CHITRADURGA NEWS | 01 JULY 2026
ಚಿತ್ರದುರ್ಗ: ನಗರದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ, ರಾಷ್ಟ್ರೀಯ ವೈದ್ಯರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಇದನ್ನೂ ಓದಿ: ವಿಬಿಜಿರಾಮ್ಜಿ ಯೋಜನೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ | 125 ದಿನ ಉದ್ಯೋಗಾವಕಾಶ | ಜಿ.ಪಂ ಸಿಇಓ ಡಾ.ಆಕಾಶ್
ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ವೈದ್ಯರ ವೇಷಭೂಷಣ ಧರಿಸಿ ತಮ್ಮ ಮುಂದಿನ ದಿನಗಳಲ್ಲಿ ಡಾಕ್ಟರ್ ಆಗುವ ಕನಸಿಸ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡರು.
ಶೈಕ್ಷಣಿಕ ನಿರ್ದೇಶಕ ಸಿ.ಡಿ.ಸಂಪತ್ ಕುಮಾರ್ ಮಾತನಾಡಿ, ಕನಸು ಕಾಣುವ ವಯಸ್ಸಿನಲ್ಲಿ ಕನಸು ಕಂಡು ಅದನ್ನು ನನಸು ಮಾಡಿಕೊಳ್ಳಲು ಶ್ರಮ ಪಟ್ಟು ಓದಬೇಕು ಎಂದು ಹೇಳಿದರು.
ಪ್ರಾಥಮಿಕ ವಿಭಾಗದ ಸಂಯೋಜಕರಾದ ರಾಜೇಶ್ವರಿ ಬಸವರಾಜಯ್ಯ ಅವರು ಮುದ್ದು ಮಕ್ಕಳಿಗೆ ಮಾರ್ಗದರ್ಶನ ಮಾಡಿದರು.
ಇದನ್ನೂ ಓದಿ: ಸದ್ಗುರು ಜೊತೆ ಕಾರು ಚಲಾಯಿಸಿದ ಮಾದಾರ ಚನ್ನಯ್ಯ ಶ್ರೀ
ಸಂಸ್ಥೆಯ ಆಡಳಿತಾಧಿಕಾರಿಗಳಾದ ಚಂದ್ರಕಲಾ ಚಂದ್ರಪ್ಪ, ಮುಖ್ಯ ಕಾರ್ಯ ನಿರ್ವಣಾಧಿಕಾರಿ ರಘುಚಂದನ್, ಶಾಲೆಯ ಡೀನ್ ಅನಂತರಾಮ್, ಪ್ರಾಂಶುಪಾಲರಾದ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕರಾದ ಜಾರೀನಾ, ಪಿಆರ್ಓ ರವಿಕುಮಾರ್ ಮತ್ತು ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
