
CHITRADURGA NEWS | 21 DECEMBER 2024
ಚಿತ್ರದುರ್ಗ: 2025 ಫೆಬ್ರವರಿ 22 ರಂದು ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ವೈದ್ಯಾಧಿಕಾರಿಗಳ ಸಮ್ಮೇಳನದ ಹಿನ್ನೆಲೆಯಲ್ಲಿ ಸಮ್ಮೇಳನ ಪ್ರತಿನಿಧಿಗಳು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ಇಲ್ಲಿನ ವೈದ್ಯರನ್ನು ಆಹ್ವಾನ ಮಾಡಿದರು.
ಇದನ್ನೂ ಓದಿ: 129.15 ಅಡಿ ತಲುಪಿದೆ ವಿವಿ ಸಾಗರ ಜಲಾಶಯ ಮಟ್ಟ
ಅನುಭಾವ-25 ಶರಣ ನಾಡಲ್ಲೊಂದು ವೈದ್ಯ ಸಂಗಮ ಎಂಬ ಶಿರ್ಷಿಕೆಯಡಿ ವಿಜಯಪುರದ ವೈದ್ಯರ ಸಂಘದಿಂದ ಈ ಸಮ್ಮೇಳನ ಆಯೋಜಿಸಲಾಗಿದೆ.
ಇಲ್ಲಿನ ನಗರದ ಸ್ಟೇಷನ್ ರೋಡ್ನ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ ವೈದ್ಯರ ನೊಂದಣಿ ಕಾರ್ಯ ಮಾಡಲಾಯಿತು.
ಇದನ್ನೂ ಓದಿ: ಟೈಯರ್ ಬ್ಲಾಸ್ಟ್ | ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ | ಪ್ರಯಾಣಿಕರು ಬಚಾವ್
ಈ ವೇಳೆ ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ.ಆನಂದ ಪ್ರಕಾಶ್, ವೈದ್ಯರಾದ ಡಾ.ಪ್ರಕಾಶ್, ಡಾ.ದೇವರಾಜ್, ಡಾ.ವಿಜಯ್ ಕುಮಾರ್, ವಿಜಯಪುರದ ಡಾ.ಆಕಿಬ್, ಡಾ.ಸಂಗಮೇಶ್, ಡಾ.ಮಂಜುನಾಥ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

