ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಜಿಲ್ಲಾ ಗವರ್ನರ್ ಡಾ.ಸಾಧು ಗೋಪಾಲ ಕೃಷ್ಣ

ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಜಿಲ್ಲಾ ಗವರ್ನರ್ ಡಾ.ಸಾಧು ಗೋಪಾಲ ಕೃಷ್ಣ

CHITRADURGA NEWS | 30 APRIL 2025 

ಚಿತ್ರದುರ್ಗ: ಚಳ್ಳಕೆರೆ ರಸ್ತೆಯಲ್ಲಿನ ಕೃಷ್ಣಪ್ಪ ಲೇ ಔಟ್‍ನಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ನಗರದಲ್ಲಿ ಹತ್ತು ಹಾಸಿಗೆಗಳ ಡಯಾಲಿಸಿಸ್ ಕೇಂದ್ರ, ಕೌಶಲ್ಯಾಭಿವೃದ್ಧಿ ಕೇಂದ್ರ ಪಿಸಿಯೋಥೆರಪಿ ಸೆಂಟರ್, ಲ್ಯಾಬೋರೇಟರಿ ಕೇಂದ್ರವನ್ನು ಜಿಲ್ಲಾ ಗವರ್ನರ್ ಡಾ.ಸಾಧು ಗೋಪಾಲ ಕೃಷ್ಣ ರೋಟರಿ ಉದ್ಘಾಟಿಸಿದರು.

Also Read: SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?

ನಂತರ ಮಾತನಾಡಿದ ಡಾ.ಸಾಧು ಗೋಪಾಲ ಕೃಷ್ಣ, ರೋಟರಿ ಕ್ಲಬ್ ಸಮಾಜಮುಖಿಯಾದ ಕೆಲಸವನ್ನು ಮಾಡುತ್ತಿದೆ, ಜನರಿಗೆ ಅತಿ ಅಗತ್ಯವಾಗಿ ಬೇಕಾದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಬೇಕಾದ ಸೌಲಭ್ಯ, ಸಹಕಾರ ನೀಡುತ್ತಾ ಜನರ ಮನದಲ್ಲಿ ನಿಂತಿದೆ ಎಂದು ಪ್ರಶಂಸಿದರು.

ರೋಟರಿ ಕ್ಲಬ್ ಜನರಿಗೆ ಆರೋಗ್ಯದ ಬಗ್ಗೆ ಅರಿವೂ ಮೂಡಿಸುವುದ್ದಲ್ಲದೆ ಇದಕ್ಕೆ ಬೇಕಾದ ಶಿಬಿರ ಸಹಾ ನೀಡುವುದರೊಂದಿಗೆ ನೆರವಿನ ಹಸ್ತವನ್ನು ಚಾಚಿದೆ ಎಂದರು.

ರೋಟರಿ ಟ್ರಸ್ಟ್‍ನ ಕಾರ್ಯದರ್ಶಿ ಕೆ.ಮಧುಪ್ರಸಾದ್ ಮಾತನಾಡಿ, ರೋಟರಿ ಕ್ಲಬ್ ಆಫ್ ಚಿತ್ರದುರ್ಗ ನಗರದಲ್ಲಿ ಹತ್ತು ಹಾಸಿಗೆಗಳ ಡಯಾಲಿಸಿಸ್ ಕೇಂದ್ರವನ್ನು ಸ್ಥಾಪಿಸಿದೆ. ಯಂತ್ರಗಳು, ಕಟ್ಟಡಗಳು, ಸೋಲಾರ್ ಪ್ಯಾನಲ್‍ಗಳ ಸಂಪೂರ್ಣ ವೆಚ್ಚವನ್ನು ನಗರದ ರೋಟರಿ ಕ್ಲಬ್ ಸದಸ್ಯರು ಭರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಮತ್ತು ಅಕ್ಕಪಕ್ಕದ ಪಟ್ಟಣಗಳ ಪಾಲಕರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ನಾವು ನಗರದಲ್ಲಿ ಹತ್ತು ಡಯಾಲಿಸಿಸ್ ಯಂತ್ರೋಪಕರಣಗಳನ್ನು ಸ್ಥಾಪಿಸಲಾಗಿದ್ದು, ಎಸ್.ಆರ್.ಬಿ.ಎಂ.ಎಸ್.ನ ಮಾಲೀಕರಾದ ಲಕ್ಷಿಕಾಂತರೆಡ್ಡಿ ಹಾಗೂ ಎಸ್. ವೀರೇಶ್ ದೇಣಿಗೆಯಿಂದ ಚಳ್ಳಕೆರೆ ರಸ್ತೆಯಲ್ಲಿನ ಕೃಷ್ಣಪ್ಪ ಲೇ ಔಟ್‍ನಲ್ಲಿ ಸ್ಥಳವನ್ನು ಪಡೆಯಲಾಗಿದೆ.

Also Read: ಮುರುಘಾ ಮಠದಿಂದ ‘ಸತ್ಯ ಶುದ್ಧ ಕಾಯಕʼ ಪತ್ರಿಕೆ ಲೋಕಾರ್ಪಣೆ

ಈ ವೇಳೆ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ಆರ್. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಅರೋಗ್ಯ ಅಧಿಕಾರಿ ರೇಣುಪ್ರಸಾದ್, ರೋಟೇರಿಯನ್ ಪಿಡಿಜಿ ರವಿ ವಡ್ಲಮಣಿ, ಡಿಇಜಿ ರವೀಂದ್ರ, ಪಿಡಿಜಿ ರಮೇಶ್ ವಂಗಲ, ರೋಟರಿ ಟ್ರಸ್ಟ್ ಅಧ್ಯಕ್ಷ ಪಿ.ಎಸ್ ಶಂಭುಲಿಂಗಪ್ಪ, ರೋಟರಿ ಕ್ಲಬ್‍ನ ಅಧ್ಯಕ್ಷ ಜಿ.ಎನ್ ವೀರಣ್ಣ, ಎಸ್.ವೀರೇಶ್, ಕೆ.ಎಸ್.ಚಂದ್ರಮೋಹನ್, ಜಯಶ್ರೀ ಷಾ, ತರುಣ್‍ ಷಾ, ಮೂರ್ತಿ, ವೆಂಕಟೇಶ್, ವಿಶ್ವನಾಥ್, ಸೂರ್ಯನಾರಾಯಣ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version