿವಂತಿಕೆ ಬಳಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಲು ಇದೊಂದು ಉತ್ತಮ ಸಾಧನ ಎಂದು ಸಲಹೆ ನೀಡಿದರು.
ಕೇವಲ ವಾಹನ ನೀಡಿ ನಮ್ಮ ಜವಾಬ್ದಾರಿ ಮುಗಿಯಿತು ಎಂದು ನಾವು ಕೈತೊಳೆದುಕೊಳ್ಳುವುದಿಲ್ಲ. ವಾಹನ ಪಡೆದ 15 ಮಹಿಳೆಯರನ್ನು ಯಶಸ್ವಿ ಉದ್ಯಮಿಗಳನ್ನಾಗಿ ರೂಪಿಸಲು ಸಿದ್ಧರಿದ್ದೇವೆ. ಅವರಿಗೆ ಅಗತ್ಯವಿರುವ ಉದ್ಯಮಶೀಲತಾ ತರಬೇತಿ ನೀಡುವುದರ ಜೊತೆಗೆ, ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ಗಳು ಮತ್ತು ತರಬೇತಿ ಸಂಸ್ಥೆಗಳ ಮೂಲಕ ತಲಾ ರೂ.5 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ಧನಸಹಾಯ ಕೊಡಿಸುವ ಕೆಲಸವನ್ನು ಮಾಡುತ್ತೇವೆ. ಒಂದು ವರ್ಷದ ಅವಧಿಗೆ ನಿಮ್ಮನ್ನು ಕೈಹಿಡಿದು ನಡೆಸಲಿದ್ದೇವೆ ಎಂದರು.
ಈ ಹಿಂದೆ ಸಮಾಜದಲ್ಲಿ ಅನುಭವಿಸಿದ ಕಷ್ಟಗಳನ್ನು ಮರೆತು, ನಿಮ್ಮನ್ನು ಕೀಳಾಗಿ ಕಂಡವರ ಮುಂದೆ ನೀವೆಲ್ಲರೂ ಸ್ವಾಭಿಮಾನದಿಂದ ಬದುಕಬೇಕು. ಶಾಸಕನಾಗಿ ಅಷ್ಟೇ ಅಲ್ಲದೆ, ನಿಮ್ಮ ಪ್ರೀತಿಯ ಸಹೋದರನಾಗಿ ನಿಮ್ಮ ಮುಂದಿನ ಪ್ರತಿಯೊಂದು ಯಶಸ್ಸಿನ ಹಂತದಲ್ಲೂ ನಾನು ಬೆಂಗಾವಲಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.
ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಅವರು 15 ಮಂದಿ ಮಹಿಳಾ ವಿಕಲಚೇತನರಿಗೆ ದ್ವಿಚಕ್ರ ವಾಹನಗಳ ವಿತರಿಸಿ, ಶುಭ ಕೋರಿದರು.
ಇದನ್ನೂ ಓದಿ: ಮೂರು ದಿನ ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರಿನಲ್ಲಿ ವ್ಯತ್ಯಯ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಸಾಮಾಜಿಕ ಉದ್ಯಮಿ ಮತ್ತು ರೂಟ್ಸ್ ರಿಫಾಮ್ರ್ಸ್ ಇನಿಷಿಯೇಟಿವ್ಸ್ ಸಂಸ್ಥೆ ಸಂಸ್ಥಾಪಕಿ ಅರುಣ ಸಂಪಿಗೆ ಸೇರಿದಂತೆ ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

