By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಲೋಕಸಭೆ ಚುನಾವಣೆಗೆ ಈ ಸಲ ಅಭ್ಯರ್ಥಿಗೆ ವೆಚ್ಚದ ಮಿತಿ ಎಷ್ಟು ಗೊತ್ತಾ ?
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಲೋಕಸಭೆ ಚುನಾವಣೆಗೆ ಈ ಸಲ ಅಭ್ಯರ್ಥಿಗೆ ವೆಚ್ಚದ ಮಿತಿ ಎಷ್ಟು ಗೊತ್ತಾ ?

ಮುಖ್ಯ ಸುದ್ದಿ

ಲೋಕಸಭೆ ಚುನಾವಣೆಗೆ ಈ ಸಲ ಅಭ್ಯರ್ಥಿಗೆ ವೆಚ್ಚದ ಮಿತಿ ಎಷ್ಟು ಗೊತ್ತಾ ?

chitradurganews.com
Last updated: 10 January 2024 16:33
chitradurganews.com
1 year ago
Share
ಲೋಕಸಭಾ ಚುನಾವಣಾ ಖರ್ಚು ವೆಚ್ಚ ತರಬೇತಿ
ಲೋಕಸಭಾ ಚುನಾವಣಾ ಖರ್ಚು ವೆಚ್ಚ ತರಬೇತಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 JANUARY 2024

ಚಿತ್ರದುರ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭ್ಯರ್ಥಿಯ ಚುನಾವಣಾ ವೆಚ್ಚ ಗರಿಷ್ಠ 95 ಲಕ್ಷ ರೂ. ಮೀರುವಂತಿಲ್ಲ ಎಂದು ಜಿಲ್ಲಾ ಚುನಾವಣಾ ವೆಚ್ಚ ಉಸ್ತುವಾರಿ ಕೋಶದ ನೋಡಲ್ ಅಧಿಕಾರಿ ಹಾಗೂ ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಪ್ರಯುಕ್ತ ಜಿಲ್ಲಾ ಚುನಾವಣಾ ವೆಚ್ಚ ಉಸ್ತುವಾರಿ ಕೋಶದ ವತಿಯಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ವೆಚ್ಚ ಅಧಿಕಾರಿಗಳು ಹಾಗೂ ತಂಡದವರಿಗೆ ಲೋಕಸಭಾ ಚುನಾವಣಾ ಖರ್ಚು ವೆಚ್ಚ ತರಬೇತಿಯಲ್ಲಿ ಮಾತನಾಡಿದರು.

ಚುನಾವಣಾ ನಾಮಪತ್ರ ಸಲ್ಲಿಸಿದ ದಿನಾಂಕದಿಂದ ಮತದಾನ ಎಣಿಕೆ ಮುಗಿಯುವ ತನಕ ಆದಂತಹ ಎಲ್ಲಾ ವೆಚ್ಚಗಳನ್ನು ಸಲ್ಲಿಸುವುದು ಅಭ್ಯರ್ಥಿಗಳು ಕರ್ತವ್ಯವಾಗಿದೆ. ಪ್ರತಿ ಅಭ್ಯರ್ಥಿಯ ಚುನಾವಣೆ ವೆಚ್ಚವನ್ನು ಗರಿಷ್ಠ ರೂ.95 ಲಕ್ಷಗಳಿಗೆ ಮಿತಿಗೊಳಿಸಲಾಗಿದೆ. ಅಭ್ಯರ್ಥಿಯು ಈ ಹಣದ ಖರ್ಚು ವೆಚ್ಚಗಳ ನಿರ್ವಹಣೆಗಾಗಿ ಪ್ರತ್ಯೇಕ ಬ್ಯಾಂಕ್ ಖಾತೆಯನ್ನು ತೆರೆಬೇಕು. ಚುನಾವಣೆ ವೆಚ್ಚಗಳನ್ನು ಬ್ಯಾಂಕ್ ಮೂಲಕವೇ ಪಾವತಿಸಬೇಕು.

ಇದನ್ನೂ ಓದಿ: ಮಗನನ್ನು ಮುದ್ದಾಡಿ ಬಿಕ್ಕಿ ಬಿಕ್ಕಿ ಅತ್ತ ವೆಂಕಟರಮಣ | ಪುತ್ರನಿಗೆ ಕಣ್ಣೀರ ವಿದಾಯ

ಅಭ್ಯರ್ಥಿಗಳು ಕೈಗೊಳ್ಳುವ ಚುನಾವಣೆ ಪ್ರಚಾರ, ಬಳಸುವ ವಾಹನ, ಬಿತ್ತಿ ಪತ್ರಗಳು, ಸಭೆ, ಸಮಾರಂಭ, ಸ್ಟಾರ್ ಪ್ರಚಾರಕರು. ಸಭೆಯ ವೇದಿಕೆ, ಊಟ ಉಪಹಾರದ ಸೇರಿದಂತೆ ಇತರೆ ಎಲ್ಲಾ ವೆಚ್ಚಗಳನ್ನು ಚಿತ್ರಿಕರಿಸಿ ಕಳಿಸಿರುವ ಮಾಹಿತಿ ಆಧಾರದ ಮೇಲೆ ದಾಖಲಿಸಬೇಕು. ಅಭ್ಯರ್ಥಿಗಳು ಚುನಾವಣೆ ವೆಚ್ಚದ ಮಾಹಿತಿಯನ್ನು ಕಾಲಕಾಲಕ್ಕೆ ಚುನಾವಣೆ ವೆಚ್ಚ ಕೋಶಕ್ಕೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಸಭೆ ಅಧ್ಯಕ್ಷತೆ ವಹಿಸಿ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ವೆಚ್ಚ ಅಧಿಕಾರಿಗಳು ಅಭ್ಯರ್ಥಿಗಳ ಚುನಾವಣೆ ವೆಚ್ಚವನ್ನು ಕರಾರುವಕ್ಕಾಗಿ ದಾಖಲಿಸಬೇಕು ಎಂದರು.
ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ ನ್ಯಾಯಸಮ್ಮತ, ಶಾಂತಿಯುತ ಹಾಗೂ ಯಶಸ್ವಿಯಾಗಿ ನಡೆಸಲು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ತರಬೇತಿ ನಿರ್ವಹಣಾ ಕೋಶದ ನೋಡಲ್ ಅಧಿಕಾರಿ ಜಗದೀಶ್ ಹೆಬ್ಬಳ್ಳಿ, ಚುನಾವಣೆ ಶಿರಸ್ತೇದಾರ ಮಲ್ಲಿಕಾರ್ಜುನ್ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರದ ಸಹಾಯಕ ವೆಚ್ಚ ಅಧಿಕಾರಿಗಳು ಹಾಗೂ ತಂಡಗಳ ಸದಸ್ಯರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CandidateChitradurgaCostLok Sabha Electionsಅಭ್ಯರ್ಥಿಚಿತ್ರದುರ್ಗಲೋಕಸಭೆ ಚುನಾವಣೆವೆಚ್ಚ
Share This Article
Facebook Email Print
Previous Article ಮಗನನ್ನು ಮುದ್ದಾಡಿ ಬಿಕ್ಕಿ ಬಿಕ್ಕಿ ಅತ್ತ ವೆಂಕಟರಮಣ | ಪುತ್ರನಿಗೆ ಕಣ್ಣೀರ ವಿದಾಯ
Next Article arecanut price list ಅರ್ಧ ಲಕ್ಷದತ್ತ ಅಡಿಕೆ ದರ ದಾಪುಗಾಲು | ನಿರಂತರ ಏರಿಕೆ ಕಾಣುತ್ತಿರುವ ರಾಶಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up