CHITRADURGA NEWS | 04 OCTOBER 2024
ಚಿತ್ರದುರ್ಗ: ಇಡೀ ಪ್ರಪಂಚದಲ್ಲಿ ಕೋವಿಡ್ ಬಂದಾಗ ಭಾರತೀಯ ವೈದ್ಯರು(Doctor’s) ಅತ್ಯುತ್ತಮವಾಗಿ ಕೆಲಸ ಮಾಡಿ ವಿಶ್ವಗುರು ಎಂದು ಹೆಸರಾದರು, ಅದರಿಂದ ನಮ್ಮ ಸೇವೆ ನಿಸ್ವಾರ್ಥದಲ್ಲಿ ಇರಬೇಕು ಎಂದು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳು ತಿಳಿಸಿದರು.
ಕ್ಲಿಕ್ ಮಾಡಿ ಓದಿ: APMC: ಮಾರುಕಟ್ಟೆ ಧಾರಣೆ | ಶೇಂಗಾ, ಮೆಕ್ಕೆಜೋಳದ ಧಾರಣೆ ಎಷ್ಟಿದೆ ?
ನಗರದ ಅನುಪಮ ಇಂಟರ್ನ್ಯಾಷನಲ್ ಸ್ಕೂಲ್ನ ಆವರಣದಲ್ಲಿ ಆಯೋಜಿಸಿದ್ದ ಅನುಪಮ ವೈಭವ-2024 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ವೃತ್ತಿಯು ಶ್ರೇಷ್ಠವಾದದ್ದು, ಗುರುವಾದವನು ಮಾರ್ಗದರ್ಶನ ನೀಡಿ ದೇಶವನ್ನು ಕಟ್ಟುವ ಕೆಲಸಮಾಡುವುದು ಆತನ ಜವಾಬ್ದಾರಿಯಾಗಿರುತ್ತದೆ ಎಂದು ಡೀನ್ ಭಗವಾನ್ ಹೇಳಿದರು.
ಕ್ಲಿಕ್ ಮಾಡಿ ಓದಿ: ಖಾಯಾಂ ಉಪನ್ಯಾಸಕರ ನೇಮಕಾತಿಗೆ ABVP ಆಗ್ರಹ
ಕಾರ್ಯಕ್ರಮದಲ್ಲಿ ಮಾದಾರ ಚೆನ್ನಯ್ಯ ಶ್ರೀಗಳು, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕ ಎಸ್.ಕೆ. ಬಸವರಾಜನ್, ಕೆ.ಸಿ. ನಾಗರಾಜು, ಸಂಸ್ಥೆಯ ಅಧ್ಯಕ್ಷ ಎಸ್.ಭಾಸ್ಕರ್, ಆಡಳಿತ ಮಂಡಳಿ ಪ್ರಾಚಾರ್ಯ ಸಿ.ಡಿ. ಸಂಪತ್ಕುಮಾರ್, ಡಾಕ್ಟರ್ ರುದ್ರಮುನಿ, ಪುನೀತ್ಮಣ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number