ಅನಿರೀಕ್ಷಿತ ಸೋಲಿಗೆ ಎದೆಗುಂದಬೇಡಿ | ಮಾಜಿ ಸಚಿವ ಎಚ್‌.ಆಂಜನೇಯ

ಎಚ್‌.ಆಂಜನೇಯ

CHITRADURGA NEWS | 05 JUNE 2024
ಚಿತ್ರದುರ್ಗ:‌ ಚುನಾವಣೆಗಳಲ್ಲಿ ಸೋಲು-ಗೆಲುವು ಸಹಜ. ಆದರೆ, ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪನವರ ಸೋಲು ಅನಿರೀಕ್ಷಿತ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆಘಾತ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾದ ಬಳಿಕ ಪತ್ರಿಕಾ ಹೇಳಿಕೆ ನೀಡಿ, ‘ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅನ್ಯ ಪಕ್ಷದವರೂ ಮೆಚ್ಚುವಂತಹ ಗುಣ ಸ್ವಭಾವ ಹೊಂದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಪರಾಭವಗೊಳ್ಳುವ ನಿರೀಕ್ಷೆ ಇರಲಿಲ್ಲ’ ಎಂದಿದ್ದಾರೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗಕ್ಕೆ ಮುಂಗಾರು ಮಳೆ ಸಂಭ್ರಮ | ತುಂಬಿ ಹರಿದ ಹಳ್ಳಕೊಳ್ಳ

‘ಎಲ್ಲ ಮತ ಕ್ಷೇತ್ರದಲ್ಲಿ ಸಂಪೂರ್ಣ ಗೆಲ್ಲುವ ವಾತಾವರಣವಿತ್ತು. ಜಿಲ್ಲಾ ಸಚಿವರು ಸೇರಿದಂತೆ ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರು ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದರು. ಆದರೂ ಪರಾಭವಗೊಂಡಿದ್ದೇವೆ. ಅನಿರೀಕ್ಷಿತ ಸೋಲಿನಿಂದ ಮುಖಂಡರಿಗೆ, ಕಾರ್ಯಕರ್ತರಿಗೆ ನೋವಾಗಿರುವುದು ಸಹಜ. ಯಾರೂ ಎದೆಗುಂದುವ ಅವಶ್ಯಕತೆ ಇಲ್ಲ. ಸುಮಾರು 6 ಲಕ್ಷಕ್ಕೂ ಅಧಿಕ ಮತಗಳನ್ನು ಬಿ.ಎನ್.ಚಂದ್ರಪ್ಪನವರಿಗೆ ಮತಚಲಾವಣೆ ಆಗಿವೆ. ಇಷ್ಟೊಂದು ಮತನೀಡಿದ ಮತದಾರರೆಲ್ಲರಿಗೂ ಕೃತಜ್ಞತೆ ಸಲ್ಲಿಸೋಣ’ ಎಂದು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version