By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    3 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    3 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    3 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    15 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    14 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    2 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    3 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಅಯೋಧ್ಯೆ ತಲುಪಿದ ಕೋಟೆನಾಡಿನ ಮಠಾಧೀಶರು ಏನು ಹೇಳಿದ್ದಾರೆ ಗೊತ್ತಾ..?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಯೋಧ್ಯೆ ತಲುಪಿದ ಕೋಟೆನಾಡಿನ ಮಠಾಧೀಶರು ಏನು ಹೇಳಿದ್ದಾರೆ ಗೊತ್ತಾ..?

chitradurganews.com
Last updated: 21 January 2024 15:59
chitradurganews.com
3 years ago
Share
ಅಯೋಧ್ಯೆ ತಲುಪಿದ ಕೋಟೆನಾಡಿನ ಮಠಾಧೀಶರು
ಅಯೋಧ್ಯೆ ತಲುಪಿದ ಕೋಟೆನಾಡಿನ ಮಠಾಧೀಶರು
SHARE

CHITRADURGA NEWS | 2 JANUARY 2024

ಚಿತ್ರದುರ್ಗ: ಅಯೋಧ್ಯೆಯಲ್ಲಿ ಬಾಲರಾಮನಿಗೆ ನಾಳೆ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಹಳ್ಳಿ ಹಳ್ಳಿಗಳಲ್ಲೂ ರಾಮೋತ್ಸವ ನಡೆಯುತ್ತಿದೆ.

ಅಯೋಧ್ಯೆಯಲ್ಲಂತೂ ಹಿಂದೆಂದೂ ಕಂಡು ಕೇಳರಿಯದಷ್ಟು ಸಂಭ್ರಮ ಮನೆ ಮಾಡಿದ್ದು, ನಾಡಿನ ಸಾವಿರಾರು ಸಾಧು ಸಂತರು, ಗಣ್ಯರು ಅಯೋಧ್ಯೆಯಲ್ಲಿ ಬೀಡು ಬಿಟ್ಟಿದ್ದಾರೆ.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ನಾಲ್ವರು ಹಾಗೂ ಪಕ್ಕದ ದಾವಣಗೆರೆ, ಹಾವೇರಿ ಶ್ರೀಗಳು ಸೇರಿದಂತೆ ಒಟ್ಟು ಏಳು ಜನ ಮಠಾಧೀಶರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಗೆ ತೆರಳಿದ ಕೋಟೆನಾಡಿನ ಮಠಾಧೀಶರು

ಅಯೋಧ್ಯೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ನಾಡಿನ ಮಠಾಧೀಶರು ನಾಡಿಗೆ ಸಂದೇಶ ರವಾನಿಸಿದ್ದಾರೆ. ಯಾವ ಮಠಾಧೀಶರು ಏನು ಹೇಳಿದ್ದಾರೆ ಪೂರ್ಣ ವಿವರ ಇಲ್ಲಿದೆ ನೋಡಿ..

ಹೊಸದುರ್ಗ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ

ಹನುಮನ ನಾಡಿನಿಂದ ರಾಮನ ನಾಡಿಗೆ ಬಂದಿದ್ದೇವೆ. ನಮ್ಮ ಜೀವನದಲ್ಲಿ ನಾವು ಗಮನಿಸಿದಂತೆ ಭಾರತೀಯರು ಇಷ್ಟೊಂದು ಸಂಭ್ರಮವನ್ನು ಎಂದೂ ಕಂಡಿರಲಿಲ್ಲ. ಅಯೋಧ್ಯೆಯ ಪ್ರತಿ ಕಲ್ಲು, ಗಲ್ಲಿ, ಮರ, ಮನೆ ಎಲ್ಲವೂ ರಾಮನ ಜಪ ಮಾಡುತ್ತಿದೆ. ಈ ಸಂಭ್ರಮವೇ ಸೌಹಾರ್ಧತೆಗೆ ಸಾಕ್ಷಿಯಾಗಿದೆ. ಈ ಕ್ಷಣಕ್ಕಾಗಿ ಲಕ್ಷಾಂತರ ಜನ ಹೋರಾಟ ಮಾಡಿದ್ದಾರೆ, ಸಾವಿರಾರು ಜನ ಬಲಿದಾನ ಮಾಡಿದ್ದಾರೆ. ಅವರೆಲ್ಲರಿಗೂ ಈ ಸಂದರ್ಭದಲ್ಲಿ ನಮ್ಮ ಸ್ಮರಣೆಯಿದೆ.

ಇದೊಂದು ಐತಿಹಾಸಿಕ ಕ್ಷಣ. ಭಾರತೀಯರ ಧಾರ್ಮಿಕ ಅಸ್ಮಿತೆಯನ್ನು ಉಳಿಸುವ ಕೆಲಸವನ್ನು ಸಾಧು ಸಂತರು, ಹೋರಾಟಗಾರರು, ಸಂಘ ಪರಿವಾರ ಮಾಡಿದೆ. ಇದಕ್ಕೆ ನಮ್ಮ ಸ್ವಾಮಿಜಿಗಳ ಪರಿವಾರ ಅಭಿನಂದನೆ ಸಲ್ಲಿಸುತ್ತದೆ. ಇದು ನಮ್ಮ ಬದುಕಿನಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥದ್ದು.

ರಾಮ ಸರ್ವಗುಣ ಸಂಪನ್ನ, ಆ ಗುಣಗಳನ್ನು ಭಾರತೀಯರು ಅಳವಡಿಸಿಕೊಂಡಾಗ ಭಾರತ ವಿಶ್ವಗುರು ಆಗಲು ಸಾಧ್ಯ.

ಅಯೋಧ್ಯೆ ತಲುಪಿದ ಕೋಟೆನಾಡಿನ ಮಠಾಧೀಶರು
ಅಯೋಧ್ಯೆ ತಲುಪಿದ ಕೋಟೆನಾಡಿನ ಮಠಾಧೀಶರು

ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ:

ಕನಕದಾಸರು ರಾಮನ ಬಗ್ಗೆ ಕೀರ್ತನೆ ಬರೆದಿದ್ದಾರೆ. ಅಂಗಳದೊಳು ರಾಮನಾಡಿದ, ಚಂದ್ರ ಬೇಕೆಂದು ತಾ ಹಠ ಮಾಡಿದ ಎಂದು ಉಲ್ಲೇಖಿಸಿದ್ದಾರೆ.

ಆ ರಾಮ ಓಡಾಡಿದ ಮಣ್ಣನ್ನು ನಾವೆಲ್ಲಾ ಸ್ಪರ್ಶಿಸಿದ್ದೇವೆ. ಭವ್ಯ ರಾಮ ಮಂದಿರ ನಿರ್ಮಾಣ ಆಗಬೇಕು ಎಂದು ಅಖಂಡ ಭಾರತದ ಜನರ ಸಂಕಲ್ಪ ಇತ್ತು. ಮಂದಿರ ನಿರ್ಮಾಣಕ್ಕಾಗಿ ಸಾಕಷ್ಟು ಜನ ಜೀವದಾನ ಮಾಡಿದ್ದಾರೆ.

ಅವರೆಲ್ಲರ ಕನಸು ನನಸಾಗುತ್ತಿದೆ. ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂದಿರ ಲೋಕಾರ್ಪಣೆಗೆ ಚಾಲನೆ ನೀಡಲಿದ್ದಾರೆ.

ರಾಜನಹಳ್ಳಿ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ:

ಪ್ರಧಾನಿ ನರೇಂದ್ರ ಮೋದಿ ಅವರು ರಾಮನ ದೇವಸ್ಥಾನ ಲೋಕಾರ್ಪಣೆ ಮಾಡುತ್ತಿರುವುದು ಸಂತೋಷದ ವಿಚಾರ. ಈ ಕ್ಷಣಕ್ಕೆ ನಾವೆಲ್ಲಾ ಸಾಕ್ಷಿಗಳಾಗುತ್ತಿದ್ದೇವೆ. ಇಡೀ ದೇಶ ಈ ಕ್ಷಣಕ್ಕಾಗಿ ಕಾಯುತ್ತಿದೆ.

ಮಧುರೆ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ

ಸನಾತನ ಹಿಂದೂ ಧರ್ಮದಲ್ಲಿ ಭಾರತೀಯರು ಅನೇಕ, ಜಾತಿ, ಮತ ಪಂಥಗಳಿದ್ದರೂ, ನಾವೆಲ್ಲಾ ಭಗವಂತನನ್ನು ಆರಾಧಿಸುತ್ತೇವೆ.

ಮರ್ಯಾದಾ ಪುರುಷೋತ್ತಮ ಎಂದು ಪೂಜಿಸುವ ಶ್ರೀರಾಮ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ. ಅವರ ಸದ್ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಇಡೀ ಜಗತ್ತು ಇತ್ತ ನೋಡುತ್ತಿರುವಾಗ ನಾವು ಬೇಧ-ಭಾವ ಮಾಡದೇ ಶ್ರೀರಾಮನನ್ನ ಆರಾಧಿಸಬೇಕು. ಯಾವ ಬೇಧಗಳಿಲ್ಲದೆ ಎಲ್ಲರೂ ಸೇರಿ ಹಬ್ಬದಂತೆ ಆಚರಿಸೋಣ.

ಇದನ್ನೂ ಓದಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಮುಹೂರ್ತದಲ್ಲೇ ಚಿತ್ರದುರ್ಗದ ಮಗುವಿಗೆ ರಾಮನೆಂದು ನಾಮಕರಣ

ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ:

ಒಂದು ಕಾಲದಲ್ಲಿ ಈ ಧರ್ಮದಲ್ಲಿ ತಾರತಮ್ಯ ಇತ್ತು. ಆದರೆ, ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಕ್ರಮೇಣ ಈ ಭಾವನೆ ಕಡಿಮೆ ಆಗುತ್ತಿದೆ. ಎಲ್ಲವನ್ನೂ ಒಂದೇ ದಿನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದರೆ, ಕ್ರಮೇಣ ಬದಲಾವಣೆ ಆಗುತ್ತಿದೆ. ಕಾಲ ಬದಲಾದಂತೆ ಅಂಥಹ ಪರಿಸ್ಥಿತಿ ನಿರ್ನಾಮವಾಗಿ ನಾವು ಕೂಡಾ ಸಂವಿಧಾನ ಬದ್ಧವಾಗಿ ಎಲ್ಲ ಹಕ್ಕುಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಹಿಂದುಗಳು, ಭಾರತೀಯರು ಒಟ್ಟಾಗಿ ಬಾಳಬೇಕು ಎನ್ನುವ ವಾತಾವರಣ ನಿರ್ಮಾಣವಾಗುತ್ತಿದೆ. ಶ್ರೀರಾಮ ಮಂದಿರ ಅಂಥಹ ಭಾವನೆ ವ್ಯಕ್ತಪಡಿಸಲು ಸೂಕ್ತ ಸಂದರ್ಭವಾಗಿದೆ.

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ:

ರಾಮನ ವ್ಯಕ್ತಿತ್ವವೇ ಸರ್ವರನ್ನು ಒಳಗೊಂಡ ಸುಭೀಕ್ಷಾ ರಾಜ್ಯ ನಿರ್ಮಾಣ ಮಾಡುವುದು. ಇಲ್ಲಿ ಮೇಲು-ಕೀಳು, ಆದಿ ಅಂತ್ಯಜ ಎನ್ನುವ ಶ್ರೇಣಿಕೃತ ವ್ಯವಸ್ಥೆ ಇರಬಾರದು ಎನ್ನುವ ಕಾರಣಕ್ಕೆ ಮಂದಿರದ ಅರ್ಚಕರಾಗಿಯೂ ಹಿಂದುಳಿದ ಸಮುದಾಯಗಳನ್ನು ಜೋಡಿಸಿರುವುದು ಮಾದರಿ.

ನಮ್ಮಲ್ಲಿ ರಾಮ ಜೋಯಿಸ, ರಾಮ ಭಟ್. ರಾಮಣ್ಣ, ರಾಮಪ್ಪ ಹೀಗೆ ಎಲ್ಲ ಜಾತಿ ವರ್ಗದಲ್ಲೂ ರಾಮನ ಹೆಸರಿನವರಿದ್ದಾರೆ. ಅದೇ ರೀತಿ ರಾಮನ ಆಲಯದಲ್ಲೂ ಸರ್ವರನ್ನು ಒಳಗೊಂಡ ಪುರೋಹಿತರನ್ನು ನೋಡುವುದು ಸಮಂಜಸವಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AyodhyaImmadi Siddarameshwar SwamijiSriSri Kaginele SwamijiSri Madara Channaiah SwamijiSri Purushottamanandpuri SwamijiSri RamaSri Shantaveera SwamijiSri Valmiki Swamijiಅಯೋಧ್ಯೆಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಶ್ರೀಶ್ರೀ ಕಾಗಿನೆಲೆ ಸ್ವಾಮೀಜಿಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಶ್ರೀ ವಾಲ್ಮೀಕಿ ಸ್ವಾಮೀಜಿಶ್ರೀ ಶಾಂತವೀರ ಸ್ವಾಮೀಜಿಶ್ರೀರಾಮ
Share This Article
Facebook Email Print
Previous Article Power outage on May 1 ಜ.21 ಭಾನುವಾರ ವಿದ್ಯುತ್ ವ್ಯತ್ಯಯ
Next Article ಬೃಹತ್ ಗಾತ್ರದ ಬ್ಲಾಕ್ ಗ್ರಾನೈಟ್ ದೇವರ ವಿಗ್ರಹಕ್ಕೆ ಬಳಸುವ ಕಪ್ಪು ಶಿಲೆ ವಶಕ್ಕೆ | ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಬೃಹದಾಕಾರದ ಗ್ರಾನೈಟ್ | ಗಣಿ ಇಲಾಖೆ ಅಧಿಕಾರಿಗಳ ದಾಳಿ
Leave a Comment

Leave a Reply Cancel reply

Your email address will not be published. Required fields are marked *

H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up