CHITRADURGA NEWS | 28 JANUARY 2025
ಚಿತ್ರದುರ್ಗ: ನಗರದಲ್ಲಿ ರಸ್ತೆ ಅಗಲೀಕರಣ ಕಯ ಬಿಟ್ಟು, ನಗರವನ್ನು ವಿಸ್ತರಿಸಲು ಯೋಜನೆ ರೂಪಿಸಿ ಎಂದು ಎಎಪಿ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಹೇಳಿದರು.
ಪತ್ರಿಕಾ ಭವನದಲ್ಕಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 300-400 ಕೋಟಿ ವೆಚ್ಚ ಮಾಡಿ ನಗರದ ರಸ್ತೆ ಅಗಲೀಕರಣ ಮಾಡುವುದರಿಂದ ಜನರಿಗೆ ಸಂಕಷ್ಟ ತಪ್ಪುವುದಿಲ್ಲ ಎಂದರು.

ನಗರವನ್ನು ವಿಸ್ತರಣೆ ಮಾಡುವುದರಿಂದ ಸಾಕಷ್ಟು ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ನಗರದ ಹೊರ ಭಾಗದಲ್ಲಿ ಹೊಸ ಡಿಸಿ ಕಚೇರಿ ನಿರ್ಮಾಣ ಆಗುತ್ತಿರುವ ಕಡೆಗಳಲ್ಲಿ ಜಾಗ ಪಡೆದು ಬಸ್ ನಿಲ್ದಾಣ ನಿರ್ಮಾಣ ಮಾಡಿದರೆ ನಗರದಲ್ಲಿ ಒತ್ತಡ ಕಡಿಮೆ ಆಗುತ್ತದೆ ಎಂದು ಹೇಳಿದರು.
ನಗರದ ರಸ್ತೆಗಳನ್ನು ಎಷ್ಟೇ ವಿಶಾಲ ಮಾಡಿದರೂ ನಗರದಲ್ಲಿ ಒತ್ತಡ ಕಡಿಮೆ ಆಗುವುದಿಲ್ಲ.
ಶಿವಮೊಗ್ಗ ಮಾದರಿಯಲ್ಲಿ ಖಾಸಗಿ ಬಸ್ ನಿಲ್ದಾಣವನ್ನು ಹೊರಗೆ ಹಾಕಿ, ಈಗ ಇರುವ ಜಾಗದಲ್ಲಿ ಮಾರುಕಟ್ಟೆ ಮಾಡಿದರೆ ಅನುಕೂಲ ಆಗುತ್ತದೆ.
ಸರ್ಕಾರಿ ಕಚೇರಿಗಳು ಹೊರಗೆ ಹೋಗುವುದರಿಂದ ಉದ್ಯೋಗ ಸೃಷ್ಟಿ ಆಗುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳ, ಜನ ಪ್ರತಿನಿಧಿಗಳು ಈ ನಿಟ್ಟಿನಲ್ಲಿ ಆಲೋಚನೆ ಮಾಡಿ ಎಂದು ಮನವಿ ಮಾಡಿದರು.
ಜನ ಫೈನಾನ್ಸ್ ಸಾಲ ಮಾಡಬೇಡಿ:
ಜನ ಸಾಮಾನ್ಯರು ಮೈಕ್ರೋ ಫೈನಾನ್ಸ್ ಮೂಲಕ ಸಾಲ ಪಡೆದು ತೊಂದರೆಗೆ ಸಿಲುಕಬೇಡಿ. ಬದಲಾಗಿ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದರೆ ತೊಂದರೆ ಆಗುವುದಿಲ್ಲ. ಅವರು ಮಾನವೀಯತೆಯಿಂದ ವರ್ತಿಸುತ್ತಾರೆ ಎಂದು ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ರಾಮಣ್ಣ, ತಾಲೂಕು ಅಧ್ಯಕ್ಷ ಚಂದ್ರಯಾನ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number

ವಿಸ್ತರಣೆ ಮಾಡುವುದು ಬಹಳ ಉತ್ತಮ ಎಲ್ಲಾರಿಗೂ ಅನುಕೂಲವಾಗುತ್ತದೆ