Connect with us

    ದಿವ್ಯಪ್ರಭು ಜಿ.ಆರ್.ಜೆ ಧಾರವಾಡ ಜಿಲ್ಲಾಧಿಕಾರಿಯಾಗಿ ನೇಮಕ

    ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

    ಮುಖ್ಯ ಸುದ್ದಿ

    ದಿವ್ಯಪ್ರಭು ಜಿ.ಆರ್.ಜೆ ಧಾರವಾಡ ಜಿಲ್ಲಾಧಿಕಾರಿಯಾಗಿ ನೇಮಕ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 28 JANUARY 2024

    ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಹೆಸರಾಗಿದ್ದ ದಿವ್ಯಪ್ರಭು ಜಿ.ಆರ್.ಜೆ ಅವರನ್ನು ಧಾರವಾಡ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

    2022 ರಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದ ದಿವ್ಯಪ್ರಭು ಸಮರ್ಥ ಆಡಳಿತದ ಮೂಲಕ ಜಿಲ್ಲೆಯಲ್ಲಿ ಅಲ್ಪ ಅವಧಿಯಲ್ಲೇ ಜನ ಮನ್ನಣೆ ಪಡೆದಿದ್ದರು.

    ಜಿಲ್ಲೆಯ ಆರೂ ತಾಲೂಕುಗಳು ತೀವ್ರ ಬರಪೀಡಿತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ದಿವ್ಯಪ್ರಭು ಪ್ರಮುಖ ಪಾತ್ರ ವಹಿಸಿದ್ದರು.

    ಇದನ್ನೂ ಓದಿ: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ದಿವ್ಯಪ್ರಭು ಜಿ.ಆರ್.ಜೆ

    ಕಳೆದ ವಾರ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಈ ಹಿಂದೆ ವಿಜಯನಗರ ಡಿಸಿಯಾಗಿದ್ದ ಟಿ.ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.

    ಈಗ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ದಿವ್ಯಪ್ರಭು ಜಿ.ಆರ್.ಜೆ ಅವರನ್ನು ನೇಮಕ ಮಾಡಲಾಗಿದೆ.

    ಧಾರವಾಡದಿಂದ ವರ್ಗಾವಣೆಯಾದ ಗುರುದತ್ ಹೆಗಡೆ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿರುವ ಸರ್ಕಾರ, ಶಿವಮೊಗ್ಗ ಡಿಸಿಯಾಗಿದ್ದ ಡಾ.ಆರ್.ಸೆಲ್ವಮಣಿ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಿದೆ.

    ಚಿತ್ರದುರ್ಗ ಜಿಲ್ಲೆಯಲ್ಲಿ ಯುವ ಹಾಗೂ ವಿಶೇಷ ಮತದಾರರನ್ನು ನೊಂದಣಿ ಮಾಡುವ ಮೂಲಕ ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top