CHITRADURGA NEWS | 28 January 2025
ಚಿತ್ರದುರ್ಗ: ನಿರಂತರವಾಗಿ ಪುಸ್ತಕಗಳನ್ನು ಓದುವುದರಿಂದ ಜ್ಞಾನ ಹೆಚ್ಚಿಸಿಕೊಳ್ಳಬಹುದೆಂದು ಕೃಷ್ಣರಾಜೇಂದ್ರ ಗ್ರಂಥಾಲಯಾಧಿಕಾರಿ ಬಸವರಾಜ್ ಕೊಳ್ಳಿ ತಿಳಿಸಿದರು.
Also Read: ಚಿತ್ರದುರ್ಗದಲ್ಲಿ ರಸ್ತೆ ಅಗಲೀಕರಣ ಬೇಡ | ನಗರದ ವಿಸ್ತರಣೆಗೆ ಒತ್ತು ಕೊಡಿ | AAP ಜಗದೀಶ್

ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದಿಂದ ತಾಂತ್ರಿಕ ಪದವಿಯ ಹಲವು ಪುಸ್ತಕಗಳನ್ನು ಸ್ವೀಕರಿಸಿ ಮಾತನಾಡಿದರು.
ಸರ್ಕಾರಿ ನೌಕರಿ ಸಿಕ್ಕ ಕೂಡಲೆ ಓದುವುದನ್ನೆ ನಿಲ್ಲಿಸಬಾರದು. ಪುಸ್ತಕ ಓದುವುದಕ್ಕೆ ವಯಸ್ಸಿನ ಮಿತಿಯಿಲ್ಲ. ಎಲ್ಲಾ ವಯೋಮಾನದವರು ಪುಸ್ತಕಗಳನ್ನು ಓದುವುದರಿಂದ ಸಾಕಷ್ಟು ವಿಚಾರಗಳು ದೊರಕುತ್ತವೆ. ಗ್ರಂಥಾಲಯಗಳಲ್ಲಿ ಅನೇಕ ಮಹತ್ವದ ಪುಸ್ತಕಗಳಿರುವುದು ಬಡ ಮಕ್ಕಳ ಓದಿಗೆ ನೆರವಾಗುತ್ತಿದೆ ಎಂದು ಹೇಳಿದರು.
1925ರಲ್ಲಿ ಆರಂಭಗೊಂಡ ಕೃಷ್ಣರಾಜೇಂದ್ರ ಗ್ರಂಥಾಲಯಕ್ಕೆ ಶತಮಾನದ ಇತಿಹಾಸವಿರುವುದರಿಂದ ವಿಜೃಂಭಣೆಯಿAದ ಶತಮಾನೋತ್ಸವ ಆಚರಿಸಲಾಗುವುದು. ಚಿತ್ರದುರ್ಗ, ತುಮಕೂರು, ಬಳ್ಳಾರಿಗೆ ಗಣಿ ಹಣ ಬಂದಿದೆ. ಅದರಲ್ಲಿ ಚಿತ್ರದುರ್ಗದ ಗ್ರಂಥಾಲಯಕ್ಕೆ ಹತ್ತು ಕೋಟಿ 29 ಲಕ್ಷ ರೂ. ಮಂಜೂರಾಗಿದೆ. ಚಿತ್ರದುರ್ಗ ನಗರವೊಂದರಲ್ಲಿಯೇ ಆರು ಕೋಟಿ ರೂ.ಗಳನ್ನು ಖರ್ಚು ಮಾಡಿ ಬಯಲು ಗ್ರಂಥಾಲಯ, ಹೈಟೆಕ್ ಶೌಚಾಲಯಗಳನ್ನು ನಿರ್ಮಿಸಲಾಗುವುದು.
Also Read: ಗಾಂಧಿ ವೃತ್ತದಿಂದ ಮೆದೇಹಳ್ಳಿ, ದಾವಣಗೆರೆ ರಸ್ತೆಗಳನ್ನು ವಿಸ್ತರಿಸಿ
ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಗ್ರಂಥಾಲಯಕ್ಕೆ ಗಣಿ ಹಣವನ್ನು ಬಳಸಲಾಗುವುದು ಎಂದರು.
ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದ ಅಧ್ಯಕ್ಷ ಪಿ.ಎಲ್.ಸುರೇಶ್ರಾಜು ಮಾತನಾಡಿ, ಎಂ.ಎಸ್.ಗಿರೀಶ್ ಅವರ ಪುತ್ರ ಓದಿ ತಾಂತ್ರಿಕ ಪದವಿ ಪಡೆದ ಪುಸ್ತಕವನ್ನು ಗ್ರಂಥಾಲಯಕ್ಕೆ ನೀಡಲಾಗಿದೆ. ಮುಂದಿನ ಮೂವತ್ತು ದಿನಗಳಲ್ಲಿ ನಮ್ಮ ಸಂಘದಿಂದ ಒಂದು ಸಾವಿರ ಪುಸ್ತಕಗಳನ್ನು ನೀಡಲಾಗುವುದು. ಇದರಿಂದ ಬಡ ಮಕ್ಕಳ ಓದಿಗೆ ಅನುಕೂಲವಾಗಲಿ ಎಂದು ಹೇಳಿದರು.
ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದ ಕಾರ್ಯದರ್ಶಿ ಡಿ.ಆರ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಪಿ.ಎನ್.ಮೋಹನ್ಕುಮಾರ್ ಗುಪ್ತ, ಪುಸ್ತಕ ದಾನಿ ಎಂ.ಎಸ್.ಗಿರೀಶ್, ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಅಬುಸಾಲೇಹ ಹಾಜರಿದ್ದರು.
Also Read: ಅಡಿಕೆ ಧಾರಣೆ | ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಹೆಚ್ಚಳ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
