By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಗ್ರಂಥಾಲಯಕ್ಕೆ ತಾಂತ್ರಿಕ ಪುಸ್ತಕಗಳ ದೇಣಿಗೆ | ಓದುವ ಅಭ್ಯಾಸ ನಿಲ್ಲದಿರಲಿ | ಬಸವರಾಜ ಕೊಳ್ಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಗ್ರಂಥಾಲಯಕ್ಕೆ ತಾಂತ್ರಿಕ ಪುಸ್ತಕಗಳ ದೇಣಿಗೆ | ಓದುವ ಅಭ್ಯಾಸ ನಿಲ್ಲದಿರಲಿ | ಬಸವರಾಜ ಕೊಳ್ಳಿ

ಮುಖ್ಯ ಸುದ್ದಿ

ಗ್ರಂಥಾಲಯಕ್ಕೆ ತಾಂತ್ರಿಕ ಪುಸ್ತಕಗಳ ದೇಣಿಗೆ | ಓದುವ ಅಭ್ಯಾಸ ನಿಲ್ಲದಿರಲಿ | ಬಸವರಾಜ ಕೊಳ್ಳಿ

News Desk Chitradurga News
Last updated: 28 January 2025 20:09
News Desk Chitradurga News
5 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 January 2025

ಚಿತ್ರದುರ್ಗ: ನಿರಂತರವಾಗಿ ಪುಸ್ತಕಗಳನ್ನು ಓದುವುದರಿಂದ ಜ್ಞಾನ ಹೆಚ್ಚಿಸಿಕೊಳ್ಳಬಹುದೆಂದು ಕೃಷ್ಣರಾಜೇಂದ್ರ ಗ್ರಂಥಾಲಯಾಧಿಕಾರಿ ಬಸವರಾಜ್ ಕೊಳ್ಳಿ ತಿಳಿಸಿದರು.

Also Read: ಚಿತ್ರದುರ್ಗದಲ್ಲಿ ರಸ್ತೆ ಅಗಲೀಕರಣ ಬೇಡ | ನಗರದ ವಿಸ್ತರಣೆಗೆ ಒತ್ತು ಕೊಡಿ | AAP ಜಗದೀಶ್

ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದಿಂದ ತಾಂತ್ರಿಕ ಪದವಿಯ ಹಲವು ಪುಸ್ತಕಗಳನ್ನು ಸ್ವೀಕರಿಸಿ ಮಾತನಾಡಿದರು.

ಸರ್ಕಾರಿ ನೌಕರಿ ಸಿಕ್ಕ ಕೂಡಲೆ ಓದುವುದನ್ನೆ ನಿಲ್ಲಿಸಬಾರದು. ಪುಸ್ತಕ ಓದುವುದಕ್ಕೆ ವಯಸ್ಸಿನ ಮಿತಿಯಿಲ್ಲ. ಎಲ್ಲಾ ವಯೋಮಾನದವರು ಪುಸ್ತಕಗಳನ್ನು ಓದುವುದರಿಂದ ಸಾಕಷ್ಟು ವಿಚಾರಗಳು ದೊರಕುತ್ತವೆ. ಗ್ರಂಥಾಲಯಗಳಲ್ಲಿ ಅನೇಕ ಮಹತ್ವದ ಪುಸ್ತಕಗಳಿರುವುದು ಬಡ ಮಕ್ಕಳ ಓದಿಗೆ ನೆರವಾಗುತ್ತಿದೆ ಎಂದು ಹೇಳಿದರು.

1925ರಲ್ಲಿ ಆರಂಭಗೊಂಡ ಕೃಷ್ಣರಾಜೇಂದ್ರ ಗ್ರಂಥಾಲಯಕ್ಕೆ ಶತಮಾನದ ಇತಿಹಾಸವಿರುವುದರಿಂದ ವಿಜೃಂಭಣೆಯಿAದ ಶತಮಾನೋತ್ಸವ ಆಚರಿಸಲಾಗುವುದು. ಚಿತ್ರದುರ್ಗ, ತುಮಕೂರು, ಬಳ್ಳಾರಿಗೆ ಗಣಿ ಹಣ ಬಂದಿದೆ. ಅದರಲ್ಲಿ ಚಿತ್ರದುರ್ಗದ ಗ್ರಂಥಾಲಯಕ್ಕೆ ಹತ್ತು ಕೋಟಿ 29 ಲಕ್ಷ ರೂ. ಮಂಜೂರಾಗಿದೆ. ಚಿತ್ರದುರ್ಗ ನಗರವೊಂದರಲ್ಲಿಯೇ ಆರು ಕೋಟಿ ರೂ.ಗಳನ್ನು ಖರ್ಚು ಮಾಡಿ ಬಯಲು ಗ್ರಂಥಾಲಯ, ಹೈಟೆಕ್ ಶೌಚಾಲಯಗಳನ್ನು ನಿರ್ಮಿಸಲಾಗುವುದು.

Also Read: ಗಾಂಧಿ ವೃತ್ತದಿಂದ ಮೆದೇಹಳ್ಳಿ, ದಾವಣಗೆರೆ ರಸ್ತೆಗಳನ್ನು ವಿಸ್ತರಿಸಿ

ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಗ್ರಂಥಾಲಯಕ್ಕೆ ಗಣಿ ಹಣವನ್ನು ಬಳಸಲಾಗುವುದು ಎಂದರು.

ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದ ಅಧ್ಯಕ್ಷ ಪಿ.ಎಲ್.ಸುರೇಶ್‌ರಾಜು ಮಾತನಾಡಿ, ಎಂ.ಎಸ್.ಗಿರೀಶ್ ಅವರ ಪುತ್ರ ಓದಿ ತಾಂತ್ರಿಕ ಪದವಿ ಪಡೆದ ಪುಸ್ತಕವನ್ನು ಗ್ರಂಥಾಲಯಕ್ಕೆ ನೀಡಲಾಗಿದೆ. ಮುಂದಿನ ಮೂವತ್ತು ದಿನಗಳಲ್ಲಿ ನಮ್ಮ ಸಂಘದಿಂದ ಒಂದು ಸಾವಿರ ಪುಸ್ತಕಗಳನ್ನು ನೀಡಲಾಗುವುದು. ಇದರಿಂದ ಬಡ ಮಕ್ಕಳ ಓದಿಗೆ ಅನುಕೂಲವಾಗಲಿ ಎಂದು ಹೇಳಿದರು.

ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದ ಕಾರ್ಯದರ್ಶಿ ಡಿ.ಆರ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಪಿ.ಎನ್.ಮೋಹನ್‌ಕುಮಾರ್ ಗುಪ್ತ, ಪುಸ್ತಕ ದಾನಿ ಎಂ.ಎಸ್.ಗಿರೀಶ್, ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಅಬುಸಾಲೇಹ ಹಾಜರಿದ್ದರು.

Also Read: ಅಡಿಕೆ ಧಾರಣೆ | ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಹೆಚ್ಚಳ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesKannada Latest NewsKannada NewsKrishnarajendra LibraryLibraryTechnical Booksಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷ್ಣರಾಜೇಂದ್ರ ಗ್ರಂಥಾಲಯಗ್ರಂಥಾಲಯಚಿತ್ರದುರ್ಗಚಿತ್ರದುರ್ಗ ನ್ಯೂಸ್ತಾಂತ್ರಿಕ ಪುಸ್ತಕ
Share This Article
Facebook Email Print
Previous Article ಗಾಂಧಿ ವೃತ್ತದಿಂದ ಮೆದೇಹಳ್ಳಿ, ದಾವಣಗೆರೆ ರಸ್ತೆಗಳನ್ನು ವಿಸ್ತರಿಸಿ
Next Article Bike Theft arret molakalmuru police ಅಂತಾರಾಜ್ಯ ಬೈಕ್ ಕಳ್ಳನ ಬಂಧಿಸಿದ ಪೊಲೀಸರು | 10 ಬೈಕುಗಳು ಜಪ್ತಿ
Leave a Comment

Leave a Reply Cancel reply

Your email address will not be published. Required fields are marked *

ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up