CHITRADURGA NEWS | 29 JULY 2024
ಚಿತ್ರದುರ್ಗ: ರೋಗಿಯೊಬ್ಬರ ಆಪರೇಷನ್ಗೆ ಹಣದ ಬೇಡಿಕೆ ಇಟ್ಟು, ಹಣ ಪಡೆಯುತ್ತಿರುವ ವೀಡಿಯೋ ವೈರಲ್ ಆಗಿರುವ ಪ್ರಕರಣದಲ್ಲಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಡಿ.ರಂದೀಪ್ ಈ ಆದೇಶ ಹೊರಡಿಸಿದ್ದು, ಕರ್ನಾಟಕ ಲೋಕಾಯುಕ್ತ ಕಾಯ್ದೆ ಅನ್ವಯ ಭ್ರಷ್ಟಾಚಾರದಲ್ಲಿ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ ಡಾ.ಸಾಲಿ ಮಂಜಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಕ್ರಮ | ಎಫ್ಐಆರ್ ದಾಖಲಿಸಿ
ಅಮಾನತಿನ ಅವಧಿಯಲ್ಲಿ ಜೀವನಾಂಶ ಭತ್ಯಗೆ ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಜುಲೈ 5 ರಂದು ಚಂದ್ರಶೇಖರ್ ಎಂಬುವರು ಚಿಕಿತ್ಸೆಯ ಸಲುವಾಗಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದು, ಕರ್ತವ್ಯದಲ್ಲಿದ್ದ ವೈದ್ಯರಾದ ಡಾ.ಸಾಲಿ ಮಂಜಪ್ಪ, ಪರೀಕ್ಷಿಸಿದ ನಂತರ ಶಸ್ತçಚಿಕಿತ್ಸೆಗಾಗಿ ಒಳರೋಗಿಯಾಗಿ ದಾಖಲು ಮಾಡಿಕೊಳ್ಳುತ್ತಾರೆ.
ಇದನ್ನೂ ಓದಿ: ವಿವಿ ಸಾಗರ ತಲುಪಿದ ನೀರು | ಮದಗದ, ಅಯ್ಯಣ್ಣನ ಕೆರೆ ಕೋಡಿ | ವೇದಾವತಿ ನದಿಗೆ ಜೀವಕಳೆ
ಜು.6 ರಂದು ಶಸ್ತçಚಿಕಿತ್ಸೆಗೆ ರೋಗಿಯನ್ನು ಕರೆದುಕೊಂಡು ಹೋದಾಗ, ರೋಗಿಯ ಸಂಬAಧಿಕರ ಜೊತೆಗೆ ಸಂಭಾಷಣೆ ನಡೆಸಿ ಹಣ ಪಡೆದಿರುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮಾಧ್ಯಮಗಳು ಸುದ್ದಿ ಬಿತ್ತರಿಸಿದ್ದವು.
ಮೇಲ್ನೋಟಕ್ಕೆ ಕರ್ತವ್ಯಲೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಜಿಲ್ಲಾ ಶಸ್ತçಚಿಕಿತ್ಸಕರು ಜು.22ರಂದು ಕಾರಣ ಕೇಳಿ ನೋಟೀಸ್ ನೀಡಿದ್ದರು. ಡಾ.ಸಾಲಿ ಮಂಜಪ್ಪ ಅವರಿಂದ ವಿವರಣೆ ಪಡೆದು ಸಲ್ಲಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
