
CHITRADURGA NEWS | 29 MARCH 2024
ಚಿತ್ರದುರ್ಗ: ನಗರದ ಐಎಂಎ ಸಭಾಂಗಣದಲ್ಲಿ ಗುರುವಾರ ಔಷಧ ವ್ಯಾಪಾರಸ್ಥರಿಗೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಯ್ದೆ ಕುರಿತು ಮಾಹಿತಿ ನೀಡುವ ಕಾರ್ಯಗಾರ ನಡೆಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಸಿ.ಎಲ್.ಫಾಲಕ್ಷ ಮಾತನಾಡಿ, ಮೆಡಿಕಲ್ ಸ್ಟೋರ್ಗಳಲ್ಲಿ ಆಹಾರ ಪದಾರ್ಥಗಳಾದ ಪ್ರೋಟೀನ್ ಪೌಡರ್, ವಿಟಮಿನ್ ಮಾತ್ರೆ, ಬೋರ್ವಿಟಾ,ಬೂಸ್ಟ್ಗಳಂತಹ ಪದಾರ್ಥಗಳನ್ನು ಮಾರಾಟ ಮಾಡಲು ಕಡ್ಡಾಯವಾಗಿ ಕಾಯ್ಡೆಯಡಿ ನೊಂದಣಿ, ಪರವಾನಿ ಪಡೆಯಬೇಕು ಎಂದರು.
ಇದನ್ನೂ ಓದಿ: ಪ್ರಬಲ ಆಕಾಂಕ್ಷಿ ರಘುಚಂದನ್ ಅಸಮಾಧಾನ
ಕಾರ್ಯಗಾರದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಯ್ದೆ ಕುರಿತು ಕಿರು ಪರಿಚಯ ಮಾಡಿಕೊಟ್ಟು, ವ್ಯಾಪಾರಸ್ಥರ ಸಂದೇಹಗಳಿಗೆ ಉತ್ತರ ನೀಡಿದರು. ನೊಂದಣಿ ಮಾಡಿಸದೇ ಇದ್ದಲ್ಲಿ ಆಗಬಹುದಾದ ತೊಂದರೆ, ಕಾಯ್ದೆಯಡಿ ವಿಧಿಸಬಹುದಾದ ದಂಡ ಹಾಗೂ ಶಿಕ್ಷೆ ಬಗ್ಗೆ ತಿಳಿಸಿದರು.
ಇದನ್ನೂ ಓದಿ: ರೂ.1.12 ಕೋಟಿ ಮೌಲ್ಯದ ಮದ್ಯ ಜಪ್ತಿ
ಈ ಸಂದರ್ಭದಲ್ಲಿ ಆಹಾರ ಸುರಕ್ಷತಾಧಿಕಾರಿ ತಿರುಮಲೇಶ್, ಔಷಧ ನಿಯಂತ್ರಣ ಇಲಾಖೆಯ ಗೀತಾ, ಔಷಧ ವ್ಯಾಪಾರಸ್ಥರ ಸಂಘದ ಮಹಾಂತೇಶ್, ಔಷಧಿ ವ್ಯಾಪಾರಿ ಸಂಘದ ಟಿ.ಡಿ.ಧನಂಜಯ,ರೆಡ್ಡಿ ಸೇರಿದಂತೆ ಮತ್ತಿತರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
